
ನವದೆಹಲಿ[ಜ.04]: ಐಎನ್ಎಕ್ಸ್ ಹಾಗೂ ಏರ್ಸೆಲ್ ಮ್ಯಾಕ್ಸಿಸ್ ಹಗರಣ ಸಂಬಂಧ 100 ದಿನಗಳ ಕಾಲ ವಿಚಾರಣಾಧೀನ ಕೈದಿಯಾಗಿ ತಿಹಾರ್ ಜೈಲಿನಲ್ಲಿದ್ದ, ಹಿರಿಯ ಕಾಂಗ್ರೆಸ್ಸಿಗ ಪಿ.ಚಿದಂಬರಂಗೆ ಮತ್ತೊಂದು ಹಗರಣದ ಕಳಂಕ ಮೆತ್ತಿಕೊಳ್ಳುವ ಸಾಧ್ಯತೆ ಇದೆ. ಯುಪಿಎ ಅವಧಿಯಲ್ಲಿ ನಡೆದ ವಿಮಾನಯಾನ ಹಣಕಾಸು ಅವ್ಯವಹಾರಗಳ ಕುರಿತಂತೆ ಚಿದಂಬರಂ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ 6 ತಾಸು ವಿಚಾರಣೆಗೆ ಒಳಪಡಿಸಿದೆ.
ನಿಮಗೆ ವಾರ್ ಮಾಡುವುದು ಹೇಗೆಂದು ಹೇಳಿಕೊಟ್ಟರೆ..ರಾವತ್ ವಿರುದ್ಧ ಚಿದಂಬರಂ ವಾಗ್ದಾಳಿ!
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಪ್ರಕರಣದಡಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಚಿದಂಬರಂ ಉನ್ನತ ಮಟ್ಟದ ಸಚಿವರ ಸಮಿತಿ ಮುಖ್ಯಸ್ಥರಾಗಿದ್ದ ವೇಳೆ, ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳಿಗೆ ಸಮಯ ನಿಗದಿ ಮಾಡಿದ ವಿಷಯ, 70000 ಕೋಟಿ ರು. ವೆಚ್ಚದಲ್ಲಿ 110 ವಿಮಾನ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಇದರಿಂದಲೇ ಏರ್ಇಂಡಿಯಾ ಭಾರೀ ನಷ್ಟಕ್ಕೆ ತುತ್ತಾಗುವಂತಾಯಿತು ಎಂಬ ಆರೋಪವಿದೆ.
ಇದೇ ಪ್ರಕರಣದಲ್ಲಿ ಅಂದಿನ ವಿಮಾನಯಾನ ಖಾತೆ ಸಚಿವ ಪ್ರಫುಲ್ ಪಟೇಲ್ ಅವರನ್ನೂ ಕೆಲ ಸಮಯದ ಹಿಂದೆ ಇಡಿ ವಿಚಾರಣೆಗೆ ಒಳಪಡಿಸಿತ್ತು.
8, 7, 6.6 5.8, 5, 4.5: ಜೈಲಿನಿಂದ ಹೊರಬಂದು ಸಂಖ್ಯೆ ಎಣಿಸಿದ ಚಿದಂಬರಂ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ