ಕರ್ನಾಟಕದಿಂದ ಮೊದಲನೆಯವರಾಗಿ ರಾಜೀವ್ ಚಂದ್ರಶೇಖರ್ ಪ್ರಮಾಣ ವಚನ ಸ್ವೀಕಾರ!

Published : Jul 07, 2021, 06:50 PM ISTUpdated : Jul 07, 2021, 07:36 PM IST
ಕರ್ನಾಟಕದಿಂದ ಮೊದಲನೆಯವರಾಗಿ ರಾಜೀವ್ ಚಂದ್ರಶೇಖರ್ ಪ್ರಮಾಣ ವಚನ ಸ್ವೀಕಾರ!

ಸಾರಾಂಶ

ಮೋದಿ ಸಂಪುಟ ಸೇರಿಕೊಂಡ ರಾಜೀವ್ ಚಂದ್ರಶೇಖರ್ ಕರ್ನಾಟಕದಿಂದ ನಾಲ್ವರು ಸಚಿವರು ಮೋದಿ ಟೀಮ್ ಸೇರ್ಪಡೆ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ

ನವದೆಹಲಿ(ಜು.07): ಪ್ರಧಾನಿ ಮೋದಿ ಸಂಪುಟ ಪುನಾರಚನೆಯಲ್ಲಿ ಕರ್ನಾಟಕದಿಂದ ಮೊದಲಿಗರಾಗಿ ರಾಜೀವ್ ಚಂದ್ರಶೇಖರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ರಾಜೀವ್ ಚಂದ್ರಶೇಖರ್ ಮೊದಲನೆ ಬಾರಿಗೆ ಸಚಿವರಾಗಿ ಬಡ್ತಿ ಪಡೆದಿದ್ದಾರೆ.

"

ಸಂಪುಟ ಪುನಾರಚನೆ: ನಾರಾಯಾಣ ರಾಣೆ to ಸಿಂಧಿಯಾ, ಪ್ರಮಾಣ ವಚನ ಸ್ವೀಕರಿಸಿದ ಪ್ರಮುಖರು!

ರಾಜೀವ್ ಚಂದ್ರಶೇಖರ್ ಕರ್ನಾಟಕದಿಂದ ಮೊದಲನೆಯವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇವರ ಹೆಸರಿನಲ್ಲಿ ರಾಜೀವ್ ಚಂದ್ರಶೇಕರ್ ಪ್ರಮಾಣ  ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್, ರಾಜೀವ್ ಅವರಿಗೆ ಪ್ರತಿಜ್ಞಾವಿಧಿ ಭೋಧಿಸಿದರು.

 

ರಾಜೀವ್ ಬಳಿಕ ಸಂಸದೆ ಶೋಭಾ ಕರಂದ್ಲಾಜೆ ಪ್ರಮಾಣ ವಚನ ಸ್ವೀಕರಿಸಿದರು. ದೇವರ ಹೆಸರಿನಲ್ಲಿ ಶೋಭಾ ಪ್ರಮಾಣ ವಚನ ಸ್ವೀಕರಿಸಿದರು.  ಶೋಭಾ ಕರಾಂದ್ಲಾಜೆ ಕೂಡ ಇದೇ ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಬಡ್ತಿ ಪಡೆದಿದ್ದಾರೆ.

ಇನ್ನು ಚಿತ್ರದುರ್ಗದ ಸಂಸದ ಅನೇಕಲ್ ನಾರಾಯಣ ಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕರ್ನಾಟದಿಂದ ಮೂರನೇಯವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ನಾಲ್ಕನೇಯವರಾಗಿ ಭಗವಂತ್ ಖೂಬಾ  ಪ್ರಮಾಣ ವಚನ ಸ್ವೀಕರಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂದು ರಾತ್ರಿ 8ರ ಒಳಗೆ ಟಿಕೆಟ್ ಮೊತ್ತ ಮರುಪಾವತಿಸಿ : ಇಂಡಿಗೋಗೆ ಕೇಂದ್ರ ಗಡುವು
India Latest News Live: ಆಯೋಧ್ಯೆಯ ಬಾಬ್ರಿ ಮಸೀದಿಯನ್ನೇ ಹೋಲುವಂತಹ ಮಸೀದಿಗೆ ಶಂಕು ಸ್ಥಾಪನೆ