
ನವದೆಹಲಿ: ಮಹದೇವ ಬೆಟ್ಟಿಂಗ್ ಆ್ಯಪ್ನ ಪ್ರವರ್ತಕರು, ಛತ್ತೀಸ್ಗಢ ಸಿಎಂ ಭೂಪೇಶ್ ಬಘೇಲ್ಗೆ 508 ಕೋಟಿ ರು. ಕೊಟ್ಟಿದ್ದಾರೆ ಎಂಬ ಜಾರಿ ನಿರ್ದೇಶನಾಲಯದ ಮೂಲಗಳ ಮಾಹಿತಿ ನಡುವೆಯೇ, ದುಬೈಗೆ ಪರಾರಿಯಾಗುವಂತೆ ತನಗೆ ಹೇಳಿದ್ದೇ ಬಘೇಲ್ ಎಂದು ಆ್ಯಪ್ನ ಮುಖ್ಯಸ್ಥ ಶುಭಂ ಸೋನಿ (Shubham Soni) ಸ್ಫೋಟಕ ಹೇಳಿಕೆ ನೀಡಿದ್ದಾನೆ.
ಈ ಕುರಿತು ವಿಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಸೋನಿ, ಮಹದೇವ ಬೆಟ್ಟಿಂಗ್ ಆ್ಯಪ್ನ (Mahadev Betting App) ನಿಜವಾದ ಮಾಲಿಕ ನಾನೇ. ಪ್ರಕರಣ ಬೆಳಕಿಗೆ ಬಂದ ಬಳಿಕ ದುಬೈಗೆ ತೆರಳುವಂತೆ ನನಗೆ ಸೂಚಿಸಿದ್ದೇ ಬಘೇಲ್. ಅವರ ಸೂಚನೆ ಅನ್ವಯವೇ ನಾನು ದುಬೈಗೆ ತೆರಳಿದ್ದೆ ಎಂದು ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಛತ್ತೀಸ್ಗಢ ವಿಧಾನಸಭಾ ಚುನಾವಣೆಯ (Chhattisgarh assembly elections) ಮೊದಲ ಹಂತದ ಮತದಾನ ನ.7ರಂದು ನಡೆಯಲಿದ್ದು, ಅದಕ್ಕೆ ಎರಡು ದಿನ ಮೊದಲು ಸ್ವತಃ ಮುಖ್ಯಮಂತ್ರಿ ವಿರುದ್ಧವೇ ಈ ಗಂಭೀರ ಆರೋಪ ಕೇಳಿಬಂದಿದೆ. ಮಹದೇವ ಬೆಟ್ಟಿಂಗ್ ಆ್ಯಪ್ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿರುವ ಇ.ಡಿ. ಅಧಿಕಾರಿಗಳು ಅದರಲ್ಲಿ ಶುಭಂ ಸೋನಿಯನ್ನು ಪ್ರಮುಖ ಆರೋಪಿಯಾಗಿ ಪರಿಗಣಿಸಿದ್ದು, ಆತ ತಲೆ ಮರೆಸಿಕೊಂಡಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ