ಸಾಠೆ ಕುಟುಂಬವೇ ಸೇನಾನಿಗಳದ್ದು: ಇಬ್ಬರು ಮಕ್ಕಳ ಸಾವಿನಿಂದ ಹೆತ್ತವರು ಅನಾಥ!

Published : Aug 09, 2020, 08:04 AM ISTUpdated : Aug 09, 2020, 09:27 AM IST
ಸಾಠೆ ಕುಟುಂಬವೇ ಸೇನಾನಿಗಳದ್ದು: ಇಬ್ಬರು ಮಕ್ಕಳ ಸಾವಿನಿಂದ ಹೆತ್ತವರು ಅನಾಥ!

ಸಾರಾಂಶ

ಪೈಲಟ್‌ ಇಡೀ ಕುಟುಂಬವೇ ಸೇನಾನಿಗಳದ್ದು| ದೀಪಕ್‌ ವಾಯುಪಡೆ, ಸೋದರ ವಿಕಾಸ್‌ ಸೇನೆ, ತಂದೆ ಸೇನೆಯಲ್ಲಿ ಕರ್ನಲ್‌| ಸೇನೆಯಲ್ಲಿದ್ದ ಕಿರಿಯ ಪುತ್ರ ಕಳೆದ ವರ್ಷ ಸಾವು, ಇದೀಗ ದೀಪಕ್‌ ಬಲಿ

ಕಲ್ಲಿಕೋಟೆ(ಆ.09): ಕಲ್ಲಿಕೋಟೆ ದುರಂತದಲ್ಲಿ ಸಾವನ್ನಪ್ಪಿದ ಪೈಲಟ್‌ ದೀಪಕ್‌ ಅವರ ಇಡೀ ಕುಟುಂಬವೇ ಸೇನಾನಿಗಳದ್ದು ಎಂಬ ವಿಷಯ ಬೆಳಕಿಗೆ ಬಂದಿದೆ. ಆದರೆ ನೋವಿನ ಸಂಗತಿಯೆಂದರೆ ಪೈಲಟ್‌ ದೀಪಕ್‌ ಸಾವನ್ನಪ್ಪುವುದರೊಂದಿಗೆ ಅವರ ಪೋಷಕರು ಅನಾಥರಾಗಿದ್ದಾರೆ.

ಕಾರಣ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರ ಕಿರಿಯ ಸೋದರ ವಿಕಾಸ್‌ ಸಾಠೆ ಕಳೆದ ವರ್ಷ ಪಂಜಾಬ್‌ನಲ್ಲಿ ನಡೆದ ಅಪಘಾತವೊಂದರಲ್ಲಿ ಸಾವನ್ನಪ್ಪಿದ್ದರು. ಹೀಗಾಗಿ ಕೇವಲ 2 ವರ್ಷದಲ್ಲಿ ಇಬ್ಬರೂ ಮಕ್ಕಳನ್ನು ಕಳೆದುಕೊಂಡ ಕರ್ನಲ್‌ ವಸಂತ್‌ ಸಾಠೆ (87) ಮತ್ತು ಅವರ ಪತ್ನಿ ಶೋಕದ ಕಡಲಲ್ಲಿ ಮುಳುಗಿದ್ದಾರೆ.

ನಿಗದಿಗಿಂತ ದೂರದಲ್ಲಿ ಇಳಿದಿದ್ದೇ ಅಪಘಾತಕ್ಕೆ ಕಾರಣ?

1990ರ ದುರ್ಘಟನೆಯಲ್ಲಿ ಪಾರಾಗಿದ್ದರು

ಶುಕ್ರವಾರ ಕಲ್ಲಿಕೋಟೆ ವಿಮಾನ ಅಪಘಾತದಲ್ಲಿ ಬಲಿಯಾದ ಹಿರಿಯ ಪೈಲಟ್‌ ದೀಪಕ್‌ ಸಾಠೆ (58), 1990ರಲ್ಲಿ ನಡೆದ ಇದೇ ರೀತಿಯ ವಿಮಾನ ಅಪಘಾತದಲ್ಲಿ ಬದುಕುಳಿಬಂದಿದ್ದರು ಎಂಬ ವಿಷಯವನ್ನು ಅವರ ಸೋದರ ಸಂಬಂಧ ನೀಲೇಶ್‌ ಸಾಠೆ ಬಹಿರಂಗಪಡಿಸಿದ್ದಾರೆ. ಆಗ ಭಾರತೀಯ ವಾಯುಪಡೆಯಲ್ಲಿದ್ದ ದೀಪಕ್‌, ವಿಮಾನ ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. 6 ತಿಂಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡು ಮತ್ತೆ ಪೈಲಟ್‌ ಆಗಿ ವೃತ್ತಿಯಲ್ಲಿ ಮುಂದುವರಿದಿದ್ದರು. ಅವರ ಆತ್ಮಬಲ ಹಾಗೂ ಅವರಲ್ಲಿದ್ದ ಇಚ್ಛಾಶಕ್ತಿ ಅವರನ್ನು ಮತ್ತೆ ಪೈಲಟ್‌ ಆಗಿ ಮುಂದುವರಿಯುವಂತೆ ಮಾಡಿತು ಎಂದು ತಿಳಿಸಿದ್ದಾರೆ.

ತಾನು ಮಡಿದು ನೂರಾರು ಜನರ ಜೀವ ಉಳಿಸಿದ ಪೈಲಟ್‌ ದೀಪಕ್‌!

ಅಮ್ಮನ ಹುಟ್ಟುಹಬ್ಬಕೆ ಸರ್‌ಪ್ರೈಸ್‌ ನೀಡಲು ಬಯಸಿದ್ದ ಕ್ಯಾ. ಸಾಠೆ

ಕಲ್ಲಿಕೋಟೆಯಲ್ಲಿ ದುರಂತ ಸಾವು ಕಂಡಿರುವ ಕ್ಯಾಪ್ಟನ್‌ ದೀಪಕ್‌ ಸಾಠೆ, ಶನಿವಾರವೇ ಮಹಾರಾಷ್ಟ್ರದ ನಾಗ್ಪುರಕ್ಕೆ ಆಗಮಿಸಲು ನಿರ್ಧರಿಸಿದ್ದರು. ಆ ಮೂಲಕ, ಅವರ ಅಮ್ಮನ 84ನೇ ವರ್ಷದ ಅಮ್ಮನ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್‌ ನೀಡಲು ಬಯಸಿದ್ದರು. ಆದರೆ, ಶುಕ್ರವಾರ ಸಂಜೆಯೇ ಕ್ಯಾಪ್ಟನ್‌ ಸಾಠೆ ವಿಮಾನ ದುರುಂತದಲ್ಲಿ ತಮ್ಮನ್ನು ಅಗಲಿದ್ದಾರೆ ಎಂದು ಸಾಠೆ ಅವರ ಸಂಬಂಧಿಕರೊಬ್ಬರು ದುಃಖತಪ್ತರಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ
ಯುನೆಸ್ಕೋ ಪರಂಪರೆ ಪಟ್ಟಿಗೆ ದೀಪಾವಳಿ ಸೇರ್ಪಡೆ!