
ನವದೆಹಲಿ(ನ.20): ಕೊರೋನಾ ವಾರಿಯರ್ಸ್ ಅದೆಷ್ಟೇ ಧನ್ಯವಾದ ಹೇಳಿದರೂ ಸಾಕಾಗಲ್ಲ. ಕಾರಣ ಅವರ ನಿಸ್ವಾರ್ಥ ಸೇವೆಯಿಂದ ಕೋಟ್ಯಾಂತರ ಭಾರತೀಯರು ಸುರಕ್ಷಿತವಾಗಿದ್ದಾರೆ. ಇದೀಗ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಪ್ರಕಟಿಸಿದೆ. ಕೊರೋನಾ ವಾರಿಯರ್ಸ್ ಮಕ್ಕಳಿಗೆ 5 MBBS ಸೀಟು ಮೀಸಲಿಟ್ಟಿದೆ.
ಕೊರೋನಾ ಕೊಲ್ಲಲು ಕೊನೆಗೂ ಹೊಸ ಅಸ್ತ್ರ ಸಿಕ್ಕು, 30 ಸೆಕೆಂಡ್ ಸಾಕು!.
ಕೊರೋನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸಿದ, ಕೊರೋನಾ ಸೇವೆಯಲ್ಲಿ ಸಾವನ್ನಪ್ಪಿದವರ ಮಕ್ಕಳಿಗೆ 5 ಎಂಬಿಬಿಎಸ್ ಸೀಟುಗಳನ್ನು ಮೀಸಲಿಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ.
ನ್ಯಾಷನಲ್ ಟೆಸ್ಟಿಂಗ್ ಎಜೆನ್ಸಿ ನಡೆಸಿದ ನೀಟ್ 2020 ರ್ಯಾಂಕ್ ಆಧಾರದಲ್ಲಿ ಮೆಡಿಕಲ್ ಕೌನ್ಸಿಲ್ ಕಮಿಟಿ ಸೀಟು ಹಂಚಿಕೆ ಮಾಡಲಿದೆ. ಈ ಕುರಿತು ವಿಸ್ತೃತ ವಿವರವನ್ನು ಮೆಡಿಕಲ್ ಕೌನ್ಸಲಿ ನೀಡಲಿದೆ ಎಂದು ಹರ್ಷವರ್ಧನ್ ಹೇಳಿದ್ದಾರೆ.
ಕೊರೋನಾ ವೈರಸ್ ವಕ್ಕರಿಸಿದ ಬಳಿಕ ದೇಶದಲ್ಲಿನ ಆರೋಗ್ಯ ಸ್ಥಿತಿಯನ್ನು ತಹಬದಿಗೆ ತರಲು ಕೊರೋನಾ ವಾರಿಯರ್ಸ್ ಅವಿರತ ಶ್ರಮ ಪಟ್ಟಿದ್ದಾರೆ. ಹೀಗಾಗಿ ಅವರ ಸೇವೆಗೆ ಗೌರವ ನೀಡುವ ಸಲುವಾಗಿ 5 ಸೀಟುಗಳನ್ನು ಮೀಸಲಿಡಲಾಗಿದೆ ಎಂದು ಹರ್ಷವರ್ಧನ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ