ಪೌರತ್ವ ಕಾಯ್ದೆಯಲ್ಲಿ ಬದಲಾವಣೆ?: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸುಳಿವು!

Published : Dec 16, 2019, 08:36 AM IST
ಪೌರತ್ವ ಕಾಯ್ದೆಯಲ್ಲಿ ಬದಲಾವಣೆ?: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸುಳಿವು!

ಸಾರಾಂಶ

ಪೌರತ್ವ ಕಾಯ್ದೆಯಲ್ಲಿ ಕೆಲವು ಬದಲಾವಣೆ| ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸುಳಿವು| ಕಾಯ್ದೆ ಬಗ್ಗೆ ಆತಂಕ ತೋಡಿಕೊಂಡ ಮೇಘಾಲಯ ಸಿಎಂ|

 ಗಿರಿಧ್‌[ಡಿ.16]: ವಿವಾದಿತ ಪೌರತ್ವ (ತಿದ್ದುಪಡಿ) ಕಾಯ್ದೆಯಲ್ಲಿ ‘ಕೆಲವು ಬದಲಾವಣೆ’ ತರಬಹುದು ಎಂಬ ಸೂಚನೆಯನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿದ್ದಾರೆ. ಕಾಯ್ದೆಗೆ ಬಾಂಗ್ಲಾದೇಶೀ ನುಸುಳುಕೋರರ ಉಪಟಳ ತೀವ್ರವಾಗಿರುವ ಈಶಾನ್ಯ ರಾಜ್ಯಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಶಾ ಅವರಿಂದ ಈ ಸುಳಿವು ಬಂದಿದೆ.

ಜಾರ್ಖಂಡ್‌ ವಿಧಾನಸಭಾ ಚುನಾವಣಾ ರಾರ‍ಯಲಿಯಲ್ಲಿ ಮಾತನಾಡಿದ ಶಾ, ‘ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್‌ ಸಂಗ್ಮಾ ಹಾಗೂ ಅವರ ಮಂತ್ರಿಮಂಡಲದ ಸಚಿವರು ಶುಕ್ರವಾರ ನನ್ನನ್ನು ಭೇಟಿ ಮಾಡಿದ್ದರು. ಕಾಯ್ದೆಯಿಂದ ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿದರು. ಆದರೆ ಯಾವುದೇ ಸಮಸ್ಯೆ ಇಲ್ಲ ಎಂದು ನಾನು ಅವರಿಗೆ ತಿಳಿಹೇಳಲು ಯತ್ನಿಸಿದೆ’ ಎಂದರು.

‘ಆದರೆ ಕಾಯ್ದೆಯಲ್ಲಿ ಕೆಲವು ಬದಲಾವಣೆ ಆಗಲೇಬೇಕು ಎಂದು ಅವರು ಪಟ್ಟು ಹಿಡಿದರು. ಆಗ ನಾನು ‘ಕ್ರಿಸ್‌ಮಸ್‌ ನಂತರ ನನ್ನನ್ನು ಭೇಟಿ ಮಾಡಿ’ ಎಂದು ಅವರಿಗೆ ಸೂಚಿಸಿದೆ. ಆ ವೇಳೆ ರಚನಾತ್ಮಕ ಚರ್ಚೆ ನಡೆಸುವ ಭರವಸೆಯನ್ನು ನಾನು ಅವರಿಗೆ ನೀಡಿದೆ ಹಾಗೂ ಮೇಘಾಲಯದ ಸಮಸ್ಯೆಗಳ ಬಗ್ಗೆ ಪರಿಹಾರ ಒದಗಿಸುವ ಆಶ್ವಾಸನೆ ಕೊಟ್ಟೆ’ ಎಂದು ಗೃಹ ಮಂತ್ರಿ ಹೇಳಿದರು.

ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿಗೆ ಬಂದ ನಂತರ ಬಾಂಗ್ಲಾದೇಶ, ಆಷ್ಘಾನಿಸ್ತಾನ ಹಾಗೂ ಪಾಕಿಸ್ತಾನದ ನಿರಾಶ್ರಿತ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವ ಲಭಿಸಲಿದೆ. ಈ ರೀತಿ ಅವರಿಗೆ ಪೌರತ್ವ ಲಭಿಸಿದರೆ ಬಾಂಗ್ಲಾದೇಶೀ ನಿರಾಶ್ರಿತರು ಹೆಚ್ಚಿರುವ ಈಶಾನ್ಯ ರಾಜ್ಯಗಳಿಗೆ ತೊಂದರೆಯಾಗಲಿದೆ. ಈಶಾನ್ಯದ ಮೂಲನಿವಾಸಿಗಳ ಸೌಲಭ್ಯಗಳನ್ನು ನಿರಾಶ್ರಿತ ವಲಸಿಗರು ಕಸಿಯಲಿದ್ದಾರೆ ಎಂಬುದು ಮೇಘಾಲಯ ಸೇರಿ ಈಶಾನ್ಯ ರಾಜ್ಯಗಳ ಆತಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ
ನಾನು ಮೋಸ ಮಾಡಿಲ್ಲ, ಗಾಸಿಪ್‌ ನಂಬಬೇಡಿ ಎಂದ Palash Muchhal; ಮದುವೆ ಕ್ಯಾನ್ಸಲ್‌ ಎಂದ Smriti Mandhana