
ನವದೆಹಲಿ (ಜ.19): ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ಒಂದಾಗಿರುವ ಮಂಗಳೂರು-ಮೂಡಿಗೆರೆ- ತುಮಕೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿನ 10.8 ಕಿಲೋಮೀಟರ್ 2 ಲೇನ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 343.74 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಲಾಗಿದೆ.
ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಕರ್ನಾಟಕದಲ್ಲಿ NH-73ರ ಮಂಗಳೂರು-ಮುದಿಗೆರೆ-ತುಮಕೂರು ವಿಭಾಗದ ವಿಸ್ತರಣೆಗೆ 343.74 ಕೋಟಿ ರೂ. ಮಂಜೂರು ಮಾಡಲಾಗಿದೆ. ಅದನ್ನು ಘಾಟ್ ರಸ್ತೆಯನ್ನು ಸುಸಜ್ಜಿತ 2-ಲೇನ್ ರಸ್ತೆಯನ್ನಾಗಿ ಪರಿವರ್ತಿಸಲಾಗಿದೆ. ಈಗ 10.8 ಕಿಮೀ ವ್ಯಾಪಿಸಿರುವ ಈ ಯೋಜನೆಯು ಇಂಜಿನಿಯರಿಂಗ್ ಖರೀದಿ ಮತ್ತು ನಿರ್ಮಾಣ (ಇಪಿಸಿ) ಮೋಡ್ ಅಡಿಯಲ್ಲಿ ಕಾರ್ಯಗತಗೊಳಿಸಲು ನಿರ್ಧರಿಸಲಾಗಿದೆ.
ಕರ್ನಾಟಕ- ಅಯೋಧ್ಯೆ ಪಾದಯಾತ್ರೆ: ರಾಮ ಮಂದಿರಕ್ಕೆ 1,800 ಕಿ.ಮೀ. ನಡೆದುಕೊಂಡು ಹೋದ ಗದಗಿನ ಗಾಂಧಿ
ಸವಾಲಿನ ಗುಡ್ಡಗಾಡು ಮತ್ತು ಪರ್ವತ ಭೂ ದೃಶ್ಯಗಳನ್ನು ಹೊಂದಿರುವ ಚಾರ್ಮಾಡಿ ಘಾಟ್ನಲ್ಲಿ ಸಾರಿಗೆ ಸಂಚಾರವನ್ನು ಹಾಗೂ ಈ ಪ್ರದೇಶದ ಸಂಪರ್ಕವನ್ನು ಹೆಚ್ಚಳ ಮಾಡಲು ಈ ಅನುದಾನ ಸಮಪರ್ಕಕವಾಗಿ ಬಳಕೆ ಆಗಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ