ನಿತ್ಯಾನಂದ ಆಶ್ರಮದಿಂದ ಮಕ್ಕಳು ನಾಪತ್ತೆ, ಸಿಬಿಐ ತನಿಖೆಗೆ ಮನವಿ!

Published : Feb 05, 2020, 07:20 AM IST
ನಿತ್ಯಾನಂದ ಆಶ್ರಮದಿಂದ ಮಕ್ಕಳು ನಾಪತ್ತೆ, ಸಿಬಿಐ ತನಿಖೆಗೆ ಮನವಿ!

ಸಾರಾಂಶ

ನಿತ್ಯಾ ಆಶ್ರಮದಿಂದ ಮಕ್ಕಳು ನಾಪತ್ತೆ: ಸಿಬಿಐ ತನಿಖೆಗೆ ಮನವಿ|  ತನ್ನ ಇಬ್ಬರು ಹೆಣ್ಣು ಮಕ್ಕಳು ಕಾಣೆಯಾಗಿದ್ದು, ಅವರನ್ನು ಹುಡುಕಿಕೊಡಬೇಕು ಎಂದ ತಂದೆ

ಅಹಮದಾಬಾದ್‌[ಫೆ.05]: ಬಿಡದಿಯಲ್ಲಿ ಆಶ್ರಮ ಹೊಂದಿರುವ ವಿವಾದಿತ ಸ್ವಾಮೀಜಿ ನಿತ್ಯಾನಂದನ ಆಶ್ರಮದಿಂದಲೇ ತನ್ನ ಇಬ್ಬರು ಹೆಣ್ಣು ಮಕ್ಕಳು ಕಾಣೆಯಾಗಿದ್ದು, ಅವರನ್ನು ಹುಡುಕಿಕೊಡಬೇಕು ಎಂದು ಕೋರಿದ್ದ ಜನಾರ್ಧನ ಶರ್ಮಾ ಇದೀಗ, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂಬ ಬೇಡಿಕೆಯಿಟ್ಟಿದ್ದಾರೆ.

ನಿತ್ಯಾನಂದ ಆಶ್ರಮದಿಂದ ಕಾಣೆಯಾದ ಲೋಪಮುದ್ರ ಶರ್ಮಾ(21) ಹಾಗೂ ನಂದಿತಾ ಶರ್ಮಾ(18) ತಂದೆ ಜನಾರ್ದನ ಶರ್ಮಾ ಅವರು ಈ ಸಂಬಂಧ ಗುಜರಾತ್‌ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಈ ಕುರಿತಾದ ಅರ್ಜಿಯನ್ನು ಗುಜರಾತ್‌ ಉಚ್ಚ ನ್ಯಾಯಾಲಯ ಮುಂದಿನ ವಾರ ವಿಚಾರಣೆ ಕೈಗೊಳ್ಳುವ ಸಾಧ್ಯತೆಯಿದೆ.

ಕಾಣೆಯಾದ ತಮ್ಮ ಇಬ್ಬರು ಹೆಣ್ಣು ಮಕ್ಕಳು ಹಾಗೂ ಪ್ರಮುಖ ಆರೋಪಿ ನಿತ್ಯಾನಂದ ಭಾರತದಲ್ಲೇ ಇಲ್ಲ. ಹೀಗಾಗಿ, ಅವರ ಪತ್ತೆ ಸ್ಥಳೀಯ ಪೊಲೀಸರಿಗೆ ದುಸ್ತರವಾಗುವ ಸಾಧ್ಯತೆಯಿದೆ. ಹೀಗಾಗಿ, ಇಂಟರ್‌ಪೋಲ್‌ ಜೊತೆ ಸಹಕಾರ ಸಾಧಿಸುವ ಸಿಬಿಐಗೆ ಈ ಪ್ರಕರಣದ ತನಿಖೆಯನ್ನು ವಹಿಸಬೇಕು ಎಂದು ಹೈಕೋರ್ಟ್‌ಗೆ ಸಲ್ಲಿಸಲಾದ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ