ಛತ್ತೀಸ್‌ಗಢ: ಸಚಿವನಿಂದಲೇ ವಿಧಾನಸಭೆಯಲ್ಲಿ ಸಭಾತ್ಯಾಗ!

Published : Jul 28, 2021, 09:01 AM IST
ಛತ್ತೀಸ್‌ಗಢ: ಸಚಿವನಿಂದಲೇ ವಿಧಾನಸಭೆಯಲ್ಲಿ ಸಭಾತ್ಯಾಗ!

ಸಾರಾಂಶ

* ಛತ್ತೀಸ್‌ಗಢನ ಆರೋಗ್ಯ ಮಂತ್ರಿ ಟಿ.ಎಸ್‌.ಸಿಂಗ್‌ದೇವ್‌ * ಸಚಿವನಿಂದಲೇ ವಿಧಾನಸಭೆಯಲ್ಲಿ ಸಭಾತ್ಯಾಗ * ಕಾಂಗ್ರೆಸ್‌ ಶಾಸಕರಿಂದ ಯಾವುದೇ ದೂರು ಬಂದಿಲ್ಲವಾದ್ದರಿಂದ ತನಿಖೆ ನಡೆಸಲು ಸಾಧ್ಯವಿಲ್ಲ ಎಂದ ಸ್ಪೀಕರ್‌

ರಾಯ್‌ಪುರ್‌(ಜು.28): ಛತ್ತೀಸ್‌ಗಢನ ಆರೋಗ್ಯ ಮಂತ್ರಿ ಟಿ.ಎಸ್‌.ಸಿಂಗ್‌ದೇವ್‌, ತಮ್ಮ ಮೇಲೆ ಕಾಂಗ್ರೆಸ್‌ನ ಎಂಎಲ್‌ಎ ಮಾಡಿರುವ ಆರೋಪಕ್ಕೆ ಸರ್ಕಾರ ಸರಿಯಾದ ಕ್ರಮ ತೆಗೆದುಕೊಳ್ಳಬೇಕು. ಅಲ್ಲಿಯವರೆಗೆ ಸದನದಲ್ಲಿ ಭಾಗವಹಿಸುವುದಿಲ್ಲ ಎಂದು ಸಭಾತ್ಯಾಗ ಮಾಡಿದ್ದಾರೆ.

ಆಡಳಿತ ಪಕ್ಷದ ಶಾಸಕ ಬೃಹಸ್ಪತಿ ಸಿಂಗ್‌, ಮಾಜಿ ಮುಖ್ಯಮಂತ್ರಿಯನ್ನು ಹೊಗಳಿದ್ದಕ್ಕೆ ಮೇಲೆ ಸಿಂಗ್‌ದೇವ್‌ ಅವರ ಆಜ್ಞೆಯಂತೆ ಅವರ ಬೆಂಬಲಿಗರು ದಾಳಿ ಮಾಡಿದ್ದರು ಎಂದು ಆರೋಪ ಮಾಡಿದ್ದರು. ಸದನದ ಮೊದಲ ದಿನವಾದ ಸೋಮವಾರದ ಅಧಿವೇಶನದಲ್ಲಿ ಬಿಜಿಪಿ ಶಾಸಕರು, ಈ ಆರೋಪವು ಬಹಳ ಗಂಭೀರವಾದುದು. ಸದನ ಈ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು. ಮಂಗಳವಾರವೂ ಬಿಜೆಪಿ ಶಾಸಕರ ಈ ಆಗ್ರಹ ಮುಂದುವರೆಯಿತು.

ಕಾಂಗ್ರೆಸ್‌ ಶಾಸಕರಿಂದ ಯಾವುದೇ ದೂರು ಬಂದಿಲ್ಲವಾದ್ದರಿಂದ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಸ್ಪೀಕರ್‌ ಹೇಳಿದರು. ಈ ಮಧ್ಯೆ ಎದ್ದು ನಿಂತ ಸಿಂಗ್‌ದೇವ್‌, ಈ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಸಭೆಯನ್ನು ಕೂಡ ಕರೆದಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಲಿಖಿತ ಉತ್ತರ ನೀಡುವವರೆಗೂ ಸದನದಲ್ಲಿ ಭಾಗವಹಿಸುವುದಿಲ್ಲ ಎಂದು ಹೊರ ನಡೆದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್: ಸಂಸದೆಯ ಮಾತು ವೈರಲ್
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?