
ನವದೆಹಲಿ(ಆ.19): ಬಿಜೆಪಿ ಮತ್ತು ಬಿಜೆಪಿಗೆ ಮತ ಹಾಕುವವರು ರಾಕ್ಷಸರು ಎಂದು ಹೇಳಿಕೆ ನೀಡಿದ್ದಕ್ಕೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ವಿರುದ್ಧ ದೆಹಲಿಯ ರೋಹಿಣಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದಾರೆ.
ದೂರುದಾರ ಸಂಜಯ್ ಗುಪ್ತಾ ಅವರು ‘ಹರಾರಯಣದಲ್ಲಿ ಭಾಷಣ ಮಾಡುವಾಗ ರಣದೀಪ್ ಸುರ್ಜೇವಾಲಾ ನೀಡಿದ ವಿವಾದಾತ್ಮಕ ಹೇಳಿಕೆ ಆಕ್ಷೇಪಾರ್ಹ ಮತ್ತು ಸ್ವೀಕಾರಾರ್ಹವಲ್ಲದ ಹೇಳಿಕೆಯಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು ಹಾಗೂ ಸುರ್ಜೇವಾಲಾ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಇನ್ನಷ್ಟೇ ಎಫ್ಐಆರ್ ದಾಖಲಿಸಬೇಕಿದೆ.
ಸಚಿವರಿಗೆ ಸುರ್ಜೇವಾಲಾ ಟಾಸ್ಕ್: ಪಕ್ಷದ ಅಭ್ಯರ್ಥಿಗೆ ಸೋಲಾದ್ರೆ ಸಚಿವ ಸ್ಥಾನಕ್ಕೆ ಕುತ್ತು ಬರುತ್ತಾ?
ಹರಾರಯಣದಲ್ಲಿ ಸಾರ್ವಜನಿಕ ಭಾಷಣ ಮಾಡುತ್ತಿದ್ದ ವೇಳೆ ಸುರ್ಜೇವಾಲಾ ‘ಬಿಜೆಪಿಯನ್ನು ಬೆಂಬಲಿಸುವವರಿಗೆ ರಾಕ್ಷಸ ಸ್ವಭಾವವಿದೆ. ಮಹಾಭಾರತದ ಭೂಮಿಯಿಂದ ನಾನು ಅವರನ್ನು ಶಪಿಸುತ್ತೇನೆ. ಬಿಜೆಪಿ ಮತ್ತು ಅದಕ್ಕೆ ಮತ ಹಾಕುವವರು ರಾಕ್ಷಸರು’ ಎಂದಿದ್ದರು. ಈ ಹೇಳಿಕೆ ವಿರುದ್ಧ ಬಿಜೆಪಿ ಭಾರೀ ಆಕ್ರೋಶ ಹೊರಹಾಕಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ