ಬಿಜೆಪಿ ತೊರೆದು ಟಿಎಂಸಿಗೆ ಮರಳಿದ ರಾಯ್‌ ಝಡ್‌ ಭದ್ರತೆ ಹಿಂದಕ್ಕೆ

Kannadaprabha News   | Asianet News
Published : Jun 18, 2021, 07:54 AM IST
ಬಿಜೆಪಿ ತೊರೆದು ಟಿಎಂಸಿಗೆ ಮರಳಿದ ರಾಯ್‌  ಝಡ್‌ ಭದ್ರತೆ ಹಿಂದಕ್ಕೆ

ಸಾರಾಂಶ

ಬಿಜೆಪಿ ತೊರೆದು ಮತ್ತೆ ತೃಣಮೂಲ ಕಾಂಗ್ರೆಸ್‌ಗೆ ಮರಳಿದ ಬಂಗಾಳದ ಶಾಸಕ ಮುಕುಲ್‌ ರಾಯ್‌  ಝಡ್‌ ಭದ್ರತೆ ಹಿಂಪಡೆದ ಕೇಂದ್ರ ಸರ್ಕಾರ

ನವದೆಹಲಿ (ಜೂ.18): ಬಿಜೆಪಿ ತೊರೆದು ಮತ್ತೆ ತೃಣಮೂಲ ಕಾಂಗ್ರೆಸ್‌ಗೆ ಮರಳಿದ ಬಂಗಾಳದ ಶಾಸಕ ಮುಕುಲ್‌ ರಾಯ್‌ ಕೋರಿಕೆ ಮೇರೆಗೆ ಅವರಿಗೆ ನೀಡಲಾಗಿದ್ದ ಝಡ್‌ ಭದ್ರತೆ ಹಿಂಪಡೆಯಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 

ರಾಯ್‌ಗೆ ನೀಡಲಾಗಿರುವ ವಿಐಪಿ ಭದ್ರತೆ ವಾಪಸ್‌ಗೆ ಕೇಂದ್ರೀಯ ಸಶಸ್ತ್ರ ಮೀಸಲು ಪಡೆಗೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ. ಈ ಬೆನ್ನಲ್ಲೇ ರಾಯ್‌ಗೆ ರಾಜ್ಯ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

 2017ರಲ್ಲಿ ಪಕ್ಷವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ರಾಯ್‌ ಅವರನ್ನು ಟಿಎಂಸಿ ವಜಾಗೊಳಿಸಿತ್ತು. ಬಳಿಕ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಪಶ್ಚಿಮ ಬಂಗಾಳ ಚುನಾವಣೆ ಬಳಿಕ ಮತ್ತೆ ಟಿಎಂಸಿಗೆ ರಾಯ್‌ ಮರಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಯೋಧ್ಯೆಯ ರಾಮಲಲ್ಲಾ ಪ್ರತ್ಯಕ್ಷನಾಗಿ ಆಶೀರ್ವದಿಸಿದರೆ ಹೇಗಿರತ್ತೆ? ರೋಮಾಂಚಕಾರಿ ವಿಡಿಯೋ ವೈರಲ್​
ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana