ಛತ್ತೀಸ್‌ಗಢ ಮದ್ಯ ಹಗರಣ : ಮಾಜಿ ಸಿಎಂ ಪುತ್ರಗೆ ₹ 250 ಕೋಟಿ ಲಂಚ

Kannadaprabha News   | Kannada Prabha
Published : Dec 25, 2025, 04:49 AM IST
Chaitanya Baghel

ಸಾರಾಂಶ

ಛತ್ತೀಸ್‌ಗಢದ ಬಹುಕೋಟಿ ಮದ್ಯ ಹಗರಣಲ್ಲಿ ಮಾಜಿ ಸಿಎಂ ಭೂಪೇಶ್‌ ಬಘೇಲ್‌ ಅವರ ಪುತ್ರ ಚೈತನ್ಯರಿಗೂ 200ರಿಂದ 250 ಕೋಟಿ ರು. ಲಂಚ ಸಂದಾಯವಾಗಿತ್ತು ಎಂದು ಭ್ರಷ್ಟಾಚಾರ ನಿಗ್ರಹ ದಳದ ಆರ್ಥಿಕ ಅಪರಾಧ ವಿಭಾಗ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಮಾಹಿತಿ ನೀಡಿದೆ.

ರಾಯ್ಪುರ: ಛತ್ತೀಸ್‌ಗಢದ ಬಹುಕೋಟಿ ಮದ್ಯ ಹಗರಣಲ್ಲಿ ಮಾಜಿ ಸಿಎಂ ಭೂಪೇಶ್‌ ಬಘೇಲ್‌ ಅವರ ಪುತ್ರ ಚೈತನ್ಯರಿಗೂ 200ರಿಂದ 250 ಕೋಟಿ ರು. ಲಂಚ ಸಂದಾಯವಾಗಿತ್ತು ಎಂದು ಭ್ರಷ್ಟಾಚಾರ ನಿಗ್ರಹ ದಳದ ಆರ್ಥಿಕ ಅಪರಾಧ ವಿಭಾಗ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಮಾಹಿತಿ ನೀಡಿದೆ.

ಪ್ರತಿ ಬಾಟಲ್‌ ಮದ್ಯಕ್ಕೆ ರಾಜಕಾರಣಿಗಳು, ಅಧಿಕಾರಿಗಳು, ಉದ್ಯಮಿಗಳು ಲಂಚ

ಕಳೆದ ಕಾಂಗ್ರೆಸ್‌ ಸರ್ಕಾರದ (2018-23) ಅವಧಿಯಲ್ಲಿ ಮಾರಾಟವಾದ ಪ್ರತಿ ಬಾಟಲ್‌ ಮದ್ಯಕ್ಕೆ ರಾಜಕಾರಣಿಗಳು, ಅಧಿಕಾರಿಗಳು, ಉದ್ಯಮಿಗಳು ಲಂಚ ಪಡೆದಿದ್ದರು ಹಾಗೂ ಇದರಿಂದ ರಾಜ್ಯದ ಬೊಕ್ಕಸಕ್ಕೆ 3000 ಕೋಟಿ ರು.ಗೂ ಅಧಿಕ ನಷ್ಟವಾಗಿತ್ತು ಎಂಬುದು ಆರೋಪ. ಈ ಹಗರಣದಲ್ಲಿ, ಅಂದು ಸಿಎಂ ಆಗಿದ್ದ ಬಘೇಲ್‌ ಅವರ ಪುತ್ರ ಚೈತನ್ಯ ಕೂಡ ಕೈಜೋಡಿಸಿದ್ದರು. ಅಕ್ರಮದಲ್ಲಿ ಪಾಲುದಾರರಾಗಿರುವವರ ಸಂಘಟನೆ ಮತ್ತು ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿ, ವರ್ಷಗಳ ಕಾಲ ಈ ಧಂದೆ ನಡೆಯುವಂತೆ ನೋಡಿಕೊಂಡಿದ್ದರು. ಅಧಿಕಾರಿಗಳು ಮತ್ತು ಉದ್ಯಮಿಗಳ ನಡುವೆ ಸೇತುವೆಯಂತಿದ್ದು, ಅಕ್ರಮವಾಗಿ ಸಂಗ್ರಹವಾದ ಹಣವನ್ನು ತಮ್ಮ ಸಹಚರರ ಮೂಲಕ ಹಂಚಿಕೆ ಮಾಡಿಸುತ್ತಿದ್ದರು.

ತಮ್ಮ ಕಂಪನಿಯ ಖಾತೆ ಮೂಲಕ ಪಡೆದು ಹೂಡಿಕೆ

ಇದಕ್ಕೆ ಪ್ರತಿಯಾಗಿ ಮದ್ಯ ಮಾರಾಟಗಾರರಿಂದ ಲಂಚವನ್ನು ತಮ್ಮ ಕಂಪನಿಯ ಖಾತೆ ಮೂಲಕ ಪಡೆದು, ಅದನ್ನು ರಿಯಲ್‌ ಎಸ್ಟೇಟ್‌ ಯೋಜನೆಗಳಿಗೆ ಹಾಗೂ ಹೂಡಿಕೆಗೆ ಬಳಸಿದ್ದರು. ಹೀಗೆ ಸುಮಾರು 200ರಿಂದ 250 ಕೋಟಿ ರು. ಪಡೆದಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ತೆಲಂಗಾಣ ಸಾರಿಗೆ ಅಧಿಕಾರಿ ₹100 ಕೋಟಿ ಆಸ್ತಿ ಒಡೆಯ?
ದೇಶದಲ್ಲಿ ಮತ್ತೆ 2 ಕಂಪನಿಗೆ ವಿಮಾನ ಸೇವೆಗೆ ಅನುಮತಿ