ನಕಲಿ ಎನ್‌ಸಿಸಿ ಕ್ಯಾಂಪ್‌ನಲ್ಲಿ 13 ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ!

Published : Aug 20, 2024, 09:12 AM IST
ನಕಲಿ ಎನ್‌ಸಿಸಿ ಕ್ಯಾಂಪ್‌ನಲ್ಲಿ 13 ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ!

ಸಾರಾಂಶ

ಪ್ರಕರಣದಲ್ಲಿ ಶಿಬಿರದ ಆಯೋಜಕರು, ಶಾಲೆಯ ಪ್ರಾಂಶುಪಾಲರು, ಇಬ್ಬರು ಶಿಕ್ಷಕರು ಮತ್ತು ವರದಿಗಾರ ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿದೆ.

ಚೆನ್ನೈ (ಆ.20): ಕೋಲ್ಕತಾದ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ ಘಟನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿರುವಾಗಲೇ, ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 13 ಶಾಲಾ ಬಾಲಕಿಯರ ಮೇಲೆ ನಕಲಿ ಎನ್‌ಸಿಸಿ ಕ್ಯಾಂಪ್‌ವೊಂದರಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಈ ಕೃತ್ಯ ಶಾಲಾ ಆಡಳಿತ ಮಂಡಳಿ ಗಮನಕ್ಕೆ ಬಂದರೂ, ಅದನ್ನು ಮುಚ್ಚಿಡಲು ಯತ್ನಿಸಿದ ಹೇಯ ಘಟನೆಯೂ ಆಗಿದೆ. ಪ್ರಕರಣ ಸಂಬಂಧ ಶಾಲೆಯ ಪ್ರಾಂಶುಪಾಲ, ಇಬ್ಬರು ಶಿಕ್ಷಕರು, ಕ್ಯಾಂಪ್‌ ಆಯೋಜಕರು ಸೇರಿ 13 ಮಂದಿಯನ್ನು ಬಂಧಿಸಲಾಗಿದೆ. ಒಬ್ಬಳು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದರೆ, 12 ಮಂದಿಯನ್ನು ಲೈಂಗಿಕವಾಗಿ ಶೋಷಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಕೃಷ್ಣಗಿರಿಯ ಖಾಸಗಿ ಶಾಲೆಗೆ ಎನ್‌ಸಿಸಿ ಘಟಕ ನಡೆಸುವ ಅನುಮತಿ ಇರಲಿಲ್ಲ. ಇದನ್ನೇ ಬಂಡವಾಳವಾಗಿಸಿಕೊಂಡ ಗುಂಪೊಂದು ಶಾಲೆಯಲ್ಲಿ ಒಂದು ಶಿಬಿರ ನಡೆಸಿದರೆ ಅರ್ಹತೆ ಸಿಗಲಿದೆ ಎಂದು ಹೇಳಿತ್ತು. ಆ ಗುಂಪಿನ ಪೂರ್ವಾಪರ ಬಗ್ಗೆ ಶಾಲಾ ಆಡಳಿತ ಮಂಡಳಿ ವಿಚಾರಣೆ ನಡೆಸಲು ಹೋಗಲಿಲ್ಲ. 17 ಬಾಲಕಿಯರು ಸೇರಿದಂತೆ 41 ವಿದ್ಯಾರ್ಥಿಗಳು ಮೂರು ದಿವಸಗಳ ಶಿಬಿರಕ್ಕೆ ಹೆಸರು ನೋಂದಣಿ ಮಾಡಿಸಿದ್ದರು. ಬಾಲಕಿಯರನ್ನು ಶಾಲೆಯ ಸಭಾಂಗಣದ ಮೊದಲನೆ ಮಹಡಿಯಲ್ಲಿ ವಾಸ್ತವ್ಯ ಮಾಡಿಸಲಾಗಿತ್ತು. ಶಿಕ್ಷಕರನ್ನು ಶಿಬಿರದಿಂದ ಹೊರಗಿಡಲಾಗಿತ್ತು.

ಶಿಬಿರದಲ್ಲಿದ್ದಾಗ ಬಾಲಕಿಯರ ಮೇಲೆ ಲೈಂಗಿಕ ಶೋಷಣೆ ನಡೆಸಲಾಗಿದೆ ಎಂದು ದೂರಲಾಗಿದೆ. ಎಲ್ಲ ಆರೋಪಿಗಳ ವಿರುದ್ಧ ಪೋಕ್ಸೋ ಅಡಿ ಪ್ರಕರಣ ದಾಖಲಿಸಲಾಗಿದೆ ಇದೇ ಗುಂಪು ಬೇರೆ ಕಡೆಯೂ ಇದೇ ರೀತಿ ನಕಲಿ ಶಿಬಿರ ನಡೆಸಿದೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಖಿ ಕಟ್ಟಲು ತವರಿಗೆ ಹೊರಟ ಹೆಂಡತಿಯ ಮೂಗು ಕತ್ತರಿಸಿದ ಪಾಪಿ ಗಂಡ!

"ಶಾಲಾ ಅಧಿಕಾರಿಗಳಿಗೆ ಲೈಂಗಿಕ ಅಪರಾಧಗಳ ಬಗ್ಗೆ ತಿಳಿದಿದ್ದರು ಆದರೆ ಪೊಲೀಸರಿಗೆ ತಿಳಿಸುವ ಬದಲು ವಿಷಯವನ್ನು ಮುಚ್ಚಿಡಲು ನಿರ್ಧರಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸದಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ ತಂಗದುರೈ ತಿಳಿಸಿದ್ದಾರೆ. ಬಾಲಕಿಯರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಕ್ರಮ ಕೈಗೊಂಡಿದೆ. ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ರಾಷ್ಟ್ರವ್ಯಾಪಿ ಆಕ್ರೋಶದ ನಡುವೆ ಈ ಪ್ರಕರಣವು ಬಂದಿದೆ.

ಹುಬ್ಬಳ್ಳಿ ಶಾಲೇಲಿ ಮಕ್ಕಳಿಂದ ಮೀಟರ್‌ ಬಡ್ಡಿ ವ್ಯವಹಾರ: ದುಡ್ಡು ಕೊಡದದ್ದಕ್ಕೆ ಚಾಕುವಿನಿಂದ ಇರಿದ ಬಾಲಕ..!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು
India Latest News Live: ಭಾರತ-ದಕ್ಷಿಣ ಆಫ್ರಿಕಾ 2ನೇ ಟಿ20 - ಮತ್ತೊಂದು ಗೆಲುವಿನ ವಿಶ್ವಾಸದಲ್ಲಿ ಟೀಂ ಇಂಡಿಯಾ!