ಮೈಸೂರು ವ್ಯಕ್ತಿಯಿಂದ ಛತ್ತೀಸ್‌ಗಢ ಪೊಲೀಸರಿಗೆ ಕೊರೋನಾ ವೈರಸ್‌ ಭೀತಿ!

Published : Jul 07, 2020, 03:47 PM ISTUpdated : Jul 07, 2020, 03:53 PM IST
ಮೈಸೂರು ವ್ಯಕ್ತಿಯಿಂದ ಛತ್ತೀಸ್‌ಗಢ ಪೊಲೀಸರಿಗೆ ಕೊರೋನಾ ವೈರಸ್‌ ಭೀತಿ!

ಸಾರಾಂಶ

ಮೈಸೂರು ವ್ಯಕ್ತಿಯಿಂದ ಛತ್ತೀಸ್‌ಗಢ ಪೊಲೀಸರಿಗೆ ಕೊರೋನಾ ವೈರಸ್‌ ಭೀತಿ| ಬಿಲಾಸ್‌ಪುರದ ಸಿವಿಲ್‌ ಲೈನ್ಸ್‌ ಪೊಲೀಸ್‌ ಠಾಣೆ ಸೀಲ್‌ಡೌನ್| ಪೊಲೀಸ್‌ ಸಿಬ್ಬಂದಿಯಿಂದ ಗಂಟಲು ದ್ರವದ ಮಾದರಿಯನ್ನು ಸಂಗ್ರಹ

ಬಿಲಾಸ್‌ಪುರ(ಜು.07): ಕರ್ನಾಟಕದ ಮೈಸೂರಿನಿಂದ ಬಂಧಿಸಿ ಕರೆದೊಯ್ಯಲಾಗಿದ್ದ ಅತ್ಯಾಚಾರ ಆರೋಪಿಯೊಬ್ಬನಿಗೆ ಕೊರೋನಾ ವೈರಸ್‌ ಇರುವುದು ದೃಢಪಟ್ಟಹಿನ್ನೆಲೆಯಲ್ಲಿ ಛತ್ತೀಸ್‌ಗಢದ ಬಿಲಾಸ್‌ಪುರ ಪೊಲೀಸ್‌ ಠಾಣೆಯೊಂದರ 60 ಪೊಲೀಸರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಬಿಲಾಸ್‌ಪುರದ ಸಿವಿಲ್‌ ಲೈನ್ಸ್‌ ಪೊಲೀಸ್‌ ಠಾಣೆಯನ್ನು ಸೀಲ್‌ಡೌನ್‌ ಮಾಡಲಾಗಿದ್ದು, ಅದನ್ನು ಕಂಟೇನ್ಮೆಂಟ್‌ ವಲಯ ಎಂದು ಘೋಷಿಸಲಾಗಿದೆ. ಪೊಲೀಸ್‌ ಸಿಬ್ಬಂದಿಯಿಂದ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಪ್ರಶಾಂತ್‌ ಅಗರ್ವಾಲ್‌ ತಿಳಿಸಿದ್ದಾರೆ.

ಕೇರಳದಿಂದ ವಿಮಾನದಲ್ಲಿ ನರ್ಸ್‌ಗಳ ಕರೆಸಿಕೊಂಡ ತೆಲಂಗಾಣ ಆಸ್ಪತ್ರೆಗಳು!

ಬಂಧಿತ ವ್ಯಕ್ತಿ 28 ವರ್ಷದವನಾಗಿದ್ದು, ಮೈಸೂರಿನ ಭಾಭಾ ಅಣು ಸಂಶೋಧನಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾನೆ ಎನ್ನಲಾಗಿದೆ. ಈತನ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಸಂಬಂಧ ಕಳೆದ ತಿಂಗಳು ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಲಾಸ್‌ಪುರದ ನಾಲ್ವರು ಪೊಲೀಸರ ತಂಡ ಮೈಸೂರಿಗೆ ತೆರಳಿ ಆರೋಪಿಯನ್ನು ಬಂಧಿಸಿ ಜು.4ರಂದು ಕರೆತಂದಿತ್ತು. ನ್ಯಾಯಾಲಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಪರೀಕ್ಷೆಗೆ ಒಳಪಡಿಸಿದಾಗ ಆತನಲ್ಲಿ ಕೊರೋನಾ ಸೋಂಕಿರುವುದು ಪತ್ತೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..