
ನವದೆಹಲಿ(ಮೇ 13) ಕೇಂದ್ರ ಸರ್ಕಾರ ಅಂತೂ ಕೊನೆಗೂ ರಾಹುಲ್ ಗಾಂಧಿ ಮಾತಿಗೆ ಬೆಲೆ ನೀಡಿದೆ. ಇದಕ್ಕೆ ನಾವು ಧನ್ಯವಾದ ಸಲ್ಲಿಸುತ್ತಿದ್ದೇವೆ. ಈ ಮಾತನ್ನು ಕಾಂಗ್ರೆಸ್ ಬುಧವಾರ ಹೇಳಿದೆ.
ಪ್ರಧಾನಿ ಮೋದಿ ಅವರೊಂದಿಗೆ ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಸಭೆಯಲ್ಲಿ ರಾಜ್ಯಕ್ಕೆ ಹೆಚ್ಚಿನ ಅಧಿಕಾರ ನೀಡನಬೇಕು ಎಂಬ ಬೇಡಿಕೆ ವ್ಯಕ್ತವಾಗಿದ್ದು ಅದಕ್ಕೆ ಕೇಂದ್ರ ಸ್ಪಂದಿಸಿದೆ ಎಂದು ಕಾಂಗ್ರೆಸ್ ಹೇಳಿದೆ.
ಕೊರೋನಾದಿಂದ ಹೊರಬರಲು ಮೋದಿ ಘೋಷಿಸಿದ ಬಹುದೊಡ್ಡ ಪ್ಯಾಕೇಜ್!
ಎಲ್ಲ ರಾಜ್ಯಗಳ ಸಿಎಂ ಸಲಹೆ ಪಡೆದುಕೊಂಡೇ ನರೇಂದ್ರ ಮೋದಿ ಗ್ರೀನ್, ಆರೆಂಜ್, ರೆಡ್ ವಲಯಗಳನ್ನು ವಿಭಾಗಿಸಿದ್ದರು. ನಾಯಕ ರಾಹುಲ್ ಗಾಂಧಿ ಮಾತು ಕೇಳಿದ್ದಕ್ಕೆ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಇನ್ನು ಮುಂದೆಯೂ ಕೇಂದ್ರ ಸರ್ಕಾರ ವಿಪಕ್ಷಗಳ ಮಾತಿಗೆ ಬೆಲೆ ನೀಡುತ್ತದೆ ಎಂದು ಭಾವಿಸಿದ್ದೇವೆ ಎಂದು ಕಾಂಗ್ರೆಸ್ ಹೇಳಿದೆ.
ಇನ್ನೊಮ್ಮೆ ರಾಜ್ಯಗಳ ಸಿಎಂ ಜತೆ ಪ್ರಧಾನಿ ಮಾತನಾಡಬೇಕು. ಸಂಯುಕ್ತ ವ್ಯವಸ್ಥೆ ಬಲಪಡಿಸುವ ಕ್ರಮ ತೆಗೆದುಕೊಳ್ಳಬೇಕು . ಕೊರೋನಾ ವಿರುದ್ಧ ಹೋರಾಡಲು ಎಲ್ಲರನ್ನು ಸಂಘಟಿತರನ್ನಾಗಿಸಬೇಕಾದದ್ದು ಕೇಂದ್ರದ ಕರ್ತವ್ಯ ಎಂದು ಹೇಳಿದೆ.
ನರೇಂದ್ರ ಮೋದಿ ಸರ್ಕಾರ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿದೆ ಎಂದು ಕಾಂಗ್ರೆಸ್ ಟೀಕೆ ಮಾಡಿತ್ತು. ರೈತರು ಮತ್ತು ಕಾರ್ಮಿಕರ ನೆರವಿಗೆ ನಿಲ್ಲುವ ಕೆಲಸ ಆಗಿಲ್ಲ ಎಂದು ಟೀಕೆ ಮಾಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ