ಇಂದಿನಿಂದ ಬಜೆಟ್ ಅಧಿವೇಶನ ಆರಂಭ: ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ನಿರೀಕ್ಷೆ

Published : Jan 31, 2025, 07:23 AM IST
ಇಂದಿನಿಂದ ಬಜೆಟ್ ಅಧಿವೇಶನ ಆರಂಭ: ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ನಿರೀಕ್ಷೆ

ಸಾರಾಂಶ

ಶುಕ್ರವಾರದಿಂದ ಆರಂಭವಾಗುವ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿ ಭಾಷಣ, ಆರ್ಥಿಕ ಸಮೀಕ್ಷೆ ಮಂಡನೆ ಮತ್ತು ಫೆ.1 ರಂದು ಬಜೆಟ್ ಮಂಡನೆಯಾಗಲಿದೆ. ವಕ್ಫ್ ತಿದ್ದುಪಡಿ ಸೇರಿದಂತೆ ಹಲವು ಮಸೂದೆಗಳನ್ನು ಮಂಡಿಸಲು ಸರ್ಕಾರ ಯೋಜಿಸಿದೆ. ಸುಗಮ ಕಲಾಪಕ್ಕಾಗಿ ಸರ್ವಪಕ್ಷಗಳ ಸಭೆಯಲ್ಲಿ ಸರ್ಕಾರ ಮನವಿ ಮಾಡಿದೆ.

ನವದೆಹಲಿ: ನರೇಂದ್ರ 3.0 ಸರ್ಕಾರದ ಎರಡನೇ ಪೂರ್ಣಾವಧಿ ಬಜೆಟ್‌ ಅಧಿವೇಶನ ಶುಕ್ರವಾರದಿಂದ ಆರಂಭವಾಗಲಿದೆ. ಬೆಳಿಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ. ಫೆ.1 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್‌ ಮಂಡನೆ ಮಾಡಲಿದ್ದಾರೆ. ಬಜೆಟ್‌ ಅಧಿವೇಶನದ ಮೊದಲ ದಿನವಾದ ಶುಕ್ರವಾರ ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ಭಾಷಣದ ಬಳಿಕ ಆರ್ಥಿಕ ಸಮೀಕ್ಷಾ ವರದಿ ಮಂಡನೆಯಾಗಲಿದೆ. ಜ.31ರಿಂದ ಏಪ್ರಿಲ್‌ 4 ರವರೆಗೆ ಎರಡು ಹಂತಗಳಲ್ಲಿ ಬಜೆಟ್‌ ಅಧಿವೇಶನ ನಡೆಯಲಿದ್ದು, ಮೊದಲ ಹಂತದ ಬಜೆಟ್‌ ಫೆ.13ಕ್ಕೆ ಮುಕ್ತಾಯವಾಗಲಿದೆ. ಎರಡನೇ ಹಂತದ ಬಜೆಟ್‌ ಅಧಿವೇಶನ ಮಾರ್ಚ್‌ 10ರಿಂದ ಆರಂಭವಾಗಿ ಏಪ್ರಿಲ್‌ 4ಕ್ಕೆ ಮುಕ್ತಾಯವಾಗಲಿದೆ.

ಕೇಂದ್ರ ಸರ್ಕಾರವು ಬಜೆಟ್‌ ಅಧಿವೇಶನದಲ್ಲಿ ವಕ್ಫ್‌ ತಿದ್ದುಪಡಿ ಸೇರಿದಂತೆ ಇತರ ಮೂರು ಹೊಸ ಕಾನೂನುಗಳನ್ನು ತರಲು ಮುಂದಾಗಿದೆ. ವಿಮಾನ ವಸ್ತುಗಳ ಮೇಲಿನ ಹಿತಾಸಕ್ತಿಗಳ ರಕ್ಷಣೆ ಮಸೂದೆ, ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯ ಮಸೂದೆ, ವಲಸೆ ಮತ್ತು ವಿದೇಶಿಯ ಮಸೂದೆ ಜಾರಿಗೆ ಮುಂದಾಗಿದೆ. ಜೊತೆಗೆ ಹಿಂದಿನ ಅಧಿವೇಶನದಿಂದ ಉಭಯ ಸದನಗಳಲ್ಲಿ ಇನ್ನು 10 ಮಸೂದೆಗಳು ಬಾಕಿ ಉಳಿದಿದ್ದು ಅವುಗಳನ್ನೂ ಅಂಗೀಕರಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಸುಗಮ ಕಲಾಪಕ್ಕೆ ವಿಪಕ್ಷಗಳಿಗೆ ಸರ್ಕಾರ ಮನವಿ
ಸಂಸತ್ತಿನ ಬಜೆಟ್‌ ಅಧಿವೇಶನದ ಹಿನ್ನೆಲೆಯಲ್ಲಿ ಗುರುವಾರ ಸರ್ವಪಕ್ಷಗಳ ಸಭೆ ನಡೆಯಿತು. ಸಚಿವ ರಾಜ್‌ನಾಥ್‌ ಸಿಂಗ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 36 ಪಕ್ಷಗಳ 52 ನಾಯಕರು ಭಾಗಿಯಾಗಿದ್ದರು.

ಬಜೆಟ್‌ ಅಧಿವೇಶನವು ಫಲಪ್ರದವಾಗಿರುವಂತೆ ನೋಡಿಕೊಳ್ಳುವಂತೆ ಸಂಸದೀಯ ಖಾತೆ ಸಚಿವ ಕಿರಣ್‌ ರಿಜಿಜು ಎಲ್ಲಾ ಪಕ್ಷಗಳ ನಾಯಕರಿಗೂ ಮನವಿ ಮಾಡಿದರು. ಈ ವೇಳೆ ಕುಂಭಮೇಳ ಕಾಲ್ತುಳಿತ, ಹಣದುಬ್ಬರ, ಮೊದಲಾದ ವಿಷಯಗಳ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷಗಳ ಸದಸ್ಯರು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರ, ಕಲಾಪದ ಕಾರ್ಯಸೂಚಿಯನ್ನು ಕಲಾಪ ಸಮಿತಿ ನಿರ್ಧರಿಸಲಿದೆ ಎಂದು ಸ್ಪಷ್ಟಪಡಿಸಿತು.

ವಕ್ಫ್ ತಿದ್ದುಪಡಿ ಮಸೂದೆ ಸ್ಪೀಕರ್ ಓಂ ಬಿರ್ಲಾಗೆ ಹಸ್ತಾಂತರ
ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಗೆ ಅಗತ್ಯ ತಿದ್ದುಪಡಿಗಳನ್ನು ತಂದಿದ್ದ ಸಂಸತ್ತಿನ ಜಂಟಿ ಸಂಸದೀಯ ಸಮಿತಿಯು ತನ್ನ ವರದಿಯನ್ನು ಗುರುವಾರ ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಹಸ್ತಾಂತರಿಸಿದೆ. ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ಓಂ ಬಿರ್ಲಾ ಅವರನ್ನು ಸಂಸತ್ ಭವನದ ಸ್ಪೀಕರ್ ಕಚೇರಿಯಲ್ಲಿ ಭೇಟಿಯಾಗಿ, ಪ್ರಸ್ತಾವಿತ ಕಾನೂನಿನ ತಿದ್ದುಪಡಿ ಮಸೂದೆಯ ಕರಡನ್ನು ಹಸ್ತಾಂತರಿಸಿದರು. ಸರ್ಕಾರ, ಪ್ರಸಕ್ತ ಬಜೆಟ್‌ ಅಧಿವೇಶನದಲ್ಲೇ ಮಸೂದೆ ಮಂಡನೆಯ ಉದ್ದೇಶ ಹೊಂದಿದೆ.

ಇದನ್ನೂ ಓದಿ: ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಬಳಿಕ ಚಿನ್ನದ ಬೆಲೆ ಏರಿಕೆಯಾಗುತ್ತಾ?

ಆಡಳಿತಾರೂಢ ಬಿಜೆಪಿ ಸದಸ್ಯರು ಸೂಚಿಸಿದ ಬದಲಾವಣೆಗಳನ್ನು ಒಳಗೊಂಡಿರುವ ವರದಿಯನ್ನು ಜೆಪಿಸಿಯು ಬುಧವಾರ ಬಹುಮತದಿಂದ (15-11) ಅಂಗೀಕರಿಸಿತು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು, ಇದು ವಕ್ಫ್ ಬೋರ್ಡ್ ಅನ್ನು ನಾಶಗೊಳಿಸುವ ಸಂಚು ಎಂದು ಟೀಕಿಸಿವೆ.

ಬಿಜೆಪಿ ಮಸೂದೆಯನ್ನು ಬೆಂಬಲಿಸಿದ್ದು, ಇದು ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಆಧುನಿಕತೆ, ಪಾರದರ್ಶಕತೆ ಮತ್ತು ಬದ್ಧತೆಯನ್ನು ತರುತ್ತದೆ ಎಂದಿದ್ದರೆ, ಇದು ಮುಸ್ಲಿಮರ ಸಾಂವಿಧಾನಿಕ ಹಕ್ಕುಗಳ ಮೇಲಿನ ದಾಳಿ ಎಂದು ಪ್ರತಿಪಕ್ಷಗಳು ಟೀಕಿಸಿವೆ.

ಇದನ್ನೂ ಓದಿ: ನಾಳೆ ನಿರ್ಮಲಾ ಸತತ 8ನೇ ಬಜೆಟ್‌: ಮುಂಗಡಪತ್ರದಲ್ಲಿ ಏನಿರಲಿದೆ ಎಂಬ ಬಗ್ಗೆ ಕುತೂಹಲ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India News Live: ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ಬರ್ಬರ ಹ*ತ್ಯೆ
ಕ್ರೀಡಾ ಕ್ಷೇತ್ರದಲ್ಲಿದ್ದ ಪಕ್ಷಪಾತಕ್ಕೆ ಹಿಂದೆಯೇ ಕಡಿವಾಣ : ಪ್ರಧಾನಿ ನರೇಂದ್ರ ಮೋದಿ