
ನವದೆಹಲಿ(ಮಾ.03): ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾಗಿ ಕೆಜಿಗೆ 200 ರು.ವರೆಗೆ ತಲುಪಿದ್ದ ಈರುಳ್ಳಿ ಬೆಲೆ ಇದೀಗ ಕೇಜಿಗೆ 10 ರು.ವರೆಗೂ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಮತ್ತು ಮಾರುಕಟ್ಟೆಗೆ ಹೊಸ ಬೆಳೆ ಆಗಮನವಾಗಿರುವ ಹಿನ್ನೆಲೆಯಲ್ಲಿ ಈರುಳ್ಳಿ ರಫ್ತಿಗೆ ಹೇರಿದ್ದ ನಿಷೇಧ ಹಿಂಪಡೆದು, ಮಾ.15 ರಿಂದ ಈರುಳ್ಳಿ ರಫ್ತಿಗೆ ಅವಕಾಶ ಮಾಡಿ ಕೊಡಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.
ಆ ಮೂಲಕ ಸುಮಾರು ಆರು ತಿಂಗಳ ಕಾಲ ಈರುಳ್ಳಿ ರಫ್ತಿನ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಿದಂತಾಗಿದೆ. ಮಾಚ್ರ್ 15ರಿಂದ ರೈತರ ಹಿತಕ್ಕಾಗಿ ಸರ್ಕಾರ ಈರುಳ್ಳಿ ರಫ್ತಿಗೆ ಅವಕಾಶ ಮಾಡಿಕೊಡಲಿದೆ.
ಈ ನಿರ್ಧಾರ ರೈತರ ಆದಾಯ ಹೆಚ್ಚಳಕ್ಕೆ ಕಾರಣವಾಗಲಿದೆ ಎಂದು ವಾಣಿಜ್ಯ ಹಾಗೂ ಕೈಗಾರಿಕ ಸಚಿವ ಪಿಯೂಷ್ ಗೋಯಲ್ ಟ್ವೀಟ್ ಮಾಡಿದ್ದಾರೆ. ಸದ್ಯ ಹೊಸ ಬೆಳೆ ಮಾರುಕಟ್ಟೆಗೆ ಪ್ರವೇಶಿಸಿದ್ದು, ಬಂಪರ್ ಬೆಳೆಯಿಂದಾಗಿ ಬೆಲೆ ಇಳಿಕೆಯಾಗಿದೆ. ಹಾಗಾಗಿ ಸರ್ಕಾರ ಈರುಳ್ಳಿ ರಫ್ತಿಗೆ ಅವಕಾಶ ಮಾಡಿಕೊಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ