ಮೋದಿ ಸರ್ಕಾರದ ಮಹತ್ವದ ಘೋಷಣೆ: 20 ಲಕ್ಷ ಮಂದಿಗೆ ಲಾಭ!

Published : Nov 17, 2019, 04:34 PM IST
ಮೋದಿ ಸರ್ಕಾರದ ಮಹತ್ವದ ಘೋಷಣೆ: 20 ಲಕ್ಷ ಮಂದಿಗೆ ಲಾಭ!

ಸಾರಾಂಶ

ಮೋದಿ ಸರ್ಕಾರದ ಮಹತ್ವದ ಘೋಷಣೆ| ಕೇಂದ್ರದ ನಿರ್ಧಾರದಿಂದ 20 ಲಕ್ಷ ಮಂದಿಗೆ ಲಾಭ| ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್‌ನಲ್ಲಿ ಮಾಹಿತಿ

ನವದೆಹಲಿ[ಅ.17]: ಕೇಂದ್ರ ಸರ್ಕಾರ ರಾಷ್ಟ್ರ ರಾಜಧಾನಿ ದೆಹಲಿಯ ಹಳ್ಳಿಗಾಡು ಪ್ರದೇಶದಲ್ಲಿ ನೆಲೆಸುತ್ತಿರುವ ಲಕ್ಷಾಂತರ ಮಂದಿಗೆ ಸಿಹಿ ಸುದ್ದಿ ನೀಡಿದೆ. ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮೂಲಕ ಈ ಮಾಹಿತಿ ನೀಡಿದ್ದಾರೆ.

ಟ್ವಿಟ್ ಮಾಡಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ 'ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ ದೆಹಲಿ ಪರ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳುತ್ತಾ, 88 ಹಳ್ಳಿಗಳನ್ನು ನಗರೀಕೃತ ಗ್ರಾಮವನ್ನಾಗಿಸುವ ನಿರ್ಧಾರ ತೆಗೆದುಕೊಂಡಿದೆ' ಎಂದಿದ್ದಾರೆ.

ಅಲ್ಲದೇ 'ಕೇಂದ್ರದ ಈ ನಿರ್ಧಾರದಿಂದ 20 ಲಕ್ಷ ಜನರು ನೇರ ಫಲಾನುಭವಿಗಳಾಗುತ್ತಾರೆ. ಈ ಹಳ್ಳಿಗಳಲ್ಲಿ ವಾಸಿಸುವ ಜನರಿಗೆ ಎಲ್ಲಾ ಸೌಕರ್ಯಗಳು ಸಿಗಲಿವೆ. ಎಲ್ಲಾ ಯೋಜನೆಗಳು ಜಾರಿಯಾಗಲಿವೆ. ಇಲ್ಲಿನ ಜನರಿಗೆ ಸುಲಭವಾಘಿ ಸಾಲ ಸಿಗಲಿದೆ ಹಾಗೂ ಒಳ್ಳೆಯ ಗುಣಮಟ್ಟದ ರಸ್ತೆಗಳೂ ನಿರ್ಮಾಣವಾಗಲಿದೆ' ಎಂದಿದ್ದಾರೆ.

ಅನಧಿಕೃತ ಕಾಲೋನಿಗಳ 40 ಲಕ್ಷ ಜನರಿಗೂ ಲಾಭ ನೀಡುವ ಯೋಜನೆ

ಕಳೆದ ಅಕ್ಟೋಬರ್ ತಿಂಗಳಲ್ಲಿ ಕೇಂದ್ರ ಸರ್ಕಾರ ಕ್ಯಾಬಿನೆಟ್ ಸಭೆಯೊಂದರಲ್ಲಿ ದೆಹಲಿಯ ಅನಧಿಕೃತ ಕಾಲೋನಿಯಲ್ಲಿ ವಾಸಿಸುವ 40 ಲಕ್ಷ ಜನರಿಗೆ ಮನೆಯ ಮಾಲೀಕತ್ವ ಹಕ್ಕು ನೀಡುವ ನಿರ್ಧಾರ ತೆಗೆದುಕೊಂಡಿತ್ತು. ಕೇಂದ್ರ ಸಚಿವ ಹರ್ದೀಪ್ ಸಿಂಗ್, ಕ್ಯಾಬಿನೆಟ್ ಸಭೆ ಬಳಿಕ ಪತ್ರಿಕಾ ಗೋಷ್ಠಿಯೊಂದನ್ನು ನಡೆಸಿ 'ದೆಹಲಿಯ ಅನಧಿಕೃತ ಕಾಲೋನಿಗಳನ್ನು ಅಧಿಕೃತಗೊಳಿಸಲು ನಿರ್ಧರಿಸಲಾಗಿದೆ. ದೆಹಲಿಯಲ್ಲಿ ಒಟ್ಟು 1,797 ಅಕ್ರಮ ಕಾಲೋನಿಗಳಿವೆ. ಸರ್ಕಾರದ ಈ ನಿರ್ಧಾರದಿಂದ ಕಾಲೋನಿಯಲ್ಲಿ ವಾಸಿಸುವ 40 ಲಕ್ಷ ಮಂದಿಗೆ ಲಾಭವಾಗಲಿದೆ' ಎಂದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಕೋಕಾ ಕೋಲಾ ಕಂಪನಿ ಚಾರ್ಟೆಡ್ ಅಕೌಂಟೆಂಟ್ ಹಠಾತ್ ಸಾವು
ದೇವಸ್ಥಾನದ ಕಾರ್ತಿಕ ದೀಪದ ಪರವಾಗಿ ತೀರ್ಪು ನೀಡಿದ ಜಡ್ಜ್‌, ಸೇಡು ತೀರಿಸಿಕೊಳ್ಳಲು ಮುಂದಾದ ತಮಿಳುನಾಡು ಸರ್ಕಾರ!