ಪ್ರವಾಹದಲ್ಲಿ ಕೊಚ್ಚಿ ಹೋದ ಕಾರು: ಮೂವರ ಶವಪತ್ತೆ ಮೂವರು ನಾಪತ್ತೆ

Published : Jul 13, 2022, 12:50 PM IST
ಪ್ರವಾಹದಲ್ಲಿ ಕೊಚ್ಚಿ ಹೋದ ಕಾರು: ಮೂವರ ಶವಪತ್ತೆ ಮೂವರು ನಾಪತ್ತೆ

ಸಾರಾಂಶ

ಭಾರಿ ಮಳೆಗೆ ನದಿಯೊಂದು ಉಕ್ಕಿ ಹರಿದ ಪರಿಣಾಮ ಕಾರೊಂದು ನೀರಲ್ಲಿ ಕೊಚ್ಚಿ ಹೋಗಿದ್ದು, ಕಾರಿನಲ್ಲಿದ್ದ ಒಟ್ಟು ಅರೂ ಜನರಲ್ಲಿ ಮೂವರು ಸಾವನ್ನಪ್ಪಿ ಮತ್ತೆ ಮೂವರು ನಾಪತ್ತೆಯಾಗಿದ್ದಾರೆ. 

ನಾಗಪುರ: ಭಾರಿ ಮಳೆಗೆ ನದಿಯೊಂದು ಉಕ್ಕಿ ಹರಿದ ಪರಿಣಾಮ ಕಾರೊಂದು ನೀರಲ್ಲಿ ಕೊಚ್ಚಿ ಹೋಗಿದ್ದು, ಕಾರಿನಲ್ಲಿದ್ದ ಒಟ್ಟು ಅರೂ ಜನರಲ್ಲಿ ಮೂವರು ಸಾವನ್ನಪ್ಪಿ ಮತ್ತೆ ಮೂವರು ನಾಪತ್ತೆಯಾಗಿದ್ದಾರೆ. ಮೃತರಲ್ಲಿ ಹತ್ತು ವರ್ಷದ ಬಾಲಕನ್ನು ಸೇರಿದ್ದಾನೆ.  ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೆಲ್ವಾಡ್‌ನ ನಂದಗೌಮುಖ ಎಂಬಲ್ಲಿ ಈ ದುರಂತ ಸಂಭವಿಸಿದೆ. ಉಕ್ಕಿ ಹರಿಯುತ್ತಿದ್ದ ಸಣ್ಣ ಹೊಳೆಯೊಂದನ್ನು ದಾಟುತ್ತಿದ್ದಾಗ ನೀರಿನ ರಭಸಕ್ಕೆ ಸಿಲುಕಿ ಕಾರು ಕೊಚ್ಚಿ ಹೋಗಿದ್ದು, ಮೂವರು ನಾಪತ್ತೆಯಾಗಿದ್ದು, ಮೂವರ ಶವ ಪತ್ತೆಯಾಗಿದೆ. ನಿನ್ನೆ(ಜುಲೈ 12) ಈ ಅನಾಹುತ ಸಂಭವಿಸಿದೆ. ಮೃತರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು ಎಂದು ತಿಳಿದು ಬಂದಿದೆ. 

ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ, ವಾಹನವು ಪ್ರವಾಹದ ನಡುವೆ ಸಿಲುಕಿಕೊಂಡಿರುವುದನ್ನು ಕಾಣಬಹುದು ಮತ್ತು ಜನಸಮೂಹವು ಏನೂ ಮಾಡಲಾಗದೇ ಅಸಹಾಯಕರಾಗಿ ಹೊಳೆಯ ಬದಿಯಲ್ಲಿ ನಿಂತಿರುವುದನ್ನು ಕಾಣಬಹುದು. ಈ ವೇಳೆ ಕೆಲವರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ದುರಂತವನ್ನು ರೆಕಾರ್ಡ್‌ ಮಾಡುತ್ತಿದ್ದಾರೆ. ಐದರಿಂದ ಆರು ಮಂದಿ ವಾಹನದಲ್ಲಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಧ್ಯಾಹ್ನ 2 ಗಂಟೆಯ ಸುಮಾರಿಗೆ ನದಿಯ ಬಲವಾದ ಹೊಡೆತಕ್ಕೆ ವಾಹನವು ಕೊಚ್ಚಿಹೋಗಿದೆ. ಸುದ್ದಿ ತಿಳಿದು ರಕ್ಷಣೆಗೆ ಇಳಿದ ತಂಡಕ್ಕೆ ಸಂಜೆ ರಕ್ಷಣಾ ಕಾರ್ಯಾಚರಣೆ ಅಂತ್ಯಗೊಳಿಸುವ ವೇಳೆ ಒಟ್ಟು ಮೂರು ಮೃತದೇಹಗಳು ಸಿಕ್ಕಿವೆ. ಇಂದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. 

ಇವರೆಲ್ಲರೂ ಒಂದೇ ಕುಟುಂಬದವರಾಗಿದ್ದು, ನಂದಗೋಮುಲ್ಕ್‌ನಿಂದ ಮಧ್ಯಪ್ರದೇಶದ ಮುಲ್ತಾಯ್‌ಗೆ ತೆರಳುತ್ತಿದ್ದಾಗ ಹೊಳೆ ಉಕ್ಕಿ ಹರಿಯುತ್ತಿದ್ದು, ಆದಾಗ್ಯೂ ಚಾಲಕ ಲೀಲಾಧರ್ ಹಿವಾರೆ ಅವರು ತುಂಬಿ ಹರಿಯುತ್ತಿರುವ ಹೊಳೆ ದಾಟುವ ಹುಚ್ಚು ಸಾಹಸಕ್ಕೆ ಮುಂದಾಗಿ ಈ ಅನಾಹುತ ನಡೆದಿದೆ ಎಂದು ವರದಿಯಾಗಿದೆ. ಪ್ರವಾಹದ  ನಡುವೆ ಲೀಲಾಧರ್‌, ಕಡಿಮ ಎತ್ತರದ ಸೇತುವೆಯ ಮೂಲಕ ಕಾರು ದಾಟಿಸಲು ಮುಂದಾಗಿದ್ದಾರೆ ಇದು ಅಪಘಾತಕ್ಕೆ ಕಾರಣವಾಯಿತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. 

ಮಂಗ್ಳೂರಲ್ಲಿ ಕಡಲಬ್ಬರ: ಬೈಕಂಪಾಡಿ ಮೀನಕಳಿಯದಲ್ಲಿ ರಸ್ತೆಯೇ ಸಮುದ್ರ ಪಾಲು..!

ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ಮಳೆಗೆ ಒಟ್ಟು ಮೂವರು ಸಾವನ್ನಪ್ಪಿದ್ದಾರೆ. ಜೂನ್ 1 ಮತ್ತು ಜುಲೈ 10 ರ ನಡುವೆ ಮಹಾರಾಷ್ಟ್ರದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಒಟ್ಟು 83 ಜನರು ಸಾವನ್ನಪ್ಪಿದ್ದಾರೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಬೀದರ್‌: ನಿರಂತರ ಮಳೆಗೆ 118 ಮನೆಗಳು ಕುಸಿತ, ಹೊಲದಲ್ಲಿ ನೀರು ನಿಂತು ಬೆಳೆ ನಾಶ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್
India Latest News Live: ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್