
ನವದೆಹಲಿ (ಜೂ.26): ದೇಶದ 16 ರಾಜ್ಯಗಳಿಗೆ ಬಂಡವಾಳ ಹೂಡಿಕೆಗೆ ವಿಷೇಶ ನೆರವು ನೀಡಿರುವ ಕೇಂದ್ರ ಬಿಜೆಪಿ ಸರ್ಕಾರ, ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಬರೋಬ್ಬರಿ 3,647 ಕೋಟಿ ರೂಪಾಯಿ ಅನುದಾನವ್ನು ಬಿಡುಗಡೆ ಮಾಡಿದೆ.
ಕೇಂದ್ರದ 2023-24 ಹಣಕಾಸು ವರ್ಷದ ವಿಶೇಷ ಯೋಜನೆ ಅಡಿಯಲ್ಲಿ ಬಂಡವಾಳ ಹೂಡಿಕೆಗಾಗಿ 16 ರಾಜ್ಯಗಳಿಗೆ 56,415 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ಈ ಪೈಕಿ ಕರ್ನಾಟಕ ಸೇರಿದಂತೆ 16 ರಾಜ್ಯಗಳಿಗೆ ಬಂಡವಾಳ ಹೂಡಿಕೆಗೆ ಹಣಕಾಸು ಬಿಡುಗಡೆಗೊಳಿಸಲಾಗಿದೆ. ಈ ಯೋಜನೆಯಡಿ ಕರ್ನಾಟಕಕ್ಕೆ 3647 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಆರೋಗ್ಯ, ಶಿಕ್ಷಣ, ನೀರಾವರಿ, ನೀರು ಸರಬರಾಜು, ವಿದ್ಯುತ್, ರಸ್ತೆಗಳು, ಸೇತುವೆಗಳು ಮತ್ತು ರೈಲ್ವೆ ಸೇರಿದಂತೆ ವಿವಿಧ ವಲಯಗಳಲ್ಲಿ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.
ಮಹಿಳೆಯರಂತೆ ಉಚಿತ ಪ್ರಯಾಣ ಬೇಡ, ಬಸ್ನಲ್ಲಿ ಮದ್ಯದ ಬಾಟಲಿ ಸಾಗಾಟಕ್ಕೆ ಅವಕಾಶ ಕೊಡಿ
ಈ ವಲಯಗಳಲ್ಲಿನ ಯೋಜನೆಗಳ ವೇಗವನ್ನು ಹೆಚ್ಚಿಸಲು ಹಾಗೂ ಜಲ ಜೀವನ್ ಮಿಷನ್ ಮತ್ತು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ರಾಜ್ಯ ಪಾಲನ್ನು ಪೂರೈಸಲು ಈ ಯೋಜನೆಯಡಿಯಲ್ಲಿ ರಾಜ್ಯಗಳಿಗೆ ಹಣವನ್ನು ಒದಗಿಸಲಾಗಿದೆ. 2023-24 ರ ಕೇಂದ್ರ ಬಜೆಟ್ನಲ್ಲಿ ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು 2023-24 ಯೋಜನೆಯನ್ನು ಘೋಷಿಸಲಾಗಿತ್ತು. ಇದೀಗ ಬಜೆಟ್ ನಲ್ಲಿ ಘೋಷಣೆ ಮಾಡಿದ ಯೋಜನೆಯಂತೆ ಹಣ ಬಿಡುಗಡೆ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ