
ನವದೆಹಲಿ: ಸುತ್ತಲೂ ಬೆಂಕಿ ಆವರಿಸಿಕೊಂಡಿದೆ. ನನಗೆ ಉಸಿರಾಡಲೂ ಆಗುತ್ತಿಲ್ಲ. ತಪ್ಪಿಸಿಕೊಳ್ಳಲು ಯಾವ ದಾರಿಯೂ ಉಳಿದಿಲ್ಲ. ನಾನು ಬದುಕಿ ಬರುವುದಿಲ್ಲ. ಮನೆಯವರನ್ನು ಚೆನ್ನಾಗಿ ನೋಡಿಕೋ. ಇದೆಲ್ಲಾ ದೇವರ ಇಚ್ಛೆ.
- ಇದು ದೆಹಲಿಯಲ್ಲಿ ಬೆಂಕಿಗೆ ತುತ್ತಾದ ಕಾರ್ಖಾನೆಯಲ್ಲಿ ಸಾವಿನ ದವಡೆಯಲ್ಲಿ ಸಿಕ್ಕಿದ್ದ ಕಾರ್ಮಿಕನೊಬ್ಬ ಕೊನೆಯದಾಗಿ ಕರೆ ಮಾಡಿ ತನ್ನ ಸಹೋದರನೊಂದಿಗೆ ಅಸಹಾಯಕತೆ ವ್ಯಕ್ತ ಪಡಿಸಿದ ಪರಿ.
ಕಳೆದ ನಾಲ್ಕು ವರ್ಷಗಳಿಂದ ಕಾರ್ಮಿಕನಾಗಿ ದುಡಿಯುತ್ತಿದ್ದ ಉತ್ತರ ಪ್ರದೇಶದ ಬಿಜ್ನೋರ್ನ ಮುಶರ್ರಫ್ ಅಲಿ (30), ತನ್ನ ಸಹೋದರನಿಗೆ ಕರೆ ಮಾಡಿ ಕಾರ್ಖಾನೆಗೆ ಬೆಂಕಿ ಬಿದ್ದ ವಿಚಾರ ತಿಳಿಸಿದ್ದಾನೆ. ಅಲ್ಲದೇ ಬೆಂಕಿ ಪೂರ್ಣವಾಗಿ ಆವರಿಸಿಕೊಂಡಿದ್ದು, ಉಸಿರಾಡಲು ಸಾಧ್ಯವಾಗುತ್ತಿಲ್ಲ. ಬದುಕಿ ಬರುವ ಯಾವ ದಾರಿಯೂ ಕಾಣುತ್ತಿಲ್ಲ ಎಂದು ಅಸಹಾಯಕತೆ ತೋಡಿಕೊಂಡಿದ್ದಾನೆ. ಅಲ್ಲದೇ ನಾನು ಸತ್ತ ಬಳಿಕ ನನ್ನ ಹೆಂಡತಿ ಮಕ್ಕಳನ್ನು ಚೆನ್ನಾಗಿ ನೋಡಿಕೋ. ಇನ್ನು ಮೂರರಿಂದ ನಾಲ್ಕು ನಿಮಿಷ ನಾನು ಬದುಕಿರಬಹುದು. ಇದೆಲ್ಲಾ ದೈವ ಇಚ್ಛೆ. ನಾಳೆ ದೆಹಲಿಗೆ ಬಂದು ನನ್ನ ಮೃತದೇಹವನ್ನು ತೆಗೆದುಕೊಂಡು ಹೋಗಿ ಎಂದು ವಿನಂತಿಸಿದ್ದಾನೆ. ಅಲ್ಲದೆ ನನ್ನ ಸಾವಿನ ವಿಷಯವನ್ನು ಮೊದಲು ಮನೆಯಲ್ಲಿನ ಹಿರಿಯರಿಗೆ ತಿಳಿಸು ಎಂದು ಅಣ್ಣನಲ್ಲಿ ಕೋರಿಕೊಂಡಿದ್ದಾನೆ.
ಈ ವೇಳೆ ಜೀವ ಉಳಿಸಿಕೊಳ್ಳಲು ಯತ್ನಿಸು ಎಂದು ಸೋದರ ತಿಳಿಸಿದ ವೇಳೆ, ಅಂಥ ಯಾವುದೇ ಅವಕಾಶವೂ ಉಳಿದಿಲ್ಲ ಎಂದು ನೋವಿನಿಂದ ಮುಷರ್ರಫ್ ಹೇಳಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ