ಪಾಪಿಷ್ಟರು ಮಾತ್ರ ಕುಂಭಮೇಳಕ್ಕೆ ಹೋಗ್ತಾರೆ.. ಭೀಮ್‌ ಆರ್ಮಿ ಚಂದ್ರಶೇಖರ ಆಜಾದ್ ವಿವಾದಾತ್ಮಕ ಹೇಳಿಕೆ!

Published : Jan 12, 2025, 08:59 AM ISTUpdated : Jan 12, 2025, 12:26 PM IST
ಪಾಪಿಷ್ಟರು ಮಾತ್ರ ಕುಂಭಮೇಳಕ್ಕೆ ಹೋಗ್ತಾರೆ.. ಭೀಮ್‌ ಆರ್ಮಿ ಚಂದ್ರಶೇಖರ ಆಜಾದ್ ವಿವಾದಾತ್ಮಕ ಹೇಳಿಕೆ!

ಸಾರಾಂಶ

Maha Kumbh Mela 2025: ಕುಂಭಮೇಳ 2025: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಪ್ರಾರಂಭಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಪ್ರಯಾಗರಾಜ್‌ನಲ್ಲಿ ಮಹಾಕುಂಭವು ಜನವರಿ 13 ರಿಂದ ಪ್ರಾರಂಭವಾಗಲಿದೆ. ಎಲ್ಲ ಸಿದ್ಧತೆಗಳು ನಡೆದಿರುವ ನಡುವೆ, ಮಹಾಕುಂಭಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆಗಳ ಸರಣಿಯೂ ಮುಂದುವರಿದಿದೆ. ಇದೀಗ ಆಜಾದ್ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ನಗೀನಾ ಲೋಕಸಭಾ ಕ್ಷೇತ್ರದ ಸಂಸದ ಚಂದ್ರಶೇಖರ್ ಆಜಾದ್ ಅವರು ಮಹಾಕುಂಭ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಾಪ ಮಾಡಿದವರು ಮಾತ್ರ ಮಹಾಕುಂಭಕ್ಕೆ ಹೋಗುತ್ತಾರೆ ಎಂದು ಚಂದ್ರಶೇಖರ್ ಹೇಳಿದ್ದಾರೆ.

ಪಾಪ ಮಾಡಿದವರು ಮಾತ್ರ ಕುಂಭಮೇಳದಲ್ಲಿ ಪಾಲ್ಗೊಳ್ಳುತ್ತಾರೆ. ನಾನು ಯಾವುದೇ ಪಾಪ ಮಾಡಿಲ್ಲ. ಹೀಗಾಗಿ ಈ ರೀತಿ ಸಾರ್ವಜನಿಕವಾಗಿ ಸ್ನಾನ ಮಾಡುವ ನಾಟಕ ಮಾಡುವುದಿಲ್ಲ’ ಎಂದು ಭೀಮ್‌ ಆರ್ಮಿ ಮುಖ್ಯಸ್ಥ ಹಾಗೂ ಉತ್ತರ ಪ್ರದೇಶದ ಸಂಸದ ಚಂದ್ರಶೇಖರ ಆಜಾದ್‌ ಹೇಳಿದ್ದಾರೆ.

ಇದನ್ನೂ ಓದಿ: ಕುಂಭಮೇಳಕ್ಕೆ ಬೆಂಬಲ, ಗಂಗಾಸಾಗರ ಕಡೆಗೆ ತಿರುಗಿಯೂ ನೋಡೋಲ್ಲ: ಪ್ರಧಾನಿ ಮೋದಿ ವಿರುದ್ಧ ಮಮತಾ ವಾಗ್ದಾಳಿ!

ಸಂಸದ ಚಂದ್ರಶೇಖರ್ ಹೇಳಿದ್ದೇನು?
ವಾಸ್ತವವಾಗಿ, ಸಂಸದ ಚಂದ್ರಶೇಖರ್ ಆಜಾದ್ ಅವರು ತಮ್ಮ ಮೇಲಿನ ಹಲ್ಲೆ ಪ್ರಕರಣಕ್ಕೆ ಹಾಜರಾಗಲು ಗುರುವಾರ ಸಹರಾನ್‌ಪುರ ನ್ಯಾಯಾಲಯಕ್ಕೆ ಬಂದಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಚಂದ್ರಶೇಖರ್ ಮಾತನಾಡಿ, ತಮ್ಮ ಆಜಾದ್ ಸಮಾಜ ಪಕ್ಷವು ಸಾವಿರಾರು ವರ್ಷಗಳಿಂದ ಧರ್ಮ ಮತ್ತು ಪಂಥದ ಹೆಸರಿನಲ್ಲಿ ಅವಮಾನಕ್ಕೊಳಗಾದ ಬಡವರು ಮತ್ತು ದುರ್ಬಲರ ಪರ ಹೋರಾಡುತ್ತಿದೆ ಎಂದರು ಇದೇ ವೇಳೆ ಪ್ರಯಾಗ ರಾಜ್ ಕುಂಭಮೇಳ ವಿಚಾರವಾಗಿ ಮಾತನಾಡಿ, ಕುಂಭ ಮೇಳಕ್ಕೆ ಯಾರು ಹೋಗ್ತಾರೆ? ಅಲ್ಲಿಗೆ ಪಾಪ ಮಾಡಿದವರು ಮಾತ್ರ ಹೋಗುತ್ತಾರೆ, ಪಾಪ ಮಾಡಿದವರು ಮಾತ್ರ ಹೋಗಬೇಕು. ಆದರೆ ಯಾರೋ ಪಾಪ ಮಾಡಿದಾಗ ಯಾರಾದರೂ ಹೇಳುತ್ತಾರಾ? ಅದರ ಬಗ್ಗೆ ವಿವರವಾಗಿ ಚರ್ಚೆ ಮಾಡಲಾಗಿಲ್ಲ. ಪ್ರಸ್ತುತ ಮಾಧ್ಯಮಗಳು, ಪೊಲೀಸ್ ಆಡಳಿತ ಮತ್ತು ನ್ಯಾಯಾಂಗವು ದುರ್ಬಲ ವರ್ಗದ ವಿರುದ್ಧ ನಿಂತಿದೆ ಎಂದು ತೋರುತ್ತದೆ ಎಂದಿದ್ದಾರೆ.

ಶಂಕರಾಚಾರ್ಯ ಸ್ವಾಮಿ ಖಂಡನೆ:

ಅವರ ಹೇಳಿಕೆಗೆ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮಹಾರಾಜ್ ಕಿಡಿಕಾರಿದ್ದು. ‘ಜನರು ತಮ್ಮ ಪಾಪಗಳನ್ನು ಶುದ್ಧೀಕರಿಸಲು ಪ್ರಯತ್ನಿಸುತ್ತಿದ್ದರೆ, ಆ ಪ್ರಯತ್ನವನ್ನು ಯಾರೂ ತಕರಾರು ತೆಗೆಯಬಾರದು. ಮೇಳದಲ್ಲಿ ಪಾಲ್ಗೊಳ್ಳುವವರನ್ನೆಲ್ಲ ಪಾಪಿಗಳು ಎಂದು ಕರೆಯಬಾರದು’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಮದುವೆಯಾದ್ರೆ ಸಿಗುತ್ತೆ 2.5 ಲಕ್ಷ ರೂಪಾಯಿ; ಶೇ.99 ಜನರಿಗೆ ಈ ವಿಷಯವೇ ಗೊತ್ತಿಲ್ಲ