ರಾಹುಲ್‌ ಗಾಂಧಿ ಕುರಿತಾಗಿ ಫೇಕ್‌ ನ್ಯೂಸ್‌, ಪತ್ರಕರ್ತ ರೋಹಿತ್‌ ರಂಜನ್‌ ಬಂಧನ!

By Santosh NaikFirst Published Jul 5, 2022, 11:27 AM IST
Highlights

ನಾಟಕೀಯ ಬೆಳವಣಿಗೆಯಲ್ಲಿ ಮಂಗವಾರ ಬೆಳಗ್ಗೆ ಖಾಸಗಿ ಟಿವಿಯ ನ್ಯೂಸ್‌ ಆಂಕರ್‌ ರೋಹಿತ್ ರಂಜನ್‌ ಅವರನ್ನು ಉತ್ತರಪ್ರದೇಶದ ಅವರ ನಿವಾಸದಲ್ಲಿ ಛತ್ತೀಸ್‌ಗಢದ ಪೊಲೀಸರು ಬಂಧಿಸಿದ್ದಾರೆ. ರಾಹುಲ್‌ ಗಾಂಧಿ ವಿರುದ್ಧ ಫೇಕ್‌ ನ್ಯೂಸ್‌ ಅನ್ನು ಹರಿಬಿಟ್ಟ ಆರೋಪದಲ್ಲಿ ರೋಹಿತ್‌ ರಂಜನ್‌ ಅವರನ್ನು ಬಂಧಿಸಲಾಗಿದೆ.

ನವದೆಹಲಿ (ಜುಲೈ 5): ರಾಹುಲ್ ಗಾಂಧಿ (Rahul Gandhi) ವಿರುದ್ಧ ಸುಳ್ಳು ಸುದ್ದಿ ಹರಿಬಿಟ್ಟ ಆರೋಪದ ಮೇಲೆ ಜೀ ನ್ಯೂಸ್‌ನ ನಿರೂಪಕ ರೋಹಿತ್ ರಂಜನ್ (Rohit Ranjan) ಅವರನ್ನು ಮಂಗಳವಾರ ಬೆಳಗ್ಗೆ ನಾಟಕೀಯ ರೀತಿಯಲ್ಲಿ ಬಂಧಿಸಲಾಗಿದೆ. ರೋಹಿತ್ ಅವರ ಉತ್ತರ ಪ್ರದೇಶದ (Uttar Pradesh) ಇಂದಿರಾಪುರಂ (Indirapuram) ಮನೆಯ ಹೊರಗೆ ಬೆಳಿಗ್ಗೆ 5.30 ಕ್ಕೆ ತಲುಪಿದ ಛತ್ತೀಸ್‌ಗಢ ಪೊಲೀಸರೊಂದಿಗೆ (chhatisgarh police) ಈ ಬೆಳವಣಿಗೆ ಆರಂಭವಾಯಿತು. ಮನೆಯ ಬಾಗಿಲಲ್ಲಿ ಪೊಲೀಸರನ್ನು ನೋಡಿದ ರೋಹಿತ್ ಈ ಕುರಿತಾಗಿ ಟ್ವೀಟ್‌ ಮಾಡಿ ಉತ್ತರ ಪ್ರದೇಶ ಪೊಲೀಸರ ಸಹಾಯ ಬೇಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ  ಗಾಜಿಯಾಬಾದ್ ಪೊಲೀಸರು (Ghaziabad Police) ಸಹಾಯ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಟ್ವೀಟ್‌ ಮಾಡಿತ್ತು. ಇನ್ನೊಂದೆಡೆ, ಛತ್ತೀಸ್‌ ಗಢದ ರಾಯ್‌ಪುರ ಪೊಲೀಸರು ಕೂಡ ಆ್ಯಂಕರ್‌ಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದು, ತನಿಖೆಗೆ ಸಹಕರಿಸುವಂತೆ ಹೇಳಿದ್ದರು.

ಈ ಮಧ್ಯೆ ಗಾಜಿಯಾಬಾದ್‌ನ ಇಂದಿರಾಪುರಂನ ಪೊಲೀಸರು ರೋಹಿತ್‌ ಅವರ ಮನೆಗೆ ತಲುಪಿದ್ದಾರೆ. ರೋಹಿತ್ ಬಂಧನಕ್ಕೆ ಸಂಬಂಧಿಸಿದಂತೆ ರಾಯಪುರ ಮತ್ತು ಇಂದಿರಾಪುರಂ ಪೊಲೀಸರ ನಡುವೆ ಜಟಾಪಟಿ ನಡೆಯುವ ನಡುವೆ ನೋಯ್ಡಾ ಪೊಲೀಸರು ಇಲ್ಲಿ ಪ್ರವೇಶ ಪಡೆದಿದ್ದಾರೆ. ರೋಹಿತ್ ವಿರುದ್ಧ ಪ್ರಕರಣ ದಾಖಲಾಗಿದ್ದು, ರಾಯ್‌ಪುರ ಪೊಲೀಸರ ಮುಂದೆಯೇ ರೋಹಿತ್‌ರನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.

ನ್ಯೂಸ್‌ ಆಂಕರ್‌ ವಿರುದ್ಧ ಛತ್ತೀಸ್‌ಗಢ ಪೊಲೀಸ್‌ ಕ್ರಮದ ವಿರುದ್ಧ ವಕ್ತಾರ ಟ್ವೀಟ್‌ ಮಾಡಿದ್ದು, ಪತ್ರಕರ್ತರನ್ನು ಸರ್ಕಾರಗಳು ನಿರಂತರವಾಗಿ ಗುರಿ ಮಾಡುತ್ತಿವೆ. ಇದು ಸ್ವೀಕಾರಾರ್ಹವಲ್ಲ. ಮಹಾರಾಷ್ಟ್ರದಲ್ಲಿ ಆದ ಸ್ಥಿತಿಯಿಂದ ಇವರು ಪಾಠ ಕಲಿತಿಲ್ಲ ಎಂದು ಕಾಣುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

— Asianet Suvarna News (@AsianetNewsSN)


ನಾಟಕೀಯ ಬೆಳವಣಿಗೆಗೆ ಸಾಕ್ಷಿ: ಮಂಗಳವಾರ ಬೆಳಗ್ಗೆ 5:30ಕ್ಕೆ ರಾಯ್‌ಪುರ ಪೊಲೀಸರು ಆ್ಯಂಕರ್ ರೋಹಿತ್‌ನನ್ನು ಬಂಧಿಸಲು ಘಗಾಜಿಯಾಬಾದ್‌ಗೆ ತಲುಪಿದ್ದರು. ರೋಹಿತ್ ಗಾಜಿಯಾಬಾದ್‌ನ ಇಂದಿರಾಪುರಂ ಪ್ರದೇಶದ ನಿಯೋ ಸ್ಕಾರ್ಟಿಸ್ ಸೊಸೈಟಿಯಲ್ಲಿ ವಾಸಿಸುತ್ತಿದ್ದಾರೆ. ರೋಹಿತ್ ಅವರು ಸಂಜೆ 6:16 ಕ್ಕೆ ಈ ಕುರಿತಾಗಿ ಟ್ವೀಟ್ ಮಾಡಿದ್ದು, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಎಎಸ್ಪಿ ಗಾಜಿಯಾಬಾದ್ ಮತ್ತು ಎಡಿಜಿ ವಲಯ ಲಕ್ನೋ ಅವರನ್ನು ಟ್ಯಾಗ್‌ ಮಾಡಿ ಸಹಾಯ ಕೋರಿದ್ದರು.

ನ್ಯೂಸ್‌ ಆಂಕರ್‌ ವಿರುದ್ಧ ಛತ್ತೀಸ್‌ಗಢ ಪೊಲೀಸ್‌ ಕ್ರಮದ ವಿರುದ್ಧ ಪತ್ರಕರ್ತ ಟ್ವೀಟ್‌ ಮಾಡಿದ್ದು,
ಪತ್ರಕರ್ತರಿಗೆ ಕಿರುಕುಳ ನೀಡಲು ಕಾಂಗ್ರೆಸ್ ಮುಂದಾಗಿರುವ ವಿಧಾನ ಒಳ್ಳೆಯದಲ್ಲ. ರೋಹಿತ್ ಮತ್ತು ಝೀ ನ್ಯೂಸ್ ತಪ್ಪಿಗೆ ಕ್ಷಮೆಯಾಚಿಸಿದೆ. ಆದರೂ, ಪೊಲೀಸರ ಗೂಂಡಾಗಿರಿ ನಡೆಸಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ.

— Asianet Suvarna News (@AsianetNewsSN)

Latest Videos


ಈ ಟ್ವೀಟ್‌ಗೆ ಉತ್ತರ ನೀಡಿದ ರಾಯ್‌ಪುರ ಪೊಲೀಸರು, ಪೊಲೀಸರ ತನಿಖೆಗೆ ಸಹಕರಿಸುವಂತೆ ಹೇಳಿದ್ದು, ನಿಮ್ಮ ವಾದವನ್ನು ನ್ಯಾಯಾಲಯದಲ್ಲಿ ಮಂಡಿಸುವಂತೆ ಹೇಳಿತ್ತು. ಇದರ ನಡುವೆ, ಗಾಜಿಯಾಬಾದ್ ಪೊಲೀಸರು ಸಹ ಟ್ವೀಟ್ ಮಾಡುವ ಮೂಲಕ, ಈ ವಿಷಯವು ಗಮನಕ್ಕೆ ಬಂದಿದ್ದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ರೋಹಿತ್‌ ರಂಜನ್‌ ಟ್ವೀಟ್‌ಗೆ ಪ್ರತಿಕ್ರಿಯಿಸಿತ್ತು. ಇಂದಿರಾಪುರಂ ಪೊಲೀಸರು  6.30ರ ಸುಮಾರಿಗೆ ರೋಹಿತ್‌ನ ಮನೆಯ ಬಳಿ ಬಂದಿದ್ದರು.

ಯುಪಿ ಪೊಲೀಸರ ಅನುಮತಿಯಿಲ್ಲದೆ ಬಂಧಿಸಿದ ಬಗ್ಗೆ ರಾಯ್‌ಪುರ ಮತ್ತು ಗಾಜಿಯಾಬಾದ್ ಪೊಲೀಸರ ನಡುವೆ ಚರ್ಚೆ ಪ್ರಾರಂಭವಾಯಿತು. ನಂತರ ಇದ್ದಕ್ಕಿದ್ದಂತೆ 7:15 ಕ್ಕೆ ನೋಯ್ಡಾ ಪೊಲೀಸರು ಪ್ರವೇಶಿಸಿ ರೋಹಿತ್‌ನನ್ನು ಬಂಧಿಸಿದರು. ಆ್ಯಂಕರ್ ರೋಹಿತ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ ಎಂದು ನೋಯ್ಡಾ ಪೊಲೀಸರು ವಾದಿಸಿದ್ದಾರೆ. ಆದರೆ, ಯಾವಾಗ ಪ್ರಕರಣ ದಾಖಲಿಸಲಾಗಿದೆ ಎಂದಾಗ ಅಧಿಕಾರಿಗಳು ಉತ್ತರ ನೀಡಿಲ್ಲ. ಇಂದಿರಾಪುರಂ ಸಿಒ ಅಭಯ್ ಮಿಶ್ರಾ ಅವರು ರೋಹಿತ್ ಬಂಧನವನ್ನು ಖಚಿತಪಡಿಸಿದ್ದಾರೆ.

ಅಪ್ರಬುದ್ಧ ರಾಜಕಾರಣಿ ರಾಹುಲ್‌ ಗಾಂಧಿ ಮೆಚ್ಚಿಸಲು ಗುಲಾಮಗಿರಿ ಮಾಡುತ್ತಿರುವ ಸಿದ್ದು: ಜೋಶಿ

ಮಂಗಳವಾರ ಬೆಳಗ್ಗೆ 6.16ಕ್ಕೆ ಟ್ವೀಟ್ ಮಾಡಿದ್ದ ರೋಹಿತ್ ರಂಜನ್, ‘‘ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ ನನ್ನನ್ನು ಬಂಧಿಸಲು ಛತ್ತೀಸ್ ಗಢ ಪೊಲೀಸರು ನನ್ನ ಮನೆಯ ಹೊರಗೆ ನಿಂತಿದ್ದಾರೆ. ಇದು ಕಾನೂನಾತ್ಮಕವಾಗಿ ಸರಿಯೇ' ಎಂದು ಪ್ರಶ್ನೆ ಮಾಡಿ, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಎಎಸ್ಪಿ ಗಾಜಿಯಾಬಾದ್ ಮತ್ತು ಎಡಿಜಿ ವಲಯ ಲಕ್ನೋ ಅವರಿಗೆ ಟ್ಯಾಗ್ ಮಾಡಿದ್ದರು.

ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಹುಲ್‌ ಕಾರ್ಯತಂತ್ರ

ಏನಿದು ಪ್ರಕರಣ: ಇತ್ತೀಚೆಗೆ ರಾಹುಲ್‌ ಗಾಂಧಿ ತಮ್ಮ ಸಂಸದೀಯ ಕ್ಷೇತ್ರ ಕೇರಳದ ವಯ್ನಾಡ್‌ಗೆ ತೆರಳಿದ್ದರು. ಕೆಲ ದಿನಗಳ ಹಿಂದೆ ಎಸ್‌ಎಫ್‌ಐ ಕಾರ್ಯಕರ್ತರು ರಾಹುಲ್‌ ಗಾಂಧಿ ಅವರ ಕಚೇರಿಯನ್ನು ಧ್ವಂಸ ಮಾಡಿದ್ದರು. ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಾಹುಲ್‌ ಗಾಂಧಿ, ಈ ಘಟನೆಯನ್ನು ಮಾಡಿದವರು ಮಕ್ಕಳು ಎಂದು ಹೇಳಿದ್ದರು. ಆದರೆ, ಝೀ ನ್ಯೂಸ್‌ ಚಾನೆಲ್‌, ಇದು ರಾಹುಲ್‌ ಗಾಂಧಿ ಉದಯಪುರ ಘಟನೆಯ ಕುರಿತಾಗಿ ಹೇಳಿದ್ದ ಮಾತು ಎಂದು ಪರಿಗಣಿಸಿ ಸುದ್ದಿಯನ್ನು ಪ್ರಸಾರ ಮಾಡಿತ್ತು. ಇದರ ಬೆನ್ನಲ್ಲಿಯೇ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಾದ ಛತ್ತೀಸ್‌ಗಢ ಹಾಗೂ ರಾಜಸ್ಥಾನದಲ್ಲಿ ನಿರೂಪಕ ರೋಹಿತ್ ರಂಜನ್‌ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

click me!