ಆಂಧ್ರದಲ್ಲಿ ಮುಂದುವರಿದ ಸೇಡಿನ ರಾಜಕೀಯ, ಜಗನ್‌ ವಿರುದ್ಧ ಕೊಲೆ ಯತ್ನ ಕೇಸು!

Published : Jul 13, 2024, 10:25 PM IST
ಆಂಧ್ರದಲ್ಲಿ ಮುಂದುವರಿದ ಸೇಡಿನ ರಾಜಕೀಯ, ಜಗನ್‌ ವಿರುದ್ಧ ಕೊಲೆ ಯತ್ನ ಕೇಸು!

ಸಾರಾಂಶ

ಜಗನ್‌ ವಿರುದ್ಧ ಕೊಲೆ ಯತ್ನ ಕೇಸು - ಜತೆಗೆ ಇಬ್ಬರು ನಿವೃತ್ತ ಐಪಿಎಸ್‌ಗಳ ಮೇಲೂ ಎಫ್ಐಆರ್‌- ಟಿಡಿಪಿ ಶಾಸಕ ರಾಜು ನೀಡಿದ ದೂರು ಆಧರಿಸಿ ಕೇಸ್‌ - ಆಂಧ್ರದಲ್ಲಿ ಮುಂದುವರಿದ ‘ಸೇಡಿನ ರಾಜಕೀಯ’

ವಿಜಯವಾಡ (ಜು.13): ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್‌ಆರ್‌ ಕಾಂಗ್ರೆಸ್‌ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಅವರ ಮೇಲೆ ಚಂದ್ರಬಾಬು ನಾಯ್ಡು ಸರ್ಕಾರ ಪ್ರಹಾರ ಮುಂದುವರಿಸಿದೆ. ರೆಡ್ಡಿ ಮತ್ತು ಇತರ ನಾಲ್ವರ ವಿರುದ್ಧ ಗುಂಟೂರು ಜಿಲ್ಲೆಯ ನಗರಂಪಲೆಂ ಪೊಲೀಸರು ಶುಕ್ರವಾರ ಹಳೆಯ ಘಟನೆಯೊಂದನ್ನು ಆಧರಿಸಿ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ.

4 ದಶಕದ ಬಳಿಕ ನಕಲಿ ಕೀ ಬಳಸಿ ಪುರಿ ಜಗನ್ನಾಥನ ರತ್ನ ಭಂಡಾರ ಓಪನ್, ಖಜಾನೆ ಲೂಟಿ ಮಾಡಲಾಗಿದ್ಯಾ?

ತೆಲುಗುದೇಶಂ ಶಾಸಕ ಕೆ ರಘುರಾಮ ಕೃಷ್ಣಂ ರಾಜು ಅವರ ದೂರಿನ ಮೇರೆಗೆ ಜಗನ್‌, ಮಾಜಿ ಪೊಲೀಸ್ ಮಹಾನಿರ್ದೇಶಕ (ಗುಪ್ತಚರ) ಪಿಎಸ್‌ಆರ್ ಆಂಜನೇಯುಲು, ಮಾಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಸಿಐಡಿ) ಮತ್ತು ಗುಂಟೂರಿನ ಸರ್ಕಾರಿ ಜನರಲ್ ಆಸ್ಪತ್ರೆಯ ಮಾಜಿ ಅಧೀಕ್ಷಕಿ ಡಾ ಜಿ ಪ್ರಭಾವತಿ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಚಾರ್ಮಾಡಿ ಘಾಟ್ ಎಂಟ್ರಿಯಲ್ಲಿ ಪ್ರವಾಸಿಗರ ರಂಪಾಟ, ಎಣ್ಣೆ ಮತ್ತಿನಲ್ಲಿ ಪೊಲೀಸರ ಮುಂದೆಯೇ ಹೊಡೆದಾಟ!

2001ರಲ್ಲಿ ರಘುರಾಮ ಕೃಷ್ಣಂ ರಾಜು ಅವರನ್ನು ಆಂಧ್ರ ಸಿಐಡಿ ಸಿಬ್ಬಂದಿ ಹೈದರಾಬಾದ್‌ನಲ್ಲಿ ಪ್ರಕರಣವೊಂದರಲ್ಲಿ ಬಂಧಿಸಿದ್ದರು. ‘ಆಗ ನನಗೆ ಸಿಐಡಿ ಅಧಿಕಾರಿ ಪಿ.ವಿ. ಸುನೀಲ್ ಕುಮಾರ್, ಆಂಜನೇಯುಲು ಮತ್ತು ಇತರ ಕೆಲವು ಪೊಲೀಸ್ ಅಧಿಕಾರಿಗಳು ರಬ್ಬರ್ ಬೆಲ್ಟ್ ಮತ್ತು ಲಾಠಿಯಿಂದ ಥಳಿಸಿದ್ದರು. ಎದೆ ಮೇಲೆ ಕುಳಿತು ಉಸಿರುಗಟ್ಟಿಸಲು ಯತ್ನಿಸಿದರು. ಜಗನ್‌ ಅವರ ಸೂಚನೆ ಮೇರೆಗೆ ನನಗೆ ಹೃದಯ ಸಂಬಂಧಿ ಕಾಯಿಲೆಗೆ ಔಷಧಿಗಳನ್ನು ತೆಗೆದುಕೊಳ್ಳಲೂ ಅವಕಾಶ ನೀಡಲಿಲ್ಲ. ಪೊಲೀಸ್ ಸಿಬ್ಬಂದಿ ತನ್ನನ್ನು ಕೊಲ್ಲಲು ಪ್ರಯತ್ನಿಸಿದರು’ ಎಂದು ರಾಜು ದೂರಿದ್ದಾರೆ. ಈ ದೂರು ಆಧರಿಸಿ ಜಗನ್‌ ವಿರುದ್ಧ ಕೊಲೆ ಯತ್ನ, ಕಸ್ಟಡಿಯಲ್ಲಿ ಚಿತ್ರಹಿಂಸೆ ಮತ್ತು ಕ್ರಿಮಿನಲ್ ಪಿತೂರಿ ಮುಂತಾದ ಆರೋಪಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಂಕೆ ಬಿಹಾರಿ ದೇಗುಲದಲ್ಲಿ ಶಾಲಿನ ಮೇಲೆ ಬಿತ್ತು ಚಿನ್ನದ ಉಂಗುರ: ಶ್ರೀಕೃಷ್ಣನ ಪ್ರತಿಮೆಯನ್ನೇ ಮದುವೆಯಾದ ಪಿಂಕಿ
'ವಂದೇ ಮಾತರಂ..' ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಿದ ಮಂತ್ರ ಎಂದ ಪ್ರಧಾನಿ ಮೋದಿ