
ನವದೆಹಲಿ(ಮೇ.05): ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ದಿನೇದಿನೇ ದಾಖಲೆ ಬರೆಯುತ್ತಿರುವಾಗಲೇ ಸಮಾಧಾನದ ಸುದ್ದಿಯೊಂದನ್ನು ಸರ್ಕಾರ ನೀಡಿದೆ. ಸೋಮವಾರ ಸಂಜೆಗೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ದಾಖಲೆಯ 1074 ಮಂದಿ ಕೊರೋನಾದಿಂದ ಚೇತರಿಸಿಕೊಂಡಿದ್ದಾರೆ ಎಂದು ತಿಳಿಸಿದೆ.
ಕೊರೋನಾ ವೈರಸ್ ದೇಶದಲ್ಲಿ ಕಾಣಿಸಿಕೊಂಡ ಬಳಿಕ ಈವರೆಗೆ ದೇಶದಲ್ಲಿ 11,706 ಮಂದಿ ಆ ವ್ಯಾಧಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಚೇತರಿಕೆ ಪ್ರಮಾಣ ದೇಶದಲ್ಲಿ ಶೇ.27.52ಕ್ಕೆ ಏರಿಕೆಯಾಗಿದೆ. ಚೇತರಿಕೆ ಹಾಗೂ ಸಾವಿನ ಅನುಪಾತ 90:20ಕ್ಕೆ ಹೆಚ್ಚಳಗೊಂಡಿದೆ. ಏ.17ರಂದು ಇದು 80:20ರಷ್ಟಿತ್ತು. ಹೀಗಾಗಿ ಗಣನೀಯ ಸುಧಾರಣೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಮಾಹಿತಿ ನೀಡಿದರು.
900 ಹೊಸ ಮದ್ಯದಂಗಡಿ ತೆರೆಯಲು ನಿರ್ಧಾರ!
ಇದೇ ವೇಳೆ ಈವರೆಗೆ ಸೋಂಕು ಭಾರೀ ಪ್ರಮಾಣದಲ್ಲಿ ಹರಡುವುದನ್ನು ನಿಯಂತ್ರಣಾ ಕ್ರಮಗಳ ಮೂಲಕ ತಪ್ಪಿಸಲಾಗಿದೆ. ಮುಂದೆಯೂ ಎಲ್ಲರೂ ಸಾಮೂಹಿಕವಾಗಿ ಕೆಲಸ ಮಾಡಿದರೆ ಕೊರೋನಾ ವೈರಸ್ ಪ್ರಕರಣ ದೇಶದಲ್ಲಿ ಗರಿಷ್ಠ ಮಟ್ಟಕ್ಕೆ ಏರಿಕೆಯಾಗುವುದಿಲ್ಲ. ಒಂದು ವೇಳೆ ವಿಫಲವಾದರೆ ನಾವು ಭಾರೀ ಅಪಾಯದ ಸಂದರ್ಭವನ್ನು ಎದುರಿಸಬೇಕಾಗಿ ಬರಬಹುದು ಎಂದು ತಿಳಿಸಿದರು. ದೇಶದಲ್ಲಿ ಪರೀಕ್ಷಾ ಕಿಟ್ಗಳಿಗೆ ಕೊರತೆ ಇಲ್ಲ ಎಂದು ಹೇಳಿದರು.
2672 ಜನರಿಗೆ ಸೋಂಕು: ಈವರೆಗಿನ ಏಕದಿನ ಗರಿಷ್ಠ
ಸೋಮವಾರ ದೇಶದ ವಿವಿಧ ರಾಜ್ಯಗಳಲ್ಲಿ 2672 ಹೊಸ ಕೊರೋನಾ ಪ್ರಕರಣಗಳು ಬೆಳಕಿಗೆ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 44451ಕ್ಕೆ ಏರಿದೆ. ಇದು ಈವರೆಗಿನ ಒಂದು ದಿನದ ಗರಿಷ್ಠ ಪ್ರಮಾಣವಾಗಿದೆ. ಇನ್ನು 67 ಜನ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 1458ಕ್ಕೆ ತಲುಪಿದೆ.
ರಾಜ್ಯದ ಪ್ರತಿ ವ್ಯಕ್ತಿಯ ಹೆಲ್ತ್ ರಿಜಿಸ್ಟರ್: ದೇಶದಲ್ಲೇ ಪ್ರಥಮ!
ಮಹಾರಾಷ್ಟ್ರದಲ್ಲಿ 000, ತಮಿಳುನಾಡಿನಲ್ಲಿ 527, ಗುಜರಾತ್ನಲ್ಲಿ 376, ರಾಜಸ್ಥಾನದಲ್ಲಿ 130 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ