ಪ್ರಜ್ವಲ್‌ ರೇವಣ್ಣನ ಬಿಟ್ಟುಬಿಡ್ತಾರೆ, ನಮ್ಮಂಥವರನ್ನು ಮಾತ್ರ ಬಂಧಿಸ್ತಾರೆ: ಕೆಸಿಆರ್‌ ಪುತ್ರಿ ಕವಿತಾ

Published : May 08, 2024, 06:38 AM IST
ಪ್ರಜ್ವಲ್‌ ರೇವಣ್ಣನ ಬಿಟ್ಟುಬಿಡ್ತಾರೆ, ನಮ್ಮಂಥವರನ್ನು ಮಾತ್ರ ಬಂಧಿಸ್ತಾರೆ: ಕೆಸಿಆರ್‌ ಪುತ್ರಿ ಕವಿತಾ

ಸಾರಾಂಶ

‘ಕರ್ನಾಟಕದಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ತನ್ನ ಮಿತ್ರಪಕ್ಷವಾದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ರಾಜತಾಂತ್ರಿಕ ಪಾಸ್‌ಪೋರ್ಟ್‌ ನೀಡಿ ವಿದೇಶಕ್ಕೆ ಹಾರಲು ಬಿಜೆಪಿಯು ಬಿಟ್ಟಿದೆ. 

ನವದೆಹಲಿ (ಮೇ.08): ‘ಕರ್ನಾಟಕದಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ತನ್ನ ಮಿತ್ರಪಕ್ಷವಾದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ರಾಜತಾಂತ್ರಿಕ ಪಾಸ್‌ಪೋರ್ಟ್‌ ನೀಡಿ ವಿದೇಶಕ್ಕೆ ಹಾರಲು ಬಿಜೆಪಿಯು ಬಿಟ್ಟಿದೆ. ಆದರೆ ನಮ್ಮಂತಹ ಪ್ರತಿಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಜೈಲಿಗಟ್ಟುತ್ತಿದೆ’ ಎಂದು ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ಅವರ ಪುತ್ರಿ ಹಾಗೂ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಮಂಗಳವಾರ ಆರೋಪಿಸಿದ್ದಾರೆ.

ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿ ಆಗಿರುವ ಕವಿತಾ ಕೋರ್ಟ್‌ ಹೊರಗೆ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪ್ರತಿಪಕ್ಷದವರನ್ನು ಗುರಿಯಾಗಿಸಿಕೊಂಡು ಅವರ ಮೇಲೆ ಕೇಸ್‌ಗಳನ್ನು ಹಾಕುವುದು ಸಲ್ಲದು. ಅದರ ಬದಲು ದೇಶ ಬಿಟ್ಟು ಹೋದಂತಹ ಪ್ರಜ್ವಲ್‌ ರೇವಣ್ಣ ಅಂತವರನ್ನು ಬಂಧಿಸಿ’ ಎಂದು ಕಿಡಿಕಾರಿದರು.ಇತ್ತೀಚೆಗೆ ಪ್ರಜ್ವಲ್‌ ರೇವಣ್ಣ ಅವರು ಲೋಕಸಭೆ ಚುನಾವಣೆಯ 2ನೇ ಹಂತ ಮುಗಿಯುತ್ತಿದ್ದಂತೆಯೇ ಲೈಂಗಿಕ ಹಗರಣದಿಂದ ಪೇಚಿಗೆ ಸಿಲುಕಿದ್ದರು. ಅವರ ಅನೇಕ ರಾಸಲೀಲೆ ವಿಡಿಯೋಗಳು ಬಹಿರಂಗ ಆದ ಕಾರಣ ಎಸ್‌ಐಟಿ ತನಿಖೆಗೆ ಸರ್ಕಾರ ಆದೇಶಿಸಿತ್ತು. 

ಆದರೆ ಚುನಾವಣೆ ಮುಗಿದ ತಕ್ಷಣ ಅವರು ಜರ್ಮನಿಗೆ ರಾಜತಾಂತ್ರಿಕ ವೀಸಾ ಬಳಸಿ ತೆರಳಿದ್ದರು. ಆಗ ಅವರು ಪರಾರಿ ಆಗಲು ಕೇಂದ್ರದ ಬಿಜೆಪಿ ಸರ್ಕಾರ ಶ್ರೀರಕ್ಷೆ ನೀಡಿದೆ ಎಂದು ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್‌ ಆರೋಪಿಸಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು, ‘ಕಾಂಗ್ರೆಸ್‌ ಪಕ್ಷವೇ ಅವರನ್ನು ವಿದೇಶಕ್ಕೆ ಕಳಿಸಿಕೊಟ್ಟಿದೆ’ ಎಂದು ಆರೋಪಿಸಿದ್ದರು. ಇನ್ನು ಕವಿತಾ ಅವರು ದಿಲ್ಲಿ ಅಬಕಾರಿ ಹಗರಣದಲ್ಲಿ ಶಾಮೀಲಾಗಿದ್ದಾರೆ. ತಮಗೆ ಬೇಕಾದ ತೆಲಂಗಾಣ ಮದ್ಯ ಉದ್ಯಮಿಗಳಿಂದ 100 ಕೋಟಿ ರು. ಹಣ ಪಡೆದು ದಿಲ್ಲಿ ಆಪ್‌ ಸರ್ಕಾರದ ಜತೆ ಶಾಮೀಲಾಗಿ ದಿಲ್ಲಿಯಲ್ಲಿ ಬಾರ್‌ ಲೈಸೆನ್ಸ್‌ಗಳನ್ನು ಕೊಡಿಸಿದ್ದಾರೆ ಎಂಬ ಆರೋಪ ಹೊತ್ತಿದ್ದಾರೆ. 

ದಾರಿ ತಪ್ಪಿಸುವ ಜಾಹೀರಾತಿಗೆ ನಟಿಸಿದವರೂ ಹೊಣೆ: ಸುಪ್ರೀಂಕೋರ್ಟ್‌

ಹಾಗೂ ಮಾ.15ರಂದೇ ಬಂಧಿತರಾಗಿದ್ದಾರೆ. ಆದರೆ ತಮ್ಮ ಮೇಲಿನ ಆರೋಪ ಸುಳ್ಳು. ಇದು ಬಿಜೆಪಿ ಸೃಷ್ಟಿ ಎಂಬುದು ಅವರ ಆರೋಪ. ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಕವಿತಾ ಅವರ ತಂದೆ ಕೆಸಿಆರ್‌ ಅವರ ಪಕ್ಷವಾದ ಬಿಆರ್‌ಎಸ್‌ ಹಾಗೂ ಜೆಡಿಎಸ್‌ ನಡುವೆ ಮೈತ್ರಿ ಸಂಬಂಧ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದವು. ಜೆಡಿಎಸ್‌ ನಾಯಕ ಕುಮಾರಸ್ವಾಮಿ ಸೇರಿದಂತೆ ಹಲವು ಶಾಸಕರು ಹೈದರಾಬಾದ್‌ಗೆ ತೆರಳಿ ಕೆಸಿಆರ್ ಜತೆ ಚರ್ಚೆಗಳನ್ನೂ ನಡೆಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..