
ಕೋಲ್ಕತಾ[ನ.10]: ನಿರೀಕ್ಷೆಯಂತೆ ಬುಲ್ಬುಲ್ ಚಂಡ ಮಾರುತ ಶನಿವಾರ ಪಶ್ಚಿಮ ಬಂಗಾಳ ಹಾಗೂ ಒಡಿಶಾಗೆ ಅಪ್ಪಳಿಸಿದ್ದು, ಓರ್ವನನ್ನು ಬಲಿ ಪಡೆದುಕೊಂಡಿದೆ. ಭಾರೀ ಮಳೆ ಹಾಗೂ ಗಾಳಿಯ ರೌದ್ರಾವತಾರದಿಂದಾಗಿ ತಗ್ಗು ಪ್ರದೇಶಗಳು ಮುಳುಗಡೆಯಾಗಿದ್ದು, ಒಡಿಶಾದಲ್ಲಿ ಮೂರು ಸಾವಿರ ಮಂದಿಯನ್ನು ಸ್ಥಳಾಂತರಿಸಲಾಗಿದೆ.
ಗಾಳಿಯ ರಭಸಕ್ಕೆ ನೂರಾರು ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರಳಿದ್ದು, ಭಾರೀ ಟ್ರಾಫಿಕ್ ಜಾಮ್ ಜನ ಜೀವನವನ್ನು ನರಕ ಸದೃಶವಾಗಿಸಿದೆ. ಮುಂಜಾಗೃತ ಕ್ರಮವಾಗಿ ಕೋಲ್ಕತಾ ಏರ್ಪೋರ್ಟ್ ಅನ್ನು ಶನಿವಾರ ಸಂಜೆ 6 ರಿಂದ ಭಾನುವಾರ ಮುಂಜಾನೆ 6 ಗಂಟೆವರೆಗೆ ಸ್ಥಗಿತಗೊಳಿಸಲಾಗಿದೆ. 120 ಕಿ.ಮಿ ವೇಗದಗಾಳಿ, 2 ಮೀಟರ್ ಎತ್ತರದ ರಕ್ಕಸ ಅಲೆಗಳು ಸಮುದ್ರ ತೀರದಲ್ಲಿ ಮತ್ತಷ್ಟು ಆತಂಕ ಉಂಟು ಮಾಡಿದೆ.
ಕರಾವಳಿಗೆ ಬುಲ್ ಬುಲ್ ದಾಳಿ: ಒಡಿಶಾ, ಪ.ಬಂಗಾಳದಲ್ಲಿ ಅಲರ್ಟ್
ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಮಿತಿ ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದು, ಸಂತ್ರಸ್ತರ ರಕ್ಷಣೆಯಲ್ಲಿ ತೊಡಗಿಸಿಕೊಂಡಿದೆ. ಖುದ್ದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರಿಸ್ಥಿಯನ್ನು ಮೇಲ್ವಿಚಾರಣೆಯನ್ನು ವಹಿಸಿದ್ದು, ಭಯಭೀತರಾಗಬೇಡಿ ಎಂದು ಜನರಲ್ಲಿ ಕೇಳಿ ಕೊಂಡಿದ್ದಾರೆ. ಅತ್ತ ನೆರೆಯ ಬಾಂಗ್ಲಾದೇಶ ಬುಲ್ಬುಲ್ ಅಕ್ರಮಣಕ್ಕೆ ಬೆಚ್ಚಿ ಬಿದ್ದಿದ್ದು, 18 ಲಕ್ಷ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಗಿದೆ.
ನವೆಂಬರ್ 10ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ