
ನವದೆಹಲಿ(ಮೇ.13): ದಿನೇ ದಿನೇ ತನ್ನ ಪ್ರತಾಪ ತೋರುತ್ತಿರುವ ಕೊರೋನಾ ವೈರಸ್ ದೇಶದಲ್ಲಿ ಯಾವ ಪ್ರಮಾಣದಲ್ಲಿ ಹಬ್ಬಿದೆ ಎಂಬುದನ್ನು ಪತ್ತೆ ಮಾಡಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ದೇಶದ 21 ರಾಜ್ಯಗಳ 69 ಜಿಲ್ಲೆಗಳಲ್ಲಿ ರಾರಯಂಡಮ್ ಪರೀಕ್ಷೆ ನಡೆಸಲು ಮುಂದಾಗಿದೆ. ಇದರಲ್ಲಿ ಕರ್ನಾಟಕದ ಬೆಂಗಳೂರು ನಗರ, ಚಿತ್ರದುರ್ಗ ಹಾಗೂ ಕಲಬುರಗಿ ಜಿಲ್ಲೆಗಳೂ ಇವೆ.
ಸಮುದಾಯ ಹಾಗೂ ಆಸ್ಪತ್ರೆ ಆಧರಿತ ಸಮೀಕ್ಷೆ ಇದಾಗಿದೆ. ಪ್ರತಿ ಜಿಲ್ಲೆಯ 10 ಕ್ಲಸ್ಟರ್ಗಳಲ್ಲಿ ಮನೆಯಿಂದ ಒಬ್ಬರಂತೆ 400 ಜನರನ್ನು ಆಯ್ಕೆ ಮಾಡಿ ಪರೀಕ್ಷೆ ನಡೆಸಲಾಗುತ್ತದೆ. ಇದಕ್ಕಾಗಿ ವ್ಯಕ್ತಿಗಳಿಂದ ರಕ್ತದ ಮಾದರಿ ಪಡೆಯಲಾಗುತ್ತದೆ.
ವುಹಾನ್ನಲ್ಲಿ 1.1 ಕೋಟಿ ಜನರಿಗೆ ಕೊರೋನಾ ಟೆಸ್ಟ್!
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ, ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ಜತೆಗೂಡಿ ಆರೋಗ್ಯ ಸಚಿವಾಲಯ ಈ ಸಮೀಕ್ಷೆ ನಡೆಸಲಿದೆ. ಇದಕ್ಕೆ ಆಯಾ ರಾಜ್ಯಗಳ ಆರೋಗ್ಯ ಇಲಾಖೆಗಳಿಂದಲೂ ಬೆಂಬಲವಿರುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯೂ ಸಾಥ್ ನೀಡಲಿದೆ.
ಭಾರತೀಯ ಜನಸಂಖ್ಯೆಯಲ್ಲಿ ಯಾವ ಮಟ್ಟಿಗೆ ಕೊರೋನಾ ಹಬ್ಬಿದೆ ಎಂಬುದನ್ನು ಪತ್ತೆ ಹಚ್ಚಲು ಈ ಸಮೀಕ್ಷೆ ಸಹಕಾರಿಯಾಗಲಿದೆ. ಸುಮಾರು 24 ಸಾವಿರ ವಯಸ್ಕರಲ್ಲಿ ಈ ಸಮೀಕ್ಷೆ ನಡೆಸಲಾಗುತ್ತದೆ.
ರಾಜ್ಯದಲ್ಲಿ ನಿನ್ನೆ ದಾಖಲೆಯ 63 ಕೇಸು: ಕೊರೋನಾ ಮುಕ್ತ ಜಿಲ್ಲೆ 5 ಮಾತ್ರ!
ಕರ್ನಾಟಕದಲ್ಲಿ ಎಲ್ಲೆಲ್ಲಿ?
* ಬೆಂಗಳೂರು ನಗರ
* ಚಿತ್ರದುರ್ಗ
* ಕಲಬುರಗಿ
ಪರೀಕ್ಷೆ ಹೇಗೆ?
- ಪ್ರತಿ ಜಿಲ್ಲೆಯಲ್ಲಿ 10 ಕ್ಲಸ್ಟರ್ ಗುರುತಿಸಲಾಗುತ್ತದೆ
- ಮನೆಗೆ ಒಬ್ಬರಂತೆ 400 ಮಂದಿ ಆಯ್ಕೆ ಮಾಡಲಾಗುತ್ತದೆ
- ದೇಹದಿಂದ ರಕ್ತದ ಮಾದರಿ ತೆಗೆದು ಪರೀಕ್ಷೆ ನಡೆಸಲಾಗುತ್ತದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ