ಕಾವೇರಿ ನೀರಿಗಾಗಿ ಮತ್ತೆ ಕ್ಯಾತೆ: ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು!

Published : Aug 03, 2026, 05:17 PM IST
Cauvery water dispute

ಸಾರಾಂಶ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶದಂತೆ ಜೂನ್ ಮತ್ತು ಜುಲೈ ತಿಂಗಳ ನೀರನ್ನು ಕರ್ನಾಟಕ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಬಾಕಿ ನೀರನ್ನು ತಕ್ಷಣವೇ ಬಿಡುಗಡೆ ಮಾಡಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಮನವಿ ಮಾಡಿದೆ.

ಬೆಂಗಳೂರು/ನವದೆಹಲಿ (ಆ.03): ಕಾವೇರಿ ಜಲ ವಿವಾದ (Cauvery Water Dispute) ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಕರ್ನಾಟಕ ಪಾಲಿಸುತ್ತಿಲ್ಲ ಎಂದು ಆರೋಪಿಸಿ ನೆರೆಯ ತಮಿಳುನಾಡು ಸರ್ಕಾರ (Tamil Nadu Government) ಇದೀಗ ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲೇರಿದೆ.

ಸಿಡಬ್ಲ್ಯೂಎಂಎ ಆದೇಶ ಪಾಲಿಸಿಲ್ಲವೆಂದು ಆರೋಪ!

ತಮಿಳುನಾಡು ಸಲ್ಲಿಸಿರುವ ಅರ್ಜಿಯಲ್ಲಿ, 'ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ನಿಗದಿಪಡಿಸಿದ್ದ ಜೂನ್ (June) ಹಾಗೂ ಜುಲೈ (July) ತಿಂಗಳ ನೀರಿನ ಪಾಲನ್ನು ಕರ್ನಾಟಕ ಸರ್ಕಾರ (Karnataka Government) ನಮಗೆ ಬಿಡುಗಡೆ ಮಾಡಿಲ್ಲ' ಎಂದು ಗಂಭೀರ ಆರೋಪ ಮಾಡಿದೆ.

ಸುಪ್ರೀಂ ಕೋರ್ಟ್‌ಗೆ ತಮಿಳುನಾಡು ಮಾಡಿದ ಮನವಿ ಏನು?

  • ಕರ್ನಾಟಕದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ತಮಿಳುನಾಡು, ಸುಪ್ರೀಂ ಕೋರ್ಟ್ ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ವಿನಂತಿಸಿದೆ.
  • ಜೂನ್ ಮತ್ತು ಜುಲೈ ತಿಂಗಳಲ್ಲಿ ಹರಿಸಬೇಕಿದ್ದ ಬಾಕಿ ನೀರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸ್ಪಷ್ಟ ನಿರ್ದೇಶನ ನೀಡಬೇಕು.
  • CWMA ಆದೇಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಕ್ತ ಖಡಕ್ ಸೂಚನೆ ಹೊರಡಿಸಬೇಕು.

ಕರ್ನಾಟಕದಲ್ಲಿ ಮಳೆಯ ಅಭಾವ ಅಥವಾ ಜಲಾಶಯಗಳ ನೀರಿನ ಮಟ್ಟವನ್ನು ಆಧರಿಸಿ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತಿರುವ ನಡುವೆಯೇ, ತಮಿಳುನಾಡು ನವದೆಹಲಿಯಲ್ಲಿ ಸುಪ್ರೀಂ ಕದ ತಟ್ಟಿರುವುದು ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ಮತ್ತೆ ಆತಂಕ ಮತ್ತು ಕಾವು ಹೆಚ್ಚಾಗುವಂತೆ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Kangana Ranaut: ಹೌದು, ನಾನು ಮಾಡರೇಟ್ ಹಿಂದೂ ಆಗಿದ್ದೆ, ಈಗ ಸಂಘಿ ಆಗ್ಬೇಕು ಆ ಟ್ರೋಲ್ ವಿಡಿಯೋಗೆ ಕಂಗನಾ ಬೆಂಕಿ ರಿಪ್ಲೆ!
ಕದ್ದ ಚಿನ್ನ, ಹಣವನ್ನ ಮನೆಗೆ ಎಸೆದ ಕಳ್ಳರು.. ಅದರಲ್ಲಿತ್ತು ಒಂದು ಭಾವನಾತ್ಮಕ ಪತ್ರ!