ಬಾಲ್ಯವಿವಾಹ ತಡೆಗೆ ಆಹ್ವಾನ ಪತ್ರಿಕೆಯಲ್ಲಿ ಜನ್ಮ ದಿನಾಂಕ ಕಡ್ಡಾಯ!

Published : Apr 10, 2021, 04:36 PM IST
ಬಾಲ್ಯವಿವಾಹ ತಡೆಗೆ ಆಹ್ವಾನ ಪತ್ರಿಕೆಯಲ್ಲಿ ಜನ್ಮ ದಿನಾಂಕ ಕಡ್ಡಾಯ!

ಸಾರಾಂಶ

ಬಾಲ್ಯವಿವಾಹ ತಡೆಗೆ ಆಹ್ವಾನ ಪತ್ರಿಕೆಯಲ್ಲಿ ಜನ್ಮ ದಿನಾಂಕ ಕಡ್ಡಾಯ| ರಾಜಸ್ಥಾನ ಸರ್ಕಾರದ ಹೊಸ ಆದೇಶ

ಜೈಪುರ(ಏ.10): ಬಾಲ್ಯ ವಿವಾಹ ತಡೆಗೆ ರಾಜಸ್ಥಾನ ಸರ್ಕಾರ ಕಟ್ಟುನಿಟ್ಟಿನ ಅದೇಶ ಹೊರಡಿಸಿದೆ. ಮದುವೆಯ ಆಹ್ವಾನ ಪತ್ರಿಕೆಯಲ್ಲಿ ವರ ಮತ್ತು ವಧುವಿನ ಹೆಸರನ್ನು ಪ್ರಕಟಿಸುವುದರ ಜೊತೆಗೆ ಅವರ ಜನ್ಮ ದಿನಾಂಕವನ್ನೂ ನಮೂದಿಸಬೇಕು ಎಂದು ಅದು ಸೂಚಿಸಿದೆ.

ಈ ಬಾರಿ ಮೇ 14ರಂದು ಅಕ್ಷಯ ತೃತೀಯಾ ಇದೆ. ಬಳಿಕ ಮೇ 26ರಂದು ಶುಕ್ಲ ಪೂರ್ಣಿಮೆ ಇದೆ. ಇವೆರಡು ಶುಭ ದಿನವಾಗಿರುವ ಕಾರಣ ಹೆಚ್ಚಿನ ಮದುವೆ ಸಮಾರಂಭಗಳು ಅಂದೇ ಜರುತ್ತವೆ. ಈ ವೇಳೆ ಬಾಲ್ಯ ವಿವಾಹದ ಸಾಧ್ಯತೆಯೂ ಹೆಚ್ಚಿರುತ್ತದೆ. ಹೀಗಾಗಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.

ಬಾಲ್ಯ ವಿವಾಹ ಅಪರಾಧ ಎಂಬುದನ್ನು ಜನರು ಅರಿತಿರಬೇಕು. ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸುವಾಗ ಜನ್ಮದಿನಾಂಕ ಸರ್ಟಿಫಿಕೇಟ್‌ ನೀಡಬೇಕು. ಜನ್ಮದಿನಾಂಕವು ಲಗ್ನಪತ್ರಿಕೆಯಲ್ಲಿ ಕಡ್ಡಾಯವಾಗಿ ನಮೂದಾಗಿರಬೇಕು.

ಒಂದು ವೇಳೆ ಬಾಲ್ಯ ವಿವಾಹ ನಡೆಯುತ್ತಿರುವುದು ಕಂಡು ಬಂದರೆ, ಕುಟುಂಬಸ್ಥರು, ಆಯೋಜಕರು, ಅಡುಗೆಭಟ್ಟರು, ಪುರೋಹಿತರು ಹಾಗೂ ಮದುವೆಯ ಅತಿಥಿಗಳೆಲ್ಲರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್