'ಬಂಗಾಳವನ್ನು ಮತ್ತೊಂದು ಗುಜರಾತ್ ಮಾಡಲು  ಬಿಡಲ್ಲ'

Published : Dec 24, 2020, 02:57 PM ISTUpdated : Dec 24, 2020, 02:59 PM IST
'ಬಂಗಾಳವನ್ನು ಮತ್ತೊಂದು ಗುಜರಾತ್ ಮಾಡಲು  ಬಿಡಲ್ಲ'

ಸಾರಾಂಶ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರ ಸಾಧ್ಯವೇ ಇಲ್ಲ/ ಬಂಗಾಳವನ್ನು ಇನ್ನೊಂದು ಗುಜರಾತ್ ಮಾಡಲು ಬಿಡುವುದಿಲ್ಲ/ ಹೊರಗಿನಿಂದ ಬಂದವರಿಗೆ ಅಧಿಕಾರ ಕೊಡಬೇಡಿ/ ಮಮತಾ ಬ್ಯಾನರ್ಜಿ ವಾಗ್ದಾಳಿ

ಕೋಲ್ಕತ್ತಾ(ಡಿ. 24)   ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಬಿಜೆಪಿ ಮೇಲೆ ವಾಗ್ದಾಳಿ ಮಾಡಿದ್ದಾರೆ. ಪಶ್ಚಿಮ ಬಂಗಾಳವನ್ನು ಗುಜರಾತ್ ಮಾಡಲು ಬಿಡುವುದಿಲ್ಲ ಎಂದು ಅಬ್ಬರಿಸಿದ್ದಾರೆ.

ಪಶ್ಚಿಮ ಬಂಗಾಳ ಶ್ರೇಷ್ಠತೆ ಮತ್ತು ಅಭಿವೃದ್ಧಿ ಹಾದಿಯಲ್ಲಿದೆ. ಯಾವ ಕಾರಣಕ್ಕೂ ಬಿಜೆಪಿ ಯ ಪ್ರವೇಶಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿದ್ದಾರೆ. ಬಂಗಾಳದ ಜನರು ಕೇಸರಿ ಪಕ್ಷದ ಪ್ರವೇಶವನ್ನು ತಡೆಯಬೇಕಾಗುತ್ತದೆ. ಹೊರಗಿನಿಂದ ಬಂದವರು ಇಲ್ಲಿ ಬಾವುಟ ಹಾರಿಸಲು ಬಿಡುವುದಿಲ್ಲ ಎಂದಿದ್ದಾರೆ.

ಪ್ರತಿಭಟನಾ ನಿರತ ರೈತರೊಂದಿಗೆ ಮಮತಾ ಮಾತು

ಬಿಜೆಪಿ ಅಧಿಕಾರಕ್ಕೆ ಬಂದರೆ ಹೊಸ ನೀತಿ ನಿಯಮ ಜಾರಿ ಮಾಡುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್   ಶಾ ಹೇಳಿದ್ದು ಹಾಗಾಗಿ ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿಕೊಂಡಿದ್ದರು.

ಅಮಿತ್ ಶಾ ಎರಡು ದಿನ ಪಶ್ಚಿಮ ಬಂಗಾಳದಲ್ಲಿ ಪ್ರವಾಸ ಮಾಡಿದ್ದರು.  ಬಿಜೆಪಿ ಹೊರಗಿನ ಪಕ್ಷ ಎಂಬ ಮಮತಾ ಹೇಳಿಕೆಗೆ ಠಕ್ಕರ್ ಕೊಟ್ಟಿದ್ದರು. ಇದೇ ಹೇಳಿಕೆ ಇಟ್ಟುಕೊಂಡು ಟೀಕೆ ಮಾಡಿರುವ ಮಮತಾ ಪಶ್ಚಿಮ ಬಂಗಾಳದ ಮುಂದಿನ ಸಿಎಂ ಇದೇ ಮಣ್ಣಿನ ಮಕ್ಕಳಾಗಿರುತ್ತಾರೆ ಎಂದು  ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಅರ್ಥ ವ್ಯವಷ್ಥೆ ಕುಸಿದಿದೆ ಎಂದು ಶಾ  ಹೇಳಿದ್ದರೆ ಮಮತಾ ಇಡೀ ದೇಶದ ಉದಾಹರಣೆಯನ್ನು ಕೊಟ್ಟಿದ್ದಾರೆ.  ಪಶ್ಚಿಮ ಬಂಗಾಳದ ರಾಜಕಾರಣದ ಚಿತ್ರಣ ಮಮತಾ ವರ್ಸಸ್ ಅಮಿತ್ ಶಾ ಆಗಿ ಬದಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!
ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ