ಏ.1ರಿಂದ ಮನೆ ಮನೆ ಸಮೀಕ್ಷೆ: 31 ರೀತಿಯ ವಿವರ ಸಂಗ್ರಹ

Kannadaprabha News   | Asianet News
Published : Jan 10, 2020, 07:35 AM IST
ಏ.1ರಿಂದ ಮನೆ ಮನೆ ಸಮೀಕ್ಷೆ: 31 ರೀತಿಯ ವಿವರ ಸಂಗ್ರಹ

ಸಾರಾಂಶ

ಕೇಂದ್ರ ಸರ್ಕಾರ ಏ.1ರಿಂದ ದೇಶವ್ಯಾಪಿ ಮನೆಗಣತಿಗೆ ಅಧಿಸೂಚನೆ ಹೊರಡಿಸಿದೆ. ಮನೆಗಣತಿ ವೇಳೆ ಮನೆಮನೆಗೆ ಆಗಮಿಸಲಿರುವ ಗಣತಿದಾರರು, ಮನೆಯ ಯಜಮಾನರ ಮೊಬೈಲ್‌ ಸೇರಿದಂತೆ ಒಟ್ಟು 31 ಬಗೆಯ ಮಾಹಿತಿಗಳನ್ನು ಕಲೆ ಹಾಕಲಿದ್ದಾರೆ.

ನವದೆಹಲಿ[ಜ.10]: ಪೌರತ್ವ ಮಸೂದೆ (ಸಿಎಎ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಬಗ್ಗೆ ದೇಶವ್ಯಾಪಿ ಹೋರಾಟ ನಡೆಯುತ್ತಿರುವ ಹಂತದಲ್ಲೇ, ಕೇಂದ್ರ ಸರ್ಕಾರ ಏ.1ರಿಂದ ದೇಶವ್ಯಾಪಿ ಮನೆಗಣತಿಗೆ ಗುರುವಾರ ಅಧಿಸೂಚನೆ ಹೊರಡಿಸಿದೆ. ಮನೆಗಣತಿ ವೇಳೆ ಮನೆಮನೆಗೆ ಆಗಮಿಸಲಿರುವ ಗಣತಿದಾರರು, ಮನೆಯ ಯಜಮಾನರ ಮೊಬೈಲ್‌ ಸೇರಿದಂತೆ ಒಟ್ಟು 31 ಬಗೆಯ ಮಾಹಿತಿಗಳನ್ನು ಕಲೆ ಹಾಕಲಿದ್ದಾರೆ.

ಈ ಕುರಿತು ಬುಧವಾರ ಅಧಿಸೂಚನೆ ಹೊರಡಿಸಿರುವ ರಿಜಿಸ್ಟ್ರಾರ್‌ ಜನರಲ್‌ ಮತ್ತು ಗಣತಿ ಆಯುಕ್ತರು, ಗಣತಿ ಅಧಿಕಾರಿಗಳು ಏ.1ರಿಂದ ಸೆ.30ರವರೆಗೆ ದೇಶವ್ಯಾಪಿ ಮನೆಗಣತಿ ಮಾಡಲಿದ್ದಾರೆ. ಈ ವೇಳೆ ಅವರಿಗೆ ಪ್ರತಿ ಮನೆಯಿಂದ 31 ಬಗೆಯ ಮಾಹಿತಿ ಸಂಗ್ರಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಏನೇನು ಮಾಹಿತಿ?:

2021ರಲ್ಲಿ ನಡೆಸಲು ಉದ್ದೇಶಿಸಿರುವ ಜನಗಣತಿಗೆ ಪೂರ್ವವಾಗಿ ಸರ್ಕಾರ ಈ ಮನೆಗಣತಿ ನಡೆಸುತ್ತಿದೆ. ಇದರಲ್ಲಿ ಮನೆಯ ಯಜಮಾನರ ಮೊಬೈಲ್‌ ನಂಬರ್‌ ಸೇರಿದಂತೆ ವಿವಿಧ ರೀತಿಯ ಮಾಹಿತಿ ಸಂಗ್ರಹಿಸಲಾಗುವುದು. ಜನಗಣತಿ ಸಂಬಂಧ ಮಾಹಿತಿ ಹಂಚಿಕೊಳ್ಳಲು ಮಾತ್ರ ಈ ಮೊಬೈಲ್‌ ನಂಬರ್‌ ಉಪಯೋಗಿಸಿಕೊಳ್ಳಲಾಗುತ್ತದೆ. ಉಳಿದಂತೆ ಯಾವುದೇ ವಿಷಯಕ್ಕೆ ನಂಬರ್‌ ಬಳಸಿಕೊಳ್ಳಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಕೇಂದ್ರ ಸರ್ಕಾರವು ಮನೆಗಣತಿಯ ಜೊತೆಜೊತೆಗೇ 2020ರ ಸೆಪ್ಟೆಂಬರ್‌ ವೇಳೆಗೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಅನ್ನೂ ಪೂರ್ಣಗೊಳಿಸಲು ನಿರ್ಧರಿಸಿದೆ.

ಏನೇನು ಸಂಗ್ರಹ?

ಮನೆ ಮಾಲಿಕನ ಮೊಬೈಲ್‌ ನಂಬರ್‌, ಮನೆಯಲ್ಲಿನ ಶೌಚಾಲಯ, ಸ್ನಾನ ಗೃಹ, ತ್ಯಾಜ್ಯ ನಿರ್ವಹಣೆ, ಟಿವಿ, ಮೊಬೈಲ್‌, ಪೋನ್‌, ಇಂಟರ್ನೆಟ್‌, ರೆಡಿಯೋ, ಲ್ಯಾಪ್‌ಟಾಪ್‌, ಕಂಪ್ಯೂಟರ್‌, ಸೈಕಲ್‌, ಸ್ಕೂಟರ್‌, ಮೊಪೆಡ್‌, ಬೈಕ್‌ ಹಾಗೂ ಕಾರ್‌ ಸೇರಿ ವಾಹನಗಳ ಸಂಖ್ಯೆ, ಮನೆ ನಂಬರ್‌, ಮನೆಯಲ್ಲಿರುವ ಸದಸ್ಯರ ಸಂಖ್ಯೆ, ವಿವಾಹವಾದವರ ಸಂಖ್ಯೆ, ಜಾತಿ, ವಿವಾಹವಾದ ಸದಸ್ಯರ ಸಂಖ್ಯೆ, ಕುಡಿವ ನೀರಿನ ಮೂಲ, ಅಡುಗೆ ಮನೆ, ಗ್ಯಾಸ್‌ ಸೌಲಭ್ಯ ಮುಂತಾದವುಗಳ ಬಗ್ಗೆ, ಮನೆ ವಿಧ, ಮನೆ ನೆಲದ ವಿಧ, ಮನೆಯ ಸ್ಥಿತಿ, ವಿದ್ಯುತ್‌ ಸೌಲಭ್ಯಗಳ ಬಗ್ಗೆ ಮಾಹಿತಿ ಸಂಗ್ರಹ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತಿರುಪತಿ ತಿಮ್ಮಪ್ಪನಿಗೆ ಅಂಗವಸ್ತ್ರದ ಮೋಸ, ಪ್ಲಾಸ್ಟಿಕ್‌ ಸಿಲ್ಕ್‌ ಕೊಟ್ಟು 55 ಕೋಟಿ ಯಾಮಾರಿಸಿದ ಕಂಪನಿ!
ರಾಷ್ಟ್ರಪತಿಗಳು ಪದಕ ನೀಡುತ್ತಿದ್ದಂತೆ ಕೊರಳಿನಿಂದ ಕಿತ್ತೆಸೆದ ಬಾಲಕ! ವೈರಲ್ ವಿಡಿಯೋ ಹಿಂದಿನ ಸತ್ಯವೇನು?