ರಾಜ್ಯದ ಕಬ್ಬು ಉದ್ಯಮಗಳ ಬೇಡಿಕೆಗೆ ಕೇಂದ್ರದ ಸ್ಪಂದನೆ

Kannadaprabha News   | Kannada Prabha
Published : Nov 19, 2025, 05:08 AM IST
Pralhad Joshi

ಸಾರಾಂಶ

ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕದಲ್ಲಿ ಕಬ್ಬುಬೆಳೆಗಾರರ ಬೃಹತ್‌ ಹೋರಾಟದ ಬೆನ್ನಲ್ಲೇ ಕೇಂದ್ರ ಆಹಾರ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ, ಈಗ ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಹಾಲಿ 31 ರು.ನಿಂದ 40 ರು.ಗೆ ಹೆಚ್ಚಿಸುವ ಬೇಡಿಕೆ ಕುರಿತು ಪರಿಶೀಲಿಸುವುದಾಗಿ ಭರವಸೆ

ನವದೆಹಲಿ : ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕದಲ್ಲಿ ಕಬ್ಬುಬೆಳೆಗಾರರ ಬೃಹತ್‌ ಹೋರಾಟದ ಬೆನ್ನಲ್ಲೇ ಕೇಂದ್ರ ಆಹಾರ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ, ಈಗ ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಹಾಲಿ 31 ರು.ನಿಂದ 40 ರು.ಗೆ ಹೆಚ್ಚಿಸುವ ಬೇಡಿಕೆ ಕುರಿತು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ.

ಅಕ್ಟೋಬರ್‌ನಲ್ಲಿ ಆರಂಭವಾಗುವ 2025-26ನೇ ಸಾಲಿನ ಮಾರುಕಟ್ಟೆ ವರ್ಷದಲ್ಲಿ 15 ಲಕ್ಷ ಟನ್‌ನಷ್ಟು ಸಕ್ಕರೆ ರಫ್ತಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಅದರ ಜತೆಗೆ, ಸಕ್ಕರೆ ಮಾರಾಟದ ಕನಿಷ್ಠ ದರ ಹೆಚ್ಚಿಸುವ ಉದ್ದಿಮೆಗಳ ಬೇಡಿಕೆ ಕುರಿತೂ ಪರಿಶೀಲನೆ ನಡೆಸಲಾಗುವುದು ಎಂದು ಜೋಶಿ ಮಂಗಳವಾರ ತಿಳಿಸಿದ್ದಾರೆ.

ಸದ್ಯ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ ಪ್ರತಿ ಕೆ.ಜಿ.ಗೆ 31 ರು

ಸದ್ಯ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ ಪ್ರತಿ ಕೆ.ಜಿ.ಗೆ 31 ರು. ಆಗಿದೆ. ಇದು 2019ರ ಫೆಬ್ರವರಿಯಲ್ಲಿ ನಿಗದಿಯಾದ ದರ. ಉತ್ಪಾದನಾ ವೆಚ್ಚ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ಕರೆ ಉದ್ಯಮದ ಅಗ್ರ ಸಂಸ್ಥೆಯಾದ ಇಸ್ಮಾ(ಐಎಸ್‌ಎಂಎ) ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಪ್ರತಿ ಕೆ.ಜಿ.ಗೆ 40.2 ರು.ಗೇರಿಸುವಂತೆ ಮನವಿ ಮಾಡುತ್ತಲೇ ಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿದ ಜೋಶಿ ಅ‍ವರು, ನಾವು 10 ಲಕ್ಷ ಟನ್‌ ಸಕ್ಕರೆ ರಫ್ತಿಗೆ ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ 2024-25ರ ಅವಧಿಯಲ್ಲಿ ಸಕ್ಕರೆ ಬೆಲೆಯು ಸ್ಥಿರವಾಗಿತ್ತು. ನಾವು ಇತ್ತೀಚೆಗೆ 15 ಲಕ್ಷ ಟನ್‌ ಸಕ್ಕರೆ ರಫ್ತಿಗೆ ಅನುಮತಿ ನೀಡಿದ್ದೇವೆ ಎಂದು ಹೇಳಿದರು.

ರಫ್ತಿನಿಂದ ಸಕ್ಕರೆ ದರದ ಮೇಲಾಗುವ ಪರಿಣಾಮ ಪರಿಶೀಲನೆ

ರಫ್ತಿನಿಂದ ಸಕ್ಕರೆ ದರದ ಮೇಲಾಗುವ ಪರಿಣಾಮ ಕುರಿತು ಸಚಿವಾಲಯ ಪರಿಶೀಲನೆ ನಡೆಸಲಿದೆ. ಆ ಬಳಿಕ ಸಕ್ಕರೆ ಮಾರಾಟದ ಕನಿಷ್ಠ ದರ ಹೆಚ್ಚಿಸುವ ಬೇಡಿಕೆ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಜೋಶಿ ತಿಳಿಸಿದರು.

ಕಬ್ಬಿನ ಖರೀದಿ ದರವು ಪ್ರತಿ ಕ್ವಿಂಟಲ್‌ಗೆ 275 ರು.ನಿಂದ 355 ರು.ಗೆ ಏರಿಕೆಯಾಗಿದೆ. ಅಂದರೆ ಶೇ.29ರಷ್ಟು ಹೆಚ್ಚಾಗಿದೆ. ಇದರಿಂದ ಸಕ್ಕರೆ ಉತ್ಪಾದನಾ ವೆಚ್ಚವೂ ಹೆಚ್ಚಾಗಿದೆ. ಹೀಗಾಗಿ ಸರ್ಕಾರವು 2025-26ನೇ ಮಾರುಕಟ್ಟೆ ವರ್ಷದಲ್ಲಿ ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಪ್ರತಿ ಕೆ.ಜಿ.ಗೆ 40.2ರು.ಗೆ ಹೆಚ್ಚಿಸುವಂತೆ ಇಸ್ಮಾ ಒತ್ತಾಯಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುರುಷರ ಈ ವರ್ತನೆ ಬಗ್ಗೆ ಹೆಣ್ಣಿಗೆ ಮಾತ್ರವಲ್ಲ ಮನೆಯ ಸಾಕು ಬೆಕ್ಕಿಗೂ ಗೊತ್ತು....!
ಅಕ್ರಮ ಸಂಬಂಧದ ಹಾದಿ ಹಿಡಿದ ಅಮ್ಮ: ಆಕೆಯ ಇಬ್ಬರು ಪುಟ್ಟ ಮಕ್ಕಳ ಮೋರಿಗೆಸೆದ ಪ್ರಿಯಕರ