
ನವದೆಹಲಿ(ಜೂ.05): ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತಕ್ಕೆ ವಲಸೆ ಬಂದಿರುವ ಮುಸ್ಲೇಮತರರಿಗೆ ಪೌರತ್ವ ಸಿಗುತ್ತಿದೆ. ಇದೀಗ ಕೇಂದ್ರ ಸರ್ಕಾರ 2014ರ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಮುಸ್ಲೇಮೇತರರಿಗೆ ಪೌರತ್ವ ನೀಡಲು ಅರ್ಜಿ ಆಹ್ವಾನಿಸಿದೆ.
'ಭಾರತದ ಪೌರತ್ವ' ಮೋದಿ ಸರ್ಕಾರ ಕೊಂಡಾಡಿದ ಸಿಖ್ ನಿರಾಶ್ರಿತರು
ಕಳೆದ ವಾರ ಕೇಂದ್ರ ಗೃಹ ಇಲಾಖೆ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಆಫ್ಘಾನಿಸ್ತಾನದಿಂದ ಬಂದು ಗುಜರಾತ್, ರಾಜಸ್ಥಾನ, ಪಂಜಾಬ್, ಚತ್ತೀಸಘಡ ಹಾಗೂ ಪರ್ಯಾಣದ 13 ಜಿಲ್ಲೆಗಳಲ್ಲಿ ನೆಲೆಸಿರುವ ಅರ್ಹ ಮುಸ್ಲೇಮೇತರ ವಲಸೆಗಾರರಿಂದ ಭಾರತೀಯ ಪೌರತ್ವಕ್ಕೆ ಅರ್ಜಿ ಅಹ್ವಾನಿಸಿತ್ತು. ಇದೀಗ ದೇಶದ ಯಾವುದೇ ಮೂಲೆಯಲ್ಲಿರುವ ಅರ್ಹ ವ್ಯಕ್ತಿಗಳು ಭಾರತೀಯ ಪೌರತ್ವ ಪಡೆಯಬಹುದು ಎಂದು ಗೃಹ ಸಚಿವಾಲಯ ಹೇಳಿದೆ.
2014ರ ಡಿಸೆಂಬರ್ 31ರೊಳಗೆ ಭಾರತಕ್ಕೆ ವಲಸೆ ಬಂದ ಅಲ್ಪಸಂಖ್ಯಾತ ಸಮುದಾಯದವರಿಗೆ ಭಾರತ ಪೌರತ್ವ ನೀಡಲು ಕೇಂದ್ರ ಸರ್ಕಾರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಿದೆ. 2019ರಲ್ಲಿ ಮಾಡಿದ ಈ ತಿದ್ದುಪಡಿ ಭಾರಿ ವಿರೋಧಕ್ಕೂ ಕಾರಣವಾಯಿತು.
ಪೌರತ್ವ ಕಾಯ್ದೆ ಹೋರಾಟಕ್ಕೆ PFI ಹಣ, ಡಿಜಿಹಳ್ಳಿ ಗಲಭೆಯಲ್ಲೂ ಕೈವಾಡ.
ಸದ್ಯ ಕೇಂದ್ರ ಸರ್ಕಾರ 2009ರಲ್ಲಿ ರೂಪಿಸಲಾದ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಅರ್ಹರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ದಾಖಲೆ ಸಮೇತ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದವರಿಗೆ ಕೇಂದ್ರ ಪೌರತ್ವ ನೀಡಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ