ಗುರುವಾರದ ಸಭೆಯಲ್ಲಿ ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಲನಕ್ಷೆ ಚರ್ಚೆ!

Published : Jun 21, 2021, 09:35 AM ISTUpdated : Jun 21, 2021, 10:14 AM IST
ಗುರುವಾರದ ಸಭೆಯಲ್ಲಿ ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಲನಕ್ಷೆ ಚರ್ಚೆ!

ಸಾರಾಂಶ

* ಗುರುವಾರದ ಸಭೆಯಲ್ಲಿ ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಲನಕ್ಷೆ ಚರ್ಚೆ * ಕ್ಷೇತ್ರ ಮರುವಿಂಗಡನೆ ಬಗ್ಗೆ ಗುರುವಾರದ ಸಭೆಯಲ್ಲಿ ಸಮಾಲೋಚನೆ * ಸಭೆಗೆ ಗುಪ್ಕರ್‌ ಸಮಿತಿಯಿಂದ ಇಬ್ಬರು ಪ್ರತಿನಿಧಿಗಳ ರವಾನೆಗೆ ನಿರ್ಧಾರ

ನವದೆಹಲಿ/ಶ್ರೀನಗರ(ಜೂ.21): ಜಮ್ಮು ಮತ್ತು ಕಾಶ್ಮೀರದ ವಿವಿಧ ರಾಜಕೀಯ ಪಕ್ಷಗಳ ನಾಯಕರ ಜೊತೆ ಕೇಂದ್ರ ಸರ್ಕಾರ ಜೂ.24ರ ಗುರುವಾರ ಆಯೋಜಿಸಿರುವ ಸಭೆಯಲ್ಲಿ, ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವುದರ ಬದಲಾಗಿ, ಕ್ಷೇತ್ರ ಮರುವಿಂಗಡನೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ. ಸ್ಥಳೀಯ ರಾಜಕೀಯ ಪಕ್ಷಗಳು ಬೇಡಿಕೆ ಇಟ್ಟಿರುವಂತೆ ತಕ್ಷಣಕ್ಕೆ ರಾಜ್ಯ ಸ್ಥಾನಮಾನ ನೀಡುವ ಯಾವುದೇ ಸಾಧ್ಯತೆ ಇಲ್ಲ. ಜೊತೆಗೆ ಈಗಾಗಲೇ ರದ್ದುಪಡಿಸಲಾಗಿರುವ 370ನೇ ವಿಧಿ ಮರು ಸ್ಥಾಪನೆಯ ಯಾವುದೇ ಸಾಧ್ಯತೆಯಂತೂ ಇಲ್ಲವೇ ಎಂದು ಮೂಲಗಳು ತಿಳಿಸಿವೆ.

ಕಾರಣ, ರಾಜ್ಯ ರಚನೆಗೂ ಮುನ್ನ ಕ್ಷೇತ್ರ ಮರುವಿಂಗಡನೆ ಆಗಬೇಕು. ಈ ಕುರಿತು ಶಿಫಾರಸು ಮಾಡಲು ರಚಿಸಲಾಗಿರುವ ಸಮಿತಿ ಇನ್ನೂ ತನ್ನ ವರದಿ ಸಲ್ಲಿಸಿಲ್ಲ. ಅದು ತನ್ನ ವರದಿ ಸಲ್ಲಿಸುವುದು ವರ್ಷಾಂತ್ಯದ ವೇಳೆಗೆ. ಹೀಗಾಗಿ ಗುರುವಾರದ ಸಭೆಯಲ್ಲಿ ಮುಖ್ಯವಾಗಿ ಎಲ್ಲಾ ಪಕ್ಷಗಳನ್ನು ಮರು ವಿಂಗಡನೆ ಕುರಿತು ವಿಶ್ವಾಸಕ್ಕೆ ತೆಗೆದುಕೊಳ್ಳುವ ಯತ್ನವಾಗಿರಲಿದೆ. ಜೊತೆಗೆ ರಾಜ್ಯ ಘೋಷಣೆಗೂ ಮುನ್ನ ಸಂಸತ್ತಿನಲ್ಲಿ ಈ ಕುರಿತು ಅನುಮೋದನೆ ಪಡೆದುಕೊಳ್ಳಬೇಕು. ಹೀಗಾಗಿ ಗುರುವಾರದ ಸಭೆ ರಾಜ್ಯ ರಚನೆಗೆ ಅಗತ್ಯವಾದ ನೀಲನಕ್ಷೆ ಕುರಿತು ಸಮಾಲೋಚಿಸಲಿದೆ. ಅದರಲ್ಲಿ ಮೊದಲ ವಿಷಯ, ಕ್ಷೇತ್ರ ಪುನರ್‌ ವಿಂಗಡಣೆಯದ್ದಾಗಿರಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿನಿಧಿ:

ಕಾಶ್ಮೀರಕ್ಕೆ 370ನೇ ವಿಧಿ ರದ್ದು ಬಳಿಕ, ರಾಜ್ಯದ ಹಿತಾಸಕ್ತಿ ಕಾಪಾಡುವ ಹೆಸರಿನಲ್ಲಿ ರಚನೆಗೊಂಡಿರುವ ಕಾಶ್ಮೀರದ ಎಲ್ಲಾ ರಾಜಕೀಯ ಪಕ್ಷಗಳ ಒಕ್ಕೂಟವಾದ ಗುಪ್ಕರ್‌ ಸಮಿತಿ, ಗುರುವಾರದ ಸಭೆಗೆ ತನ್ನ ಇಬ್ಬರು ಪ್ರತಿನಿಧಿಗಳನ್ನು ಕಳುಹಿಸುವ ಘೋಷಣೆ ಮಾಡಿದೆ. ಮೂಲಗಳ ಪ್ರಕಾರ ನ್ಯಾಷನಲ್‌ ಕಾನ್ಫರೆನ್ಸ್‌ ಮುಖ್ಯಸ್ಥ ಫಾರುಖ್‌ ಅಬ್ದುಲ್ಲಾ ಮತ್ತು ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಪ್ರತಿನಿಧಿಗಳಾಗಿ ದೆಹಲಿಗೆ ತೆರಳುವ ಸಾಧ್ಯತೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!