
ಬೆಂಗಳೂರು/ನವದೆಹಲಿ (ಆ.03): ಕಾವೇರಿ ಜಲ ವಿವಾದ (Cauvery Water Dispute) ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಕರ್ನಾಟಕ ಪಾಲಿಸುತ್ತಿಲ್ಲ ಎಂದು ಆರೋಪಿಸಿ ನೆರೆಯ ತಮಿಳುನಾಡು ಸರ್ಕಾರ (Tamil Nadu Government) ಇದೀಗ ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲೇರಿದೆ.
ತಮಿಳುನಾಡು ಸಲ್ಲಿಸಿರುವ ಅರ್ಜಿಯಲ್ಲಿ, 'ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ನಿಗದಿಪಡಿಸಿದ್ದ ಜೂನ್ (June) ಹಾಗೂ ಜುಲೈ (July) ತಿಂಗಳ ನೀರಿನ ಪಾಲನ್ನು ಕರ್ನಾಟಕ ಸರ್ಕಾರ (Karnataka Government) ನಮಗೆ ಬಿಡುಗಡೆ ಮಾಡಿಲ್ಲ' ಎಂದು ಗಂಭೀರ ಆರೋಪ ಮಾಡಿದೆ.
ಕರ್ನಾಟಕದಲ್ಲಿ ಮಳೆಯ ಅಭಾವ ಅಥವಾ ಜಲಾಶಯಗಳ ನೀರಿನ ಮಟ್ಟವನ್ನು ಆಧರಿಸಿ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತಿರುವ ನಡುವೆಯೇ, ತಮಿಳುನಾಡು ನವದೆಹಲಿಯಲ್ಲಿ ಸುಪ್ರೀಂ ಕದ ತಟ್ಟಿರುವುದು ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ಮತ್ತೆ ಆತಂಕ ಮತ್ತು ಕಾವು ಹೆಚ್ಚಾಗುವಂತೆ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ