ಶೀಘ್ರ ಕೇಂದ್ರ ಸರ್ಕಾರದಿಂದ ಕರ್ನಾಟಕದ ಔಷಧಿ ಕಂಪನಿಗೆ ಬೀಗ

Kannadaprabha News   | Asianet News
Published : Sep 15, 2020, 09:25 AM IST
ಶೀಘ್ರ ಕೇಂದ್ರ ಸರ್ಕಾರದಿಂದ ಕರ್ನಾಟಕದ ಔಷಧಿ ಕಂಪನಿಗೆ ಬೀಗ

ಸಾರಾಂಶ

6 ಕಂಪನಿಗಳು ಮುಚ್ಚುವ ಹಂತದಲ್ಲಿ ಅಥವಾ ವ್ಯಾಜ್ಯದಲ್ಲಿದ್ದು, ಇವುಗಳಲ್ಲಿ ಕರ್ನಾಟಕ ಆ್ಯಂಟಿಬಯೋಟಿಕ್ಸ್‌ ಆ್ಯಂಡ್‌ ಫಾರ್ಮಸ್ಯುಟಿಕಲ್ಸ್‌ ಕಂಪನಿ ಕೂಡ ಸೇರಿದೆ ಎಂದಿದ್ದಾರೆ. ಈ ಕಂಪನಿ ಬೆಂಗಳೂರಿನ ಪೀಣ್ಯ ಹಾಗೂ ಧಾರವಾಡದ ಕೋಟೂರಿನಲ್ಲಿ ಘಟಕ ಹೊಂದಿದೆ.

ನವದೆಹಲಿ (ಸೆ.15): 20 ಕೇಂದ್ರೀಯ ಸಾರ್ವಜನಿಕ ಸ್ವಾಮ್ಯದ ಕಂಪನಿಗಳ ಬಂಡವಾಳ ಹಿಂತೆಗೆತದ ಪ್ರಕ್ರಿಯೆ ಚಾಲ್ತಿಯಲ್ಲಿದೆ. 6 ಕಂಪನಿಗಳು ಮುಚ್ಚುವ ಹಂತದಲ್ಲಿ ಅಥವಾ ವ್ಯಾಜ್ಯದಲ್ಲಿವೆ ಎಂದು ಕೇಂದ್ರ ವಿತ್ತ ಖಾತೆ ರಾಜ್ಯ ಸಚಿವ ಅನುರಾಗ್‌ ಠಾಕೂರ್‌ ಹೇಳಿದ್ದಾರೆ. ಇವುಗಳಲ್ಲಿ ಕರ್ನಾಟಕದ 2 ಕಂಪನಿಗಳು ಸೇರಿವೆ.

ಲೋಕಸಭೆಗೆ ಲಿಖಿತ ಉತ್ತರ ನೀಡಿರುವ ಅವರು, 6 ಕಂಪನಿಗಳು ಮುಚ್ಚುವ ಹಂತದಲ್ಲಿ ಅಥವಾ ವ್ಯಾಜ್ಯದಲ್ಲಿದ್ದು, ಇವುಗಳಲ್ಲಿ ಕರ್ನಾಟಕ ಆ್ಯಂಟಿಬಯೋಟಿಕ್ಸ್‌ ಆ್ಯಂಡ್‌ ಫಾರ್ಮಸ್ಯುಟಿಕಲ್ಸ್‌ ಕಂಪನಿ ಕೂಡ ಸೇರಿದೆ ಎಂದಿದ್ದಾರೆ. ಈ ಕಂಪನಿ ಬೆಂಗಳೂರಿನ ಪೀಣ್ಯ ಹಾಗೂ ಧಾರವಾಡದ ಕೋಟೂರಿನಲ್ಲಿ ಘಟಕ ಹೊಂದಿದೆ.

ಸಂಸತ್ತಲ್ಲಿ ಹೊಸ ಇತಿಹಾಸ, ಸಂಸದರ ಮಧ್ಯೆ ಪ್ಲಾಸ್ಟಿಕ್ ಪರದೆ! ...

ಇನ್ನು ಬಂಡವಾಳ ಹಿಂತೆಗೆತ ಪ್ರಕ್ರಿಯೆಯಲ್ಲಿರುವ 20 ಕಂಪನಿಗಳ ಪಟ್ಟಿಯಲ್ಲಿ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಹಾಗೂ ಉಕ್ಕು ಕಾರ್ಖಾನೆ (ವಿಐಎಸ್‌ಎಲ್‌) ಕೂಡ ಇದೆ ಎಂದು ಅವರು ಹೇಳಿದ್ದಾರೆ. ಏರ್‌ ಇಂಡಿಯಾ, ಪವನ್‌ ಹನ್ಸ್‌, ಭಾರತ್‌ ಪೆಟ್ರೋಲಿಯಂ ಕೂಡ ಬಂಡವಾಳ ಹಿಂತೆಗೆತದ ಪಟ್ಟಿಯಲ್ಲಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಾಕ್ ಹೋಗಿದ್ದ 79 ವರ್ಷದ ಅಜ್ಜಿ ನಾಪತ್ತೆ: ನೆಕ್ಲೇಸ್‌ಗೆ ಮೊಮ್ಮಗ ಅಳವಡಿಸಿದ ಜಿಪಿಎಸ್‌ನಿಂದ ಪತ್ತೆ
ಯಾವ ಭಯವೂ ಇಲ್ಲದೆ ಬೇಲಿ ಹಾರಿ ಭಾರತ ಪ್ರವೇಶಿಸುತ್ತಿದ್ದಾರೆ ಬಾಂಗ್ಲಾದೇಶಿಗಳು, ವಿಡಿಯೋ ವೈರಲ್