ರೋಹಿಂಗ್ಯಾಗಳಿಗೂ ಸೋಂಕು?: ತಪಾಸಣೆಗೆ ಕೇಂದ್ರ ಸಜ್ಜು

Published : Apr 18, 2020, 08:29 AM ISTUpdated : Apr 18, 2020, 10:28 AM IST
ರೋಹಿಂಗ್ಯಾಗಳಿಗೂ ಸೋಂಕು?: ತಪಾಸಣೆಗೆ ಕೇಂದ್ರ ಸಜ್ಜು

ಸಾರಾಂಶ

ಮ್ಯಾನ್ಮಾರ್‌ನಿಂದ ವಲಸೆ ಬಂದಿರುವ ರೋಹಿಂಗ್ಯಾ ಮುಸ್ಲಿಮರಿಗೂ ಸೋಂಕು ತಗುಲಿರುವ ಶಂಕೆ| ರೋಹಿಂಗ್ಯಾಗಳಿಗೂ ಸೋಂಕು?: ತಪಾಸಣೆಗೆ ಕೇಂದ್ರ ಸಜ್ಜು

ನವದೆಹಲಿ(ಏ.18): ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಲು ದೆಹಲಿಯ ತಬ್ಲೀಘಿ ಜಮಾತ್‌ ಕಾರ್ಯಕರ್ತರೇ ಕಾರಣ ಎಂಬುದು ಬೆಳಕಿಗೆ ಬಂದ ಬೆನ್ನಲ್ಲೇ, ಮ್ಯಾನ್ಮಾರ್‌ನಿಂದ ವಲಸೆ ಬಂದಿರುವ ರೋಹಿಂಗ್ಯಾ ಮುಸ್ಲಿಮರಿಗೂ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ರೋಹಿಂಗ್ಯಾ ಮುಸ್ಲಿಮರನ್ನು ಕೊರೋನಾ ಪತ್ತೆ ಪರೀಕ್ಷೆಗೆ ಒಳಪಡಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ.

ವೈರಸ್ ಭೀತಿ: ರಸ್ತೆ ಮೇಲೆ 500 ರು. ನೋಟುಗಳು ಬಿದ್ರೂ ಕೇಳೋರಿಲ್ಲ!

ದೆಹಲಿಯ ನಿಜಾಮುದ್ದೀನ್‌ ಮಸೀದಿಯಲ್ಲಿ ತಬ್ಲೀಘಿ ಜಮಾತ್‌ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾರತದಲ್ಲಿರುವ ರೋಹಿಂಗ್ಯಾ ಮುಸ್ಲಿಮರೂ ಸಾಕಷ್ಟುಸಂಖ್ಯೆಯಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಈ ನಿರ್ಧಾರ ಕೈಗೊಂಡಿದೆ.

ಪ್ರಸಕ್ತ ದೆಹಲಿ, ಜಮ್ಮು, ಹೈದ್ರಾಬಾದ್‌ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ 40000ಕ್ಕೂ ಹೆಚ್ಚು ರೋಹಿಂಗ್ಯಾ ವಲಸಿಗರು ವಾಸಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Cockroach Janata Party ಅಸಲಿ ಮುಖ ಬಯಲು?: ಪ್ರಧಾನಿ ಮೋದಿ ವಿರುದ್ಧ ಸಂಚಿಗೆ ಗಡಿಯಾಚೆ ಪ್ಲಾನ್? ರಾಜೀವ್ ಚಂದ್ರಶೇಖರ್ ಸ್ಫೋಟಕ ಹೇಳಿಕೆ!
India News Live: Cockroach Janata Party ಅಸಲಿ ಮುಖ ಬಯಲು? - ಪ್ರಧಾನಿ ಮೋದಿ ವಿರುದ್ಧ ಸಂಚಿಗೆ ಗಡಿಯಾಚೆ ಪ್ಲಾನ್? ರಾಜೀವ್ ಚಂದ್ರಶೇಖರ್ ಸ್ಫೋಟಕ ಹೇಳಿಕೆ!