
ತಿರುವನಂತಪುರ (ನ.16): ನಟಿ ಸನ್ನಿ ಲಿಯೋನ್ ಅಥವಾ ಕರಣ್ಜೀತ್ ಕೌರ್ ವೋಹ್ರಾ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗೆ ಕೇರಳ ಹೈಕೋರ್ಟ್ ಬುಧವಾರ ತಡೆ ನೀಡಿದೆ. ಸನ್ನಿ ಲಿಯೋನ್, ಆಕೆಯ ಪತಿ ಡೇನಿಯಲ್ ವೆಬೆರ್ ಹಾಗೂ ಅವರ ಸಿಬ್ಬಂದಿ ವಿರುದ್ಧ ಮೋಸ ಪ್ರಕರಣ ದಾಖಲಾಗಿತ್ತು. ಈ ಕುರಿತಾಗಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಅರ್ಜಿದಾರರು ಕೋರಿದ್ದರು. ಇನ್ನೊಂದೆಡೆ ಸನ್ನಿ ಲಿಯೋನ್ ತಮ್ಮ ವಿರುದ್ಧ ದಾಖಲಾಗಿರುವ ಕೇಸ್ ಅನ್ನು ವಜಾ ಮಾಡುವಂತೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿಯಾದ್ ರೆಹಮಾನ್, ಆಕೆಯ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗೆ ತಡೆ ನೀಡಿದ್ದಾರೆ. ಅರ್ಜಿಯ ಮುಂದಿನ ವಿಚಾರಣೆಯ ದಿನಾಂಕದವರೆಗೆ ನ್ಯಾಯಾಲಯವು ಕ್ರಿಮಿನಲ್ ಪ್ರಕ್ರಿಯೆಗಳಿಗೆ ತಡೆ ನೀಡಿದೆ. ಕೇರಳ ಮೂಲದ ಈವೆಂಟ್ ಮ್ಯಾನೇಜರ್ ನೀಡಿದ ದೂರಿನ ಆಧಾರದ ಮೇಲೆ ದಾಖಲಾದ ಅಪರಾಧದಲ್ಲಿ ಲಿಯೋನ್, ಅವರ ಪತಿ ಮತ್ತು ಅವರ ಉದ್ಯೋಗಿ ಆರೋಪಿಗಳಾಗಿದ್ದಾರೆ. ಈವೆಂಟ್ಗಳಲ್ಲಿ ಭಾಗವಹಿಸಲು ಹಾಗೂ ನೃತ್ಯ ಪ್ರದರ್ಶನ ನೀಡಲು ಸನ್ನಿ ಲಿಯೋನ್ಗೆ ಲಕ್ಷಾಂತರ ಹಣ ಪಾವತಿ ಮಾಡಲಾಗಿತ್ತು. ಹಾಗಿದ್ದರೂ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ ಎಂದು ದೂರುದಾರರು ಆರೋಪ ಮಾಡಿದ್ದರು.
ಅದರ ಬೆನ್ನಲ್ಲಿಯೇ, ದೂರುದಾರರು ಸನ್ನಿ ಲಿಯೋನ್ ವಿರುದ್ಧ, ಭಾರತೀಯ ದಂಡ ಸಂಹಿತೆ 406 (ಕ್ರಿಮಿನಲ್ ನಂಬಿಕೆಯ ಉಲ್ಲಂಘನೆ), 420 (ವಂಚನೆ ಮತ್ತು ಅಪ್ರಾಮಾಣಿಕತೆ ಆಸ್ತಿ ವಿತರಣೆಯನ್ನು ಪ್ರೇರೇಪಿಸುವ) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳ ಆಯೋಗವನ್ನು ಆರೋಪಿಸಿ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದರು. ತಮ್ಮ ಮೇಲೆ ಹಾಕಲಾಗಿರುವ ಕೇಸ್ನ ವಿರುದ್ಧ ಸನ್ನಿ ಲಿಯೋನ್, ಅವರ ಪತಿ ಹಾಗೂ ಸಿಬ್ಬಂದಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಟಿಇಟಿ ಹಾಲ್ ಟಿಕೆಟಲ್ಲಿ ಸನ್ನಿ ಲಿಯೋನ್ ಅಶ್ಲೀಲ ಫೋಟೋ: ದೂರು ದಾಖಲು
ತಮ್ಮನ್ನು ನಿರಪರಾಧಿಗಳು ಎಂದು ಹೇಳಿಕೊಂಡಿದ್ದ ಅವರು, ಅವರು ಮಾಡಿರುವ ಆರೋಪಗಳನ್ನು ಗಣನೆಗೆ ತೆಗೆದುಕೊಂಡಿರೂ, ಅವರು ಹಾಕಿರುವ ಕೇಸ್ಗಳಿಗೂ ಅದಕ್ಕೂ ಸಂಬಂಧವೇ ಇಲ್ಲ ಎಂದು ಅರ್ಜಿ ಸಲ್ಲಿಸಿದ್ದರು.
Sunny Leoneರ ಕಲರ್ಫುಲ್ ಬೀಚ್ ಲುಕ್ಗೆ ಫ್ಯಾನ್ಸ್ ಫುಲ್ ಫೀದಾ!
ದೂರುದಾರರು ಹಾಕಿರುವ ಅರ್ಜಿಯಿಂದ ಅವರಿಗೆ ಯಾವುದೇ ನಷ್ಟವಾಗಿಲ್ಲ. ಆದರೆ, ಅವರು ಹಾಕಿರುವ ಅರ್ಜಿಯಿಂದ ನಮ್ಮ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಸನ್ನಿ ಲಿಯೋನ್ ಹೈಕೋರ್ಟ್ಗೆ ಸಲ್ಲಿಸಿದ್ದರು. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಜುಲೈ 2022 ರಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ವಜಾಗೊಳಿಸಿದ ಅದೇ ಆರೋಪಗಳೊಂದಿಗೆ ದೂರುದಾರರು ಸಿವಿಲ್ ಮೊಕದ್ದಮೆಯನ್ನು ಸಹ ಸಲ್ಲಿಸಿದ್ದಾರೆ ಎಂದು ಮನವಿಯಲ್ಲಿ ಹೇಳಲಾಗಿತ್ತು. ಹೀಗಾಗಿ ತಮ್ಮ ವಿರುದ್ಧದ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಸನ್ನಿ ಲಿಯೋನ್ ಕೋರಿದ್ದರು. ಅರ್ಜಿದಾರರ ಪರ ಹಿರಿಯ ವಕೀಲ ಪಿ ವಿಜಯಭಾನು ಮತ್ತು ವಕೀಲರಾದ ಆರ್ ಸಂಜಿತ್, ಸಿಎಸ್ ಸಿಂಧು ಕೃಷ್ಣ, ಸೂರಜ್ ಕೃಷ್ಣನ್, ಮತ್ತು ಸಿಧಿ ಕೆ ಕುಟ್ಟಿ ವಾದ ಮಂಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ