ಕೇದಾರನಾಥ ಯಾತ್ರಿಕರ ಮೇಲೆ ಕುದುರೆ ಸೇವೆ ಸಿಬ್ಬಂದಿಗಳಿಂದಲೇ ಹಲ್ಲೆ, ವಿಡಿಯೋ ವೈರಲ್!

Published : Jun 13, 2023, 07:24 PM ISTUpdated : Jun 13, 2023, 07:36 PM IST
ಕೇದಾರನಾಥ ಯಾತ್ರಿಕರ ಮೇಲೆ ಕುದುರೆ ಸೇವೆ ಸಿಬ್ಬಂದಿಗಳಿಂದಲೇ ಹಲ್ಲೆ, ವಿಡಿಯೋ ವೈರಲ್!

ಸಾರಾಂಶ

ಕೇದಾರನಾಥ ಪವಿತ್ರ ಕ್ಷೇತ್ರಕ್ಕೆ ತೆರಳಿದ ಯಾತ್ರಿಕರ ಮೇಲೆ ಹಲ್ಲೆ ಮಾಡಲಾಗಿದೆ. ಯಾತ್ರಿಕರಿಗೆ ಸೇವೆ ನೀಡುವ ಸಿಬ್ಬಂಧಿಗಳಿಂದಲೇ ದಾಳಿ ನಡೆದಿದೆ. ಈ ಕುರಿತು ವಿಡಿಯೋ ವೈರಲ್ ಆಗಿದೆ.

ಕೇದಾರನಾಥ್(ಜೂ.13): ಕೇದಾರನಾಥ ಯಾತ್ರೆಗೆ ಆಗಮಿಸುವ ಯಾತ್ರಿಕರ ಸಂಖ್ಯೆ ವರ್ಷದಿಂದ ವರ್ಷ ಹೆಚ್ಚಾಗುತ್ತಿದೆ. ಪವಿತ್ರ ದರ್ಶನಕ್ಕಾಗಿ ಭಕ್ತರು ಕಠಿಣ ಹಾದಿ ಸವೆಸಿ ಸಾಗುತ್ತಾರೆ. ಇದೇ ರೀತಿ ಕೇದಾರನಾಥ ಯಾತ್ರೆಗೆ ಬಂದಿದ್ದ ಜೋಡಿ ಮೇಲೆ, ಯಾತ್ರಿಕರಿಗೆ ಸೇವೆ ನೀಡುವ ಕುದರೆ ಸವಾರಿ ಸಿಬ್ಬಂದಿಗಳೇ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಕುರಿತ ವಿಡಿಯೋ ವೈರಲ್ ಆಗಿದೆ. ಹಲ್ಲೆಕೋರರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಯುವತಿ ಸೇರಿ ಕೆಲ ಯಾತ್ರಿಕರ ಮೇಲೆ ತೀವ್ರ ದಾಳಿ ನಡೆಸಲಾಗಿದೆ. ಬಡಿಗೆ, ಕೋಲುಗಳಿಂದ ದಾಳಿ ನಡೆದಿತ್ತು ಯಾತ್ರಿಕರು ಗಾಯಗೊಂಡಿದ್ದಾರೆ.

ಎಪ್ರಿಲ್ 15 ರಿಂದ ಕೇದಾರನಾಥ ಯಾತ್ರೆ ಆರಂಭಗೊಂಡಿದೆ. ರುದ್ರಪ್ರಯಾಗ ಜಿಲ್ಲೆಯಿಂದ 82 ಕಿಲೋಮೀಟರ್ ದೂರದಲ್ಲಿರುವ ಚಾರ್ ಧಾಮ್ ಯಾತ್ರೆಗೆ ಉತ್ತರಖಂಡ ಸರ್ಕಾರ ಎಲ್ಲಾ ಸಿದ್ದತೆ ಮಾಡಿದೆ. ಇದೀಗ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, ಕೇದಾರನಾಥ ಯಾತ್ರೆಗೆ ನಿಯೋಜಿಸಿರುವ ಪೊಲೀಸರು ಹಾಗೂ ಇತರ ಭದ್ರತಾ ವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ವಿಡಿಯೋದಲ್ಲಿ ಯುವತಿ ಹಾಗೂ ಆಕೆಯ ಜೊತೆಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಲಾಗಿದೆ.

ಕಾಶಿ, ಪುರಿ,ಆಯೋಧ್ಯೆ ಸೇರಿ 6 ಪುಣ್ಯಕ್ಷೇತ್ರ ಯಾತ್ರೆಗೆ ಕೈಗೆಟುಕುವ ದರದ ಪ್ಯಾಕೇಜ್ ಘೋಷಿಸಿದ ರೈಲ್ವೇ !

ಕುದುರೆ ಸವಾರಿ ಸೇವೆ ನೀಡುವ ಸಿಬ್ಬಂಧಿಗಳು ತಮ್ಮ ಕೈಯಲ್ಲಿದ್ದ ಕೋಲಿನ ಮೂಲಕ ಹಲ್ಲೆ ನಡೆಸಲಾಗಿದೆ. ಯುವತಿ ಪರಿಪರಿಯಾಗಿ ಬೇಡಿಕೊಂಡರು ಜೊತೆಗಿದ್ದ ವ್ಯಕ್ತಿ ಮೇಲೆ ಹಲ್ಲೆ ನಡೆಸಲಾಗಿದೆ. ಕೆಲ ಹೊತ್ತು ಈ ದಾಳಿ ನಡೆದಿದೆ. ಯಾತ್ರಿಕರ ಮೇಲೆ ಹಲ್ಲೆ ನಡೆಸಲಾಗಿದೆ. ಈ ಘಟನೆಗೆ ಕಾರಣವೇನು ಅನ್ನೋದು ತಿಳಿದುಬಂದಿಲ್ಲ. ಇಷ್ಟೇ ಅಲ್ಲ  ಈ ಹಲ್ಲೆ ನಡೆದಿರುವ ದಿನಾಂಕ ಕುರಿತು ಸ್ಪಷ್ಟತೆ ಸಿಕ್ಕಿಲ್ಲ. ಆದರೆ ಈ ಬಾರಿಯ ಯಾತ್ರೆ ವೇಳೆ ನಡೆದಿದೆ ಎನ್ನಲಾಗುತ್ತಿದೆ.

 

ಹಿಂದೂ ಯಾತ್ರಿಕರ ಮೇಲೆ ಹಲ್ಲೆ ಮಾಡಿದ ಘಟನೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಕುದುರಿ ಸವಾರಿ ನೀಡುವ ಸಿಬ್ಬಂದಿಗಳು ಮತ್ತೊಂದು ಸಮುದಾಯಕ್ಕೆ ಸೇರಿದವರು. ಹೀಗಾಗಿ ಕೋಮುಸಂಘರ್ಷ ನಡೆದಿದೆ. ತಕ್ಷಣವೇ ಉತ್ತರಖಂಡ ಸರ್ಕಾರ ಕುದುರೆ ಸೇವೆ ನೀಡುವ ಸಿಬ್ಬಂದಿಗಳ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದೇ ವೇಳೆ ಅನ್ಯ ಸಮುದಾಯಕ್ಕೆ ಹಿಂದೂ ಪವಿತ್ರಕ್ಷೇತ್ರದ ಗಾಂಭೀರ್ಯತೆ ಹಾಗೂ ಶ್ರದ್ಧೆ ಅರ್ಥವಾಗುವುದಿಲ್ಲ. ಹೀಗಾಗಿ ಕೆಲಸದಿಂದ ವಜಾಗೊಳಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

 

 

ಅಮರನಾಥ ಯಾತ್ರೆ ಮೇಲೆ ದಾಳಿಗೆ ಉಗ್ರ ಸಂಚು: ಪಾಕ್‌​ನಿಂದ ಇಬ್ಬರು ಉಗ್ರರ ನಿಯೋ​ಜ​ನೆ

ಕಳೆದ ವರ್ಷದ ಚಾರ್‌ಧಾಮ್ ಯಾತ್ರೆಯಲ್ಲಿ ಅತ್ಯಂತ ದುರ್ಗಮ ಹಾದಿ ಹಾಗೂ ಪ್ರಕ್ಷುಬ್ದ ವಾತವಾರಣದಿಂದ ಹಲವು ಯಾತ್ರಿಗಳು ಅಸ್ವಸ್ಥಗೊಂಡಿದ್ದರು.  ಯಾತ್ರೆ ಆರಂಭವಾಗಿ 2 ತಿಂಗಳಿಗಿಂತ ಕಡಿಮೇ ಅವಧಿಯಲ್ಲೇ 203 ಯಾತ್ರಿಕರು ಸಾವಿಗೀಡಾಗಿದ್ದರು.. ಇವರಲ್ಲಿ ಬಹುತೇಕರು ಹೃದಯಾಘಾತದಿಂದ ಮರಣಹೊಂದಿದ್ದಾರೆ ಎಂದು ಉತ್ತರಾಖಂಡ ತುರ್ತು ಕಾರ್ಯಾಚರಣೆ ಕೇಂದ್ರ ಬಿಡುಗಡೆ ಮಾಡಿರುವ ದತ್ತಾಂಶದಿಂದ ತಿಳಿದುಬಂದಿದೆ. 97 ಯಾತ್ರಿಗಳು ಕೇದಾರನಾಥ ಯಾತ್ರೆ ದಾರಿಯಲ್ಲಿ, 51 ಮಂದಿ ಬದರೀನಾಥ ಧಾಮ, 13 ಮಂದಿ ಗಂಗೋತ್ರಿ ಮತ್ತು 42 ಮಂದಿ ಯಮುನೋತ್ರಿ ಯಾತ್ರೆಯ ವೇಳೆ ಸಾವಿಗೀಡಾಗಿದ್ದಾರೆ. ಮೇ 3ರಿಂದ ಆರಂಭವಾದ ಯಾತ್ರೆಯಲ್ಲಿ ಈವರೆಗೆ ಸುಮಾರು 25ಕ್ಕೂ ಲಕ್ಷಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು