
ನವದೆಹಲಿ(ಜು.22): ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ (ಎನ್ಆರ್ಸಿ)ಯಿಂದ ಭಾರತೀಯ ಮುಸ್ಲಿಮರಿಗೆ ತೊಂದರೆ ಇಲ್ಲ. ಈ ವಿಷಯವನ್ನು ವೋಟಿಗಾಗಿ ರಾಜಕೀಯ ಮಾಡಲಾಗುತ್ತಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಬುಧವಾರ ಗುವಾಹಟಿ ವಿಶ್ವವಿದ್ಯಾಲಯ ಪ್ರೊ.ಗೋಪಾಲ್ ಮಹಾತ್ಮ ಅವರ ಪುಸ್ತಕ ಬಿಡುಗಡೆಗೆ ಆಗಮಿಸಿದ್ದ ಅವರು, ‘1950ರ ನೆಹರು ಲಿಖಾಯತ್ ಒಪ್ಪಂದದ ಪ್ರಕಾರ ಪ್ರತಿಯೊಬ್ಬ ಅಲ್ಪಸಂಖ್ಯಾತರನ್ನು ರಕ್ಷಣೆ ಮಾಡಬೇಕು. ಭಾರತ ಇದನ್ನು ಪಾಲಿಸುತ್ತಿದೆ. ಪಾಕಿಸ್ತಾನ ವಿಫಲವಾಗಿದೆ’ ಎಂದು ಹೇಳಿದರು.
ಸಿಎಎ ಇರುವುದು ನೆರೆಯ ದೇಶಗಳಿಂದ ಧರ್ಮದ ಕಾರಣಕ್ಕೆ ಕಿರುಕುಳ ಅನುಭವಿಸಿ ಭಾರತಕ್ಕೆ ಬಂದವರಿಗಾಗಿ. ಹಾಗೆಯೇ ಎನ್ಆರ್ಸಿ ಅಂದರೆ ಭಾರತೀಯರನ್ನು ಗುರುತಿಸುವ ಪ್ರಕ್ರಿಯೆ ಎಂದರು.
ಇದೇ ವೇಳೆ ಜಾತ್ಯತೀತತೆ, ಸಮಾಜವಾದ ಮತ್ತು ಪ್ರಜಾಪ್ರಭುತ್ವದ ಬಗ್ಗೆ ನಾವು ಯಾರಿಂದಲೂ ಪಾಠ ಕಲಿಯಬೇಕಿಲ್ಲ. ನಮ್ಮ ಸಂವಿಧಾನ ಕರ್ತವ್ಯ ಮತ್ತು ಹಕ್ಕುಗಳ ಬಗ್ಗೆ ಸ್ಪಷ್ಟವಾಗಿ ತಿಳಿಸಿದೆ. ಹಕ್ಕುಗಳೆಲ್ಲವೂ ಬೇಕು, ಆದರೆ ಕರ್ತವ್ಯ ನಿರ್ವಹಿಸಲು ಆಗುವುದಿಲ್ಲ ಎಂದಾಗ ಸಮಸ್ಯೆ ಉದ್ಭವಿಸುತ್ತವೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ