850 ಕೋಟಿ ರೂ ದಿಲ್ಲಿ ಭೂ ಹಗರಣ ಬೆಳಕಿಗೆ, ಕೇಜ್ರಿವಾಲ್ ಮುಖ್ಯ ಕಾರ್ಯದರ್ಶಿ ಅಮಾನತಿಗೆ ಶಿಫಾರಸು!

Published : Nov 14, 2023, 06:26 PM IST
850 ಕೋಟಿ ರೂ ದಿಲ್ಲಿ ಭೂ ಹಗರಣ ಬೆಳಕಿಗೆ, ಕೇಜ್ರಿವಾಲ್ ಮುಖ್ಯ ಕಾರ್ಯದರ್ಶಿ ಅಮಾನತಿಗೆ ಶಿಫಾರಸು!

ಸಾರಾಂಶ

ಅಬಕಾರಿ ಹಗರಣದ ಕುಣಿಕೆ ಬಿಗಿಯಾಗುತ್ತಿರುವ ಬೆನ್ನಲ್ಲೇ ದೆಹಲಿಯಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಬರೋಬ್ಬರಿ 850 ಕೋಟಿ ರೂಪಾಯಿ ಭೂಹಗರಣ ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ಸಿಎಂ ಕೇಜ್ರಿವಾಲ್ ಮುಖ್ಯಕಾರ್ಯದರ್ಶಿ ಅಮಾನತಿಗೆ ಶಿಫಾರಸು ಮಾಡಲಾಗಿದೆ. 

ದೆಹಲಿ(ನ.14) ಅಕ್ರಮ ಹಣ ವರ್ಗಾವಣೆ ಪ್ರಕರಣ, ಅಬಕಾರಿ ನೀತಿ ಹಗರಣ ಸೇರಿದಂತೆ ದೆಹಲಿ ಆಪ್ ಸರ್ಕಾರ ಒಂದರ ಮೇಲೊಂದರಂತೆ ಹಿನ್ನಡೆ ಅನುಭವಿಸುತ್ತಿದೆ. ಉಪಮುಖ್ಯಮಂತ್ರಿ, ಸಚಿವರು, ಸಂಸದರು ಜೈಲು ಸೇರಿದ್ದಾರೆ. ಇದರ ನಡುವೆ ಇದೀಗ ಭೂ ಹಗರಣ ಬೆಳಕಿಗೆ ಬಂದಿದೆ. 850 ಕೋಟಿ ರೂಪಾಯಿ ಭೂ ಹಗರಣದಲ್ಲಿ ಇದೀಗ ದೆಹಲಿ ಮುಖ್ಯಮಂತ್ರಿ ಮುಖ್ಯ ಕಾರ್ಯದರ್ಶಿ ಹಾಗೂ ಹಿರಿಯ ಅಧಿಕಾರಿ ಶಾಮೀಲಾಗಿರುವುದು ಬಹಿರಂಗವಾಗಿದೆ. ಇದರ ಬೆನ್ನಲ್ಲೇ ಇಬ್ಬರನ್ನು ಅಮಾನತು ಮಾಡಲು ಸಚೆವ ಆತಿಶಿ ಶಿಫಾರಸು ಮಾಡಿದ್ದಾರೆ.

ದ್ವಾರಕಾ ಎಕ್ಸ್‌ಪ್ರೆಸ್ ಹೆದ್ದಾರಿಗಾಗಿ ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಭೂ ಸ್ವಾಧಿನ ಮಾಡಿತ್ತು. ಈ ವೇಳೆ ದೆಹಲಿ ಬಮ್ನೋಲಿ ಗ್ರಾಮದ ತುಂಡು ಭೂಮಿಯ ಪರಿಹಾರ ಹೆಚ್ಚಿಸುವಲ್ಲಿ ಕೇಜ್ರಿವಾಲ್ ಮುಖ್ಯಕಾರ್ಯದರ್ಸಿ ನರೇಶ್ ಕುಮಾರ್ ಹಾಗೂ ಹಿರಿಯ ಅಧಿಕಾರಿ ಅಶ್ವಾನಿ ಕುಮಾರ್ ಪ್ರಮುಖವಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಪರಿಹಾರದ ಹೆಚ್ಚುವರಿ ಹಣವನ್ನು ಕಂಪನಿಯೊಂದಕ್ಕೆ ಅಕ್ರಮವಾಗಿ ನೀಡಿದ್ದಾರೆ. ಈ ಕಂಪನಿ ಅವರ ಮುಖ್ಯಕಾರ್ಯದರ್ಶಿ ಪುತ್ರಿ ಕರಣ್ ಚವ್ಹಾಣ್ ಅವರಿಗೆ ಸೇರಿದ್ದಾಗಿದೆ. 

ಅನಾರೋಗ್ಯಕ್ಕೆ ತುತ್ತಾದ ಪತ್ನಿಯ ಭೇಟಿಗೆ ದೆಹಲಿ ಮಾಜಿ ಡಿಸಿಎಂ ಸಿಸೋಡಿಯಾಗೆ ಬರಿ 6 ಗಂಟೆ ಅವಕಾಶ!

ಹೆದ್ದಾರಿ ಅಭಿವೃದ್ಧಿಗೆ ಸ್ವಾಧೀನ ಪಡಿಸಿಕೊಂಡ ಭೂಮಿಯಲ್ಲಿ ದೆಹಲಿ ಮುಖ್ಯಕಾರ್ಯದರ್ಶಿ ಹಾಗೂ ಕೆಲ ಅಧಿಕಾರಿಗಳು ಮಧ್ಯಪ್ರವೇಶಿಸಿ ಪರಿಹಾರ ಹೆಚ್ಚುವರಿ ಹಣವನ್ನು ಪಡೆದುಕೊಂಡು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ. ರಾಷ್ಟ್ರೀ ಪ್ರಾಧಿಕಾರ 312 ಕೋಟಿ ರೂಪಾಯಿ ಪರಿಹಾರ ನೀಡಿತ್ತು. ಆದರೆ ಈ ಮೊತ್ತವನ್ನು 810 ಕೋಟಿ ರೂಪಾಯಿಗೆ ಹೆಚ್ಚಿಸಿದ ದೆಹಲಿಯ ಮುಖ್ಯಮಂತ್ರಿ ಮುಖ್ಯಕಾರ್ಯದರ್ಶಿ ಹಾಗೂ ಅಧಿಕಾರಿಗಳು, ಈ ಹೆಚ್ಚುವರಿ ಹಣವನ್ನು ತಮ್ಮ ಪುತ್ರನ ಕಂಪನಿಗೆ ವರ್ಗಾವಣೆ ಮಾಡಿದ್ದಾರೆ.

ಈ ಹಗರಣದ ಕುರಿತು ಮಾಹಿತಿ ನೀಡಿದ ದೆಹಲಿ ವಿಜಿಲೆನ್ಸ್ ಸಚಿವೆ ಅತಿಶಿ, ಭೂಮಾಲೀಕರನ್ನು ವಂಚಿಸಿರುವ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವನ್ನೂ ವಂಚಿಸಿದ್ದಾರೆ. ನರೇಶ್ ಕುಮಾರ್ ಹಾಗೂ ಅಶ್ವಾನಿ ಕುಮಾರ್ ಇಬ್ಬರನ್ನೂ ಅಮಾನತು ಮಾಡಲು ಶಿಫಾರಸು ಮಾಡಲಾಗಿದೆ ಎಂದು ಅತಿಶಿ ಹೇಳಿದ್ದಾರೆ

ದೆಹಲಿ ಆಪ್ ಸರ್ಕಾರ ಇದೀಗ ಹಗರದಲ್ಲಿ ಸುಸ್ತಾಗಿದೆ. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಜೈಲು ಸೇರಿದ್ದಾರೆ. ಜಾಮೀನಿಗಾಗಿ ನಡೆಸಿದ ಎಲ್ಲಾ ಪ್ರಯತ್ನಗಳು ವಿಫಲವಾಗಿದೆ. ಇತ್ತ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ವಿಚಾರಣೆಗೆ ಹಾಜರಾಗಲು ಇಡಿ ಸಮನ್ಸ್ ನೀಡಿ ಭಾರಿ ಸಂಚಲನ ಸೃಷ್ಟಿಸಿತ್ತು. ಇತ್ತ ಸಂಸದ ಸಂಜಯ್ ಸಿಂಗ್, ಮಾಜಿ ಸಚಿವ ಸತ್ಯೇಂದ್ರ ಜೈನ್ ಕೂಡ ಸೆರೆಮನೆವಾಸ ಅನುಭವಿಸಿದ್ದಾರೆ.

ಕೇಜ್ರಿವಾಲ್ ಬಂಧನವಾದರೆ 'ವರ್ಕ್ ಫ್ರಂ ಜೈಲ್' : ಜೈಲಲ್ಲೇ ಸಂಪುಟ ಸಭೆ, ಅಲ್ಲಿಂದಲೇ ಕೆಲಸ: ಆಪ್ ನಿರ್ಣಯ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: ನಾವು ದೇಶಕ್ಕಾಗಿ, ನೀವು ಚುನಾವಣೆಗಾಗಿ: ಬಿಜೆಪಿ. ಮೋದಿ ವಿರುದ್ದ ಪ್ರಿಯಾಂಕಾ ಗಾಂಧಿ ವಾಗ್ದಾಳಿ
18 ದಿನದಲ್ಲಿ 10 ಲಕ್ಷ ಪ್ರಯಾಣಿಕರ ಇಂಡಿಗೋ ಟಿಕೆಟ್‌ ರದ್ದು