ಟಿಆರ್‌ಪಿ ಕೇಸ್: BARC ಮಾಜಿ ಸಿಇಓ ದಾಸ್ ಗುಪ್ತಾಗೆ ಬಿಗ್ ಶಾಕ್, ಜಾಮೀನು ಅರ್ಜಿ ವಜಾ!

Published : Jan 20, 2021, 04:06 PM ISTUpdated : Jan 20, 2021, 04:07 PM IST
ಟಿಆರ್‌ಪಿ ಕೇಸ್: BARC ಮಾಜಿ ಸಿಇಓ ದಾಸ್ ಗುಪ್ತಾಗೆ ಬಿಗ್ ಶಾಕ್, ಜಾಮೀನು ಅರ್ಜಿ ವಜಾ!

ಸಾರಾಂಶ

ಟಿಆರ್‌ಪಿ ಪ್ರಕರಣದಲ್ಲಿ BARC ಮಾಜಿ ಸಿಇಓ ದಾಸ್ ಗುಪ್ತಾಗೆ ಬಿಗ್ ಶಾಕ್| ಗುಪ್ತಾ ಜಾಮೀನು ಅರ್ಜಿ ನಿರಾಕರಿಸಿದ ಕೋರ್ಟ್| ಇಡೀ ದೇಶದ ಗಮನ ಸೆಳೆದಿದ್ದ ಟಿಆರ್ಪಿ ಪ್ರಕರಣದಲ್ಲಿ ಜೈಲು ಪಾಲಾಗಿರುವ ದಾಸ್ ಗುಪ್ತಾ

ಮುಂಬೈ(ಜ.20) ಟಿಆರ್‌ಪಿ ಪ್ರಕರಣದಲ್ಲಿ BARC ಮಾಜಿ ಸಿಇಓ ದಾಸ್ ಗುಪ್ತಾ ಜಾಮೀನು ಅರ್ಜಿಯನ್ನು ಮುಂಬೈ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ. ಇದಕ್ಕೂ ಮುನ್ನ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿಯ ಮುಖ್ಯಸ್ಥ ಅರ್ನಬ್ ಗೊಸ್ವಾಮಿ ಎರಡು ಚಾನೆಲ್‌ಗಳ ರೇಟಿಂಗ್ ಹೆಚ್ಚಿಸಲು BARC ಮಾಜಿ ಸಿಇಓ ದಾಸ್‌ ಗುಪ್ತಾಗೆ ಲಕ್ಷಾಂತರ ರೂಪಾಯಿ ಹಣ ನೀಡಿದ್ದರೆಂದು ತಿಳಿಸಿದ್ದರು. ಪೊಲೀಸರು ಮುಂಬೈನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಇಂತಹುದ್ದೊಂದು ವಾದ ಮಂಡಿಸಿದ್ದರು.

ಗುಪ್ತಾ BARC ಸಿಇಓ ಆಗಿದ್ದ ಸಂದರ್ಭದಲ್ಲಿ ಅರ್ನಬ್ ಗೊಸ್ವಾಮಿ ಹಾಗೂ ಇತರ ಆರೋಪಿಗಳು ರಿಪಬ್ಲಿಕ್ ಭಾರತ್ ಹಾಗೂ ರಿಪಬ್ಲಿಕ್ ಟಿಬಿಯ ರೇಟಿಂಗ್‌ನ್ನು ಅಕ್ರಮವಾಗಿ ಹೆಚ್ಚಿಸಿದ್ದರೆಂದು ಪೊಲಿಸರು ತಿಳಿಸಿದ್ದರು. ಈ ನಿಟ್ಟಿನಲ್ಲಿ ದಾಸ್‌ ಗುಪ್ತಾಗೆ ಅರ್ನಬ್ ಗೋಸ್ವಾಮಿ ಹಲವಾರು ಸಂದರ್ಭದಲ್ಲಿ ಭಾರಿ ಮೊತ್ತ ನೀಡಿದ್ದಾರೆಂದೂ ಪೊಲೀಸರು ವಾದಿಸಿದ್ದರು.

ಏನಿದು ಪ್ರಕರಣ?

ಮುಂಬೈ ಪೊಲೀಸರು ಕಳೆದ ಕೆಲ ಸಮಯದ ಹಿಂದೆ ಟಿಆರ್‌ಪಿ ಹಗರಣ ಸಂಬಂಧ ಬಹುದೊಡ್ಡ ರಹಸ್ಯ ಬೇಧಿಸಿದ್ದರು. ಪೊಲೀಸ್ ಕಮಿಷನರ್ ಪರಮ್ ವೀರ್ ಸಿಂಗ್ ಈ ಬಗ್ಗೆ ಮಾತನಾಡುತ್ತಾ ರಿಪಬ್ಲಿಕ್ ಟಿವಿ ಸೇರಿ ಮೂರು ಚಾನೆಲ್‌ಗಳು ಟಿಆರ್‌ಪಿ ಗೋಲ್‌ಮಾಲ್ ನಡೆಸಿವೆ ಎಂದು ಆರೋಪಿಸಿದ್ದರು. ಅಲ್ಲದೇ ಜನರಿಗೆ ಹಣ ನೀಡಿ ಮನೆಯಲ್ಲಿ ರಿಪಬ್ಲಿಕ್ ಟಿವಿ ಚಾನೆಲ್ ಆನ್ ಇಡುವಂತೆಯೂ ಹೇಳುತ್ತಾರೆ ಎಂದೂ ಆರೋಪಿಸಿದ್ದರು.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?