ಆಕ್ಸಿಜನ್‌ ಕೊರತೆಯಿಂದ ಸಾವು: ಮೊದಲ ಬಾರಿ ಒಪ್ಪಿಕೊಂಡ ಕೇಂದ್ರ!

Published : Aug 12, 2021, 08:02 AM ISTUpdated : Aug 12, 2021, 08:03 AM IST
ಆಕ್ಸಿಜನ್‌ ಕೊರತೆಯಿಂದ ಸಾವು: ಮೊದಲ ಬಾರಿ ಒಪ್ಪಿಕೊಂಡ ಕೇಂದ್ರ!

ಸಾರಾಂಶ

* ಆಂಧ್ರಪ್ರದೇಶದಲ್ಲಿ ಸಾವು: ಸಂಸತ್ತಿಗೆ ಮಾಹಿತಿ * ಆಕ್ಸಿಜನ್‌ ಕೊರತೆಯಿಂದ ಸಾವು: ಮೊದಲ ಬಾರಿ ಒಪ್ಪಿಕೊಂಡ ಕೇಂದ್ರ * ಎರಡನೇ ಅಲೆ ವೇಳೆ ಆಮ್ಲಜನಕ ಸಿಗದೇ ಸಾವು

ನವದೆಹಲಿ(ಆ.12): ಕೋವಿಡ್‌ 2ನೇ ವೇಳೆ ಆಮ್ಲಜನಕದ ಕೊರತೆಯಿಂದ ಆಂಧ್ರಪ್ರದೇಶದಲ್ಲಿ ಸಾವು ಸಂಭವಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮೊದಲ ಬಾರಿಗೆ ಸಂಸತ್ತಿನಲ್ಲಿ ಹೇಳಿದೆ. ಈ ಮೂಲಕ ಇದೇ ಮೊದಲ ಬಾರಿ ಆಮ್ಲಜನಕ ಕೊರತೆಯಿಂದ ಸಾವಾಗಿದೆ ಎಂಬುದನ್ನು ಕೇಂದ್ರ ಒಪ್ಪಿಕೊಂಡಿದೆ.

‘ಕೋವಿಡ್‌ 2ನೇ ಅಲೆಯ ವೇಳೆಯಲ್ಲಿ ಆಂಧ್ರಪ್ರದೇಶದಲ್ಲಿ ಜೀವ ರಕ್ಷಕಾ ವ್ಯವಸ್ಥೆಯಲ್ಲಿದ್ದ ಕೆಲವು ಸೋಂಕಿತರು ಆಮ್ಲಜನಕದ ಕೊರತೆÜ ಇಂದ ಸಾವಿಗೀಡಾಗಿದ್ದಾರೆ. ಆಸ್ಪತ್ರೆಗೆ ಆಮ್ಲಜನಕ ತಲುಪುದು ತಡವಾದ್ದರಿಂದ ಮೇ 10ರಂದು ಕೆಲವರು ಮರಣಹೊಂದಿದ್ದಾರೆ. ಆಮ್ಲಜನಕ ಕೊರತೆಯಿಂದ ಸಾವಿಗೀಡಾದವರ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಲಾಗಿದೆ. ಕೇವಲ 13 ರಾಜ್ಯಗಳು ಮಾತ್ರ ಇದಕ್ಕೆ ಉತ್ತರಿಸಿವೆ’ ಎಂದು ಆರೋಗ್ಯ ಖಾತೆಯ ರಾಜ್ಯ ಸಚಿವೆ ಡಾ| ಭಾರತಿ ಪವಾರ್‌ ಹೇಳಿದ್ದಾರೆ.

ಈ ಹಿಂದೆ ‘ಆಮ್ಲಜನಕ ಕೊರತೆÜಯಿಂದ ಸಾವಿಗೀಡಾದವರ ಬಗ್ಗೆ ಯಾವುದೇ ಮಾಹಿತಿ ರಾಜ್ಯಗಳಿಂದ ಬಂದಿಲ್ಲ’ ಎಂದು ಕೇಂದ್ರ ಸರ್ಕಾರ ಹೇಳಿದ್ದು ಸಾಕಷ್ಟುವಿವಾದಕ್ಕೆ ಕಾರಣವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಂದೇ.. ಚರ್ಚೆಯಿಂದ ಹೊಸ ಇತಿಹಾಸ ಸೃಷ್ಟಿಗೆ ಮೋದಿ ಯತ್ನ: ಕಾಂಗ್ರೆಸ್‌
ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ