
ನವದೆಹಲಿ(ಜೂ.29): ದೇಶದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ಬೆನ್ನಲ್ಲೇ, ದೊಡ್ಡ ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುವವರು ಹಾಗೂ ಯಾತ್ರೆಗಳಲ್ಲಿ ಪಾಲ್ಗೊಳ್ಳುವವರು ಯಾವುದೇ ರೋಗಲಕ್ಷಣಗಳನ್ನು ಹೊಂದಿರಬಾರದು ಮತ್ತು ಲಸಿಕೆ ಪಡೆದವರಾಗಿರಬೇಕು ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರವು ಎಲ್ಲ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದು, ‘ಮುಂದಿನ ದಿನಗಳಲ್ಲಿ ನಡೆಯಲಿರುವ ಜಾತ್ರೆಗಳು, ವಿವಿಧ ಉತ್ಸವಗಳು ಹಾಗೂ ಸಭೆ-ಸಮಾರಂಭಗಳು ಸೋಂಕು ಹರಡುವಿಕೆಯ ಕೇಂದ್ರವಾಗಿ ಮಾರ್ಪಾಡಾಗಬಹುದು. ಇದರಲ್ಲಿ ಪಾಲ್ಗೊಳ್ಳಲು ಜನರು ಅಂತಾರಾಜ್ಯ ಅಥವಾ ಅಂತರ್ಜಿಲ್ಲಾ ಪ್ರಯಾಣವನ್ನೂ ಮಾಡಬಹುದು.
Covid Crisis: ಮಾಸ್ಕ್ ಧರಿಸದವರಿಗೆ ದಂಡ ಹಾಕಿ: ತಜ್ಞರು
ಹೀಗಾಗಿ ಇಂಥ ಉತ್ಸವ, ಜಾತ್ರೆ ಹಾಗೂ ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಲಸಿಕೆ ಪಡೆದವರಾಗಿರಬೇಕು ಹಾಗೂ ರೋಗ ಲಕ್ಷಣಗಳನ್ನು ಹೊಂದಿರಬಾರದು ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಈ ರೀತಿ ಯಾತ್ರೆ/ಪ್ರವಾಸ ಕೈಗೊಳ್ಳುವವರು ಇದ್ದರೆ ಅವರ ಪ್ರವಾಸದ 15 ದಿನ ಮುಂಚಿತವಾಗಿಯೇ ಗುರುತಿಸಿ ಲಸಿಕೆ ನೀಡಬೇಕು’ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ