ಸಲ್ಮಾನ್‌ ಖಾನ್‌ ಕೊಲ್ಲೋದಾಗಿ ಬೆದರಿಕೆ ಹಾಕಿದ್ದ ಕುಖ್ಯಾತ ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ಗೆ ಉಗ್ರಗಾಮಿ ಪಟ್ಟ

Published : Jan 02, 2024, 01:24 PM ISTUpdated : Jan 02, 2024, 01:28 PM IST
ಸಲ್ಮಾನ್‌ ಖಾನ್‌ ಕೊಲ್ಲೋದಾಗಿ ಬೆದರಿಕೆ ಹಾಕಿದ್ದ ಕುಖ್ಯಾತ ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ಗೆ ಉಗ್ರಗಾಮಿ ಪಟ್ಟ

ಸಾರಾಂಶ

ಗೋಲ್ಡಿ ಬ್ರಾರ್‌ ರಾಷ್ಟ್ರೀಯವಾದಿ ನಾಯಕರಿಗೆ ಬೆದರಿಕೆ ಕರೆಗಳನ್ನು ಮಾಡುವಲ್ಲಿ ತೊಡಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಕುರಿತು ಪೋಸ್ಟ್‌ ಮಾಡಿದ್ದಾನೆ. ಹೀಗಾಗಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅದು ತಿಳಿಸಿದೆ.

ನವದೆಹಲಿ (ಜನವರಿ 2, 2024): ಕೆನಡಾದಲ್ಲಿರುವ ಪಂಜಾಬ್ ಮೂಲದ ಕುಖ್ಯಾತ ಗ್ಯಾಂಗ್‌ಸ್ಟರ್‌, 2022ರ ಪಂಜಾಬ್‌ ಗಾಯಕ ಸಿಧು ಮೂಸೆವಾಲ ಹತ್ಯೆಯ ರೂವಾರಿ ಗೋಲ್ಡಿ ಬ್ರಾರ್‌ ಅಲಿಯಾಸ್‌ ಸತ್ವಿಂದರ್‌ ಸಿಂಗ್‌ನನ್ನು ‘ಭಯೋತ್ಪಾದಕ’ ಎಂದು ಕೇಂದ್ರ ಸರ್ಕಾರ ಸೋಮವಾರ ಘೋಷಣೆ ಮಾಡಿದೆ.

ಗೋಲ್ಡಿ ಬ್ರಾರ್‌, ನಿಷೇಧಿತ ಖಲಿಸ್ತಾನಿ ಸಂಘಟನೆ ‘ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್‌’ ನೊಂದಿಗೆ ಸಂಬಂಧ ಹೊಂದಿದ್ದಾನೆ. ಅಲ್ಲದೇ ಭಯೋತ್ಪಾದನಾ ಸಂಘಟನೆಗಳೊಂದಿಗೆ ಸಂಪರ್ಕದಲ್ಲಿರುವ ಆತ ಅನೇಕ ಹತ್ಯೆಗಳಲ್ಲೂ ಭಾಗಿಯಾಗಿದ್ದಾನೆ ಎಂದು ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಸ್ಮೋಕ್ ಬಾಂಬ್ ಹಿಂದಿನ ಮಾಸ್ಟರ್ ಮೈಂಡ್ ಯಾರು..? ಆರು ಆರೋಪಿಗಳ ವಿರುದ್ಧ UAPA ಕಾಯ್ದೆಯಡಿ ಕೇಸ್!

ಅಲ್ಲದೇ ಗೋಲ್ಡಿ ಬ್ರಾರ್‌, ರಾಷ್ಟ್ರೀಯವಾದಿ ನಾಯಕರಿಗೆ ಬೆದರಿಕೆ ಕರೆಗಳನ್ನು ಮಾಡುವಲ್ಲಿ ತೊಡಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಕುರಿತು ಪೋಸ್ಟ್‌ ಮಾಡಿದ್ದಾನೆ. ಹೀಗಾಗಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅದು ತಿಳಿಸಿದೆ.

‘ಗೋಲ್ಡಿ ಬ್ರಾರ್ ಗಡಿಯಾಚೆಯಿಂದ ಡ್ರೋನ್‌ಗಳ ಮೂಲಕ ಉನ್ನತ ದರ್ಜೆಯ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕ ವಸ್ತುಗಳನ್ನು ಕಳ್ಳಸಾಗಣೆ ಮಾಡುವಲ್ಲಿ ತೊಡಗಿಸಿಕೊಂಡಿದ್ದಾನೆ. ಕೊಲೆಗಡುಕ ಶಾರ್ಪ್ ಶೂಟರ್‌ಗಳಿಗೆ ಆತ ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುತ್ತಿದ್ದ. ‘ಗೋಲ್ಡಿ ಬ್ರಾರ್‌ ಮತ್ತು ಆತನ ಸಹಚರರು ವಿಧ್ವಂಸಕ ಕೃತ್ಯಗಳು, ಭಯೋತ್ಪಾದನಾ ಘಟಕಗಳನ್ನು ಹೆಚ್ಚಿಸುವುದು, ಉದ್ದೇಶಿತ ಹತ್ಯೆಗಳನ್ನು ನಡೆಸುವುದು ಮತ್ತು ಇತರ ಯೋಜನೆಗಳ ವಿರೋಧಿಸುವ ಮೂಲಕ ಪಂಜಾಬ್ ರಾಜ್ಯದಲ್ಲಿ ಶಾಂತಿ, ಕೋಮು ಸೌಹಾರ್ದತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳುಮಾಡಲು ಪಿತೂರಿ ನಡೆಸುತ್ತಿದ್ದಾರೆ’ ಎಂದು ಸಚಿವಾಲಯ ತಿಳಿಸಿದೆ.

 

ಉಗ್ರರ ಬೆಂಬಲಿಗ ಸಂಸ್ಥೆಗಳ ಆಸ್ತಿ 24 ಗಂಟೆಯಲ್ಲಿ ಜಪ್ತಿ : ಕೇಂದ್ರ ಸರ್ಕಾರ

2022ರಲ್ಲಿ ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಪಂಜಾಬ್‌ ಗಾಯಕ ಸಿಧು ಮೂಸೆವಾಲಾರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಬಳಿಕ ಗೋಲ್ಡಿ ಬ್ರಾರ್‌ ಹತ್ಯೆ ಹಿಂದಿನ ಪ್ರಮುಖ ರೂವಾರಿ ಎಂಬುದು ತಿಳಿದು ಬಂದಿತ್ತು. ಆತನ ಹಸ್ತಾಂತರಕ್ಕಾಗಿ ಇಂಟರ್‌ಪೋಲ್‌ ರೆಡ್‌ ಕಾರ್ನರ್‌ ನೋಟಿಸ್‌ ಹೊರಡಿಸಿತ್ತು.

ವಿಶ್ವಕಪ್ ಸೋತ ಭಾರತದ ವಿರುದ್ದವೇ ಘೋಷಣೆ ಕೂಗಿದ 7 ಕಾಶ್ಮೀರ ಯೂನಿವರ್ಸಿಟಿ ವಿದ್ಯಾರ್ಥಿಗಳು ಅರೆಸ್ಟ್..!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Dhurandhar Review: ಹಿಂದೂಗಳಿಗೆ ಪ್ರಥಮ ಶತ್ರು ಹಿಂದೂ-ಮೊಬೈಲ್‌ ಕೂಡ ನೋಡದಂತೆ ಮಾಡೋ ರಣ್‌ವೀರ್‌ ಸಿಂಗ್‌ ಸಿನಿಮಾ!
ಟೀ ಶರ್ಟ್ ಬಿಟ್ಟು ಖಾದಿ ಧರಿಸಿ ಬಂದು ರಾಜಕೀಯ ಸಂದೇಶ ರವಾನಿಸಿದ ರಾಹುಲ್ ಗಾಂಧಿ