ಬುರ್ಖಾ ಧರಿಸಿ ಲೇಡೀಸ್ ಕೋಚ್‌ನಲ್ಲಿ ಯುವಕನ ಪಯಣ: ಮಹಿಳೆಯರು ವಿರೋಧಿಸುತ್ತಿದ್ದಂತೆ ಚಲಿಸುವ ರೈಲಿನಿಂದಲೇ ಕೆಳಗೆ ಹಾರಿದ

Published : Feb 08, 2026, 09:12 PM ISTUpdated : Feb 08, 2026, 09:13 PM IST
Man Disguised In Burqa Enters Ladies Coach

ಸಾರಾಂಶ

ಮುಂಬೈ ಲೋಕಲ್ ರೈಲಿನ ಲೇಡೀಸ್ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಪುರುಷನೊಬ್ಬನನ್ನು ಮಹಿಳಾ ಪ್ರಯಾಣಿಕರು ಪತ್ತೆಹಚ್ಚಿದ್ದಾರೆ. ಮಹಿಳೆಯರು ಪ್ರಶ್ನಿಸಿ ಪೊಲೀಸರಿಗೆ ಒಪ್ಪಿಸುವ ಬೆದರಿಕೆ ಹಾಕಿದಾಗ, ಆತ ಚಲಿಸುವ ರೈಲಿನಿಂದ ಜಿಗಿದಿದ್ದಾನೆ. ಈತನ ವಿರುದ್ಧ ಪ್ರಕರಣ ದಾಖಲಾಗಿದೆ.

ಬುರ್ಖಾ ಧರಿಸಿ ಲೇಡೀಸ್ ಕೋಚ್‌ನಲ್ಲಿ ಪಯಣ

ಮುಂಬೈ: ಮುಂಬೈ ಕೇಂದ್ರ ರೈಲ್ವೆಯ ಲೇಡೀಸ್ ಬೋಗಿಯೊಂದರಲ್ಲಿ ಬುರ್ಖಾ ಧರಿಸಿ ಪುರುಷನೋರ್ವ ಪ್ರಯಾಣಿಸಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಈಗ ರೈಲ್ವೆ ರಕ್ಷಣಾ ಪಡೆ ಪ್ರಕರಣ ದಾಖಲಿಸಿದೆ. ಶುಕ್ರವಾರ ಮುಂಬೈನ ರೈಲೊಂದರ ಲೇಡೀಸ್ ಬೋಗಿಯಲ್ಲಿ ಪುರುಷನೋರ್ವ ಮಹಿಳೆಯಂತೆ ಬುರ್ಖಾ ಧರಿಸಿ ಪ್ರಯಾಣಿಸಿದ್ದಾನೆ. ಲೇಡೀಸ್ ಕೋಚ್‌ನಲ್ಲಿರುವ ಬುರ್ಖಾಧಾರಿಯೂ ಮಹಿಳೆ ಅಲ್ಲ ಪುರುಷ ಎಂಬುದು ಅಲ್ಲಿದ್ದ ಇತರ ಮಹಿಳಾ ಪ್ರಯಾಣಿಕರ ಗಮನಕ್ಕೆ ಬಂದಿದೆ. ಕೂಡಲೇ ಅಲ್ಲಿದ್ದ ಮಹಿಳಾ ಪ್ರಯಾಣಿಕರು ಆ ಬುರ್ಖಾಧಾರಿ ವ್ಯಕ್ತಿ ಮಹಿಳಾ ಬೋಗಿಯಲ್ಲಿ ಪ್ರಯಾಣಿಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವೀಡಿಯೋ ನೋಡಿದ ರೈಲ್ವೆ ರಕ್ಷಣಾ ದಳ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿದೆ.

ಅಧಿಕಾರಿಗಳ ಪ್ರಕಾರ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್‌(CSMT)ಗೆ ಹೋಗುತ್ತಿದ್ದ ಲೋಕಲ್ ರೈಲಿನ ಲೇಡೀಸ್ ಬೋಗಿಯಲ್ಲಿ ಪುರುಷನೋರ್ವ ಬುರ್ಖಾ ಧರಿಸಿ ಪಯಣಿಸುತ್ತಿದ್ದಾನೆ ಎಂಬ ಅನುಮಾನ ಆ ಬೋಗಿಯಲ್ಲಿದ್ದ ಇತರ ಮಹಿಳಾ ಪ್ರಯಾಣಿಕರಿಗೆ ಬಂದಿದೆ. ಅವರು ಆತನನ್ನು ಪ್ರಶ್ನಿಸಲು ಮುಂದಾದಾಗ ಆತ ಪುರುಷ ಎಂಬುದು ತಿಳಿದು ಬಂದಿದೆ. ಮಹಿಳೆಯರು ಆತನನ್ನು ಲೇಡೀಸ್ ಬೋಗಿಯಲ್ಲಿ ಬುರ್ಖಾ ಧರಿಸಿ ಬಂದಿದ್ದಕ್ಕೆ ಪ್ರಶ್ನಿಸಿದ್ದಲ್ಲದೇ ಆ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಚಿತ್ರೀಕರಿಸಿದ್ದಾರೆ. ಅಲ್ಲದೇ ಮುಂಬರುವ ಘಾಟ್‌ಕೋಪರ್ ನಿಲ್ದಾಣದಲ್ಲಿ ಆತನನ್ನು ಪೊಲೀಸರಿಗೆ ಒಪ್ಪಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ: ಉಳಿದ ಆಹಾರವನ್ನು ತೊಳೆದು ಮರು ಬಳಸುತ್ತಿದ್ದ ಹೊಟೇಲ್ : ವೀಡಿಯೋ ವೈರಲ್

ಹೀಗಾಗಿ ಭಯಗೊಂಡ ಆತ ಈ ಮಹಿಳೆಯರಿಂದ ತಪ್ಪಿಸಿಕೊಳ್ಳಲು ಚಲಿಸುವ ರೈಲಿನಿಂದ ಕೆಳಗೆ ಹಾರಿದ್ದಾನೆ. ರೈಲು ನಿಲ್ಲುವ ಮೊದಲೇ ಆತ ರೈಲಿನಿಂದ ಕೆಳಗೆ ಹಾರಿ ಬಳಿಕ ರೈಲಿನ ಇತರ ಹಳಿಗಳ ಮೇಲೆ ಓಡಿ ಹೋಗಿದ್ದಾನೆ. ಬಳಿಕ ಆತ ಕಜ್ರತ್‌ನಿಂದ ಬರುತ್ತಿದ್ದ ರೈಲೊಂದಕ್ಕೆ ಮತ್ತೊಂದು ಪ್ಲಾಟ್‌ಫಾರ್ಮ್‌ನಿಂದ ಹತ್ತಿಕೊಂಡಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರೈಲು ಘಟ್ಕೊಪರ್ ನಿಲ್ದಾಣಕ್ಕೆ ಬರುತ್ತಿದ್ದಂತೆ ಮಹಿಳೆಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಬೇಟೆ, ಕೇರಳದಲ್ಲಿ ಹುಲಿ ಚರ್ಮ ಉಗುರು ಮಾರಾಟಕ್ಕೆ ಯತ್ನಿಸಿದ ಖದೀಮರ ಬಂಧನ

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಶುರು ಮಾಡಿದ್ದು, ಎಲ್ಲಾ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಅಲ್ಲದೇ ಮುಲುಂಡ್ ನಿಲ್ದಾಣದಲ್ಲಿ ಕರ್ಜತ್ ರೈಲಿನಲ್ಲಿ ಆತನಿಗಾಗಿ ಶೋಧ ನಡೆಸಿದ್ದಾರೆ. ಆದರೆ ಶಂಕಿತನನ್ನು ಪತ್ತೆಹಚ್ಚಲು ಪೊಲೀಸರು ವಿಫಲರಾಗಿದ್ದಾರೆ., ಏಕೆಂದರೆ ಅವನು ಆಗಲೇ ರೈಲಿನಿಂದ ಇಳಿದಿದ್ದ. ಆದರೆ ಮಹಿಳಾ ಕೋಚ್‌ನಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ್ದಕ್ಕಾಗಿ ಆರ್‌ಪಿಎಫ್ ಭಾರತೀಯ ರೈಲ್ವೆ ಕಾಯ್ದೆಯಡಿ ಅಪರಿಚಿತ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿದೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕದಲ್ಲಿ ಬೇಟೆ, ಕೇರಳದಲ್ಲಿ ಹುಲಿ ಚರ್ಮ, ಹಲ್ಲು, ಉಗುರು ಮಾರಾಟಕ್ಕೆ ಯತ್ನಿಸಿದ ಖದೀಮರ ಬಂಧನ
ಚಿನ್ನ, ಬೆಳ್ಳಿ ಚಿಂತೆ ಬಿಟ್ಟುಬಿಡಿ... ಇನ್ಮುಂದೆ ತಾಮ್ರದ್ದೇ ಹವಾ ಶುರು.. ಈಗ್ಲೇ ಏನ್ ಮಾಡ್ಬೇಕು ತಿಳ್ಕೊಳ್ಳಿ ಬೇಗ..!