
ಬೀಜಿಂಗ್*(ಡಿ.11): ತ್ವೇಷಮಯ ಪರಿಸ್ಥಿತಿ ಮುಂದುವರಿದಿರುವ ಪೂರ್ವ ಲಡಾಖ್ನ ಪ್ಯಾಂಗೋಂಗ್ ಸರೋವರದ ದಕ್ಷಿಣ ದಂಡೆಯಲ್ಲಿ ಚೀನಾ ಯೋಧನನ್ನು ಭಾರತೀಯ ಸೇನಾ ಪಡೆಗಳು ಸೆರೆ ಹಿಡಿದ ಬೆನ್ನಲ್ಲೇ, ಆತನನ್ನು ಬೇಗ ವಾಪಸ್ ಕಳುಹಿಸುವಂತೆ ಭಾರತಕ್ಕೆ ಚೀನಾ ತಾಕೀತು ಮಾಡಿದೆ. ಅಲ್ಲದೆ ತನ್ನ ಯೋಧ ನುಸುಳಿಲ್ಲ, ಆತ ತನ್ನ ಭೂಭಾಗದಿಂದ ನಾಪತ್ತೆಯಾಗಿದ್ದಾನೆ ಎಂದು ಹೊಸ ವರಸೆ ತೆಗೆದಿದೆ.
ಶುಕ್ರವಾರ ಸೈನಿಕ ನಾಪತ್ತೆಯಾಗಿದ್ದ. ಈ ವಿಚಾರವನ್ನು ಚೀನಾದ ಯೋಧರು ಭಾರತದ ಗಮನಕ್ಕೆ ತಂದರು. ಆದರೆ ಆತ ತನ್ನ ಬದಿಯಲ್ಲಿ ಪತ್ತೆಯಾಗಿದ್ದಾನೆ, ಹಿರಿಯ ಅಧಿಕಾರಿಗಳಿಂದ ಸೂಚನೆ ಸಿಕ್ಕ ಬಳಿಕ ಹಸ್ತಾಂತರ ಮಾಡುತ್ತೇವೆ ಎಂದು ಭಾರತೀಯ ಯೋಧರು ಹೇಳುತ್ತಿದ್ದಾರೆ ಎಂದು ಚೀನಾ ಮಿಲಿಟಿರಿಯ ಅಧಿಕೃತ ವೆಬ್ಸೈಟ್ ಆಗಿರುವ ‘ದ ಚೀನಾ ಮಿಲಿಟರಿ ಆನ್ಲೈನ್’ ಹೇಳಿಕೊಂಡಿದೆ.
ಭಾರತೀಯ ಅಧಿಕಾರಿಗಳು ಈ ಕೂಡಲೇ ಯೋಧನನ್ನು ತವರಿಗೆ ವಾಪಸ್ ಕಳುಹಿಸಬೇಕು. ಗಡಿ ಪ್ರದೇಶದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಸಂಯುಕ್ತವಾಗಿ ನಿರ್ವಹಿಸಬೇಕು ಎಂಬ ಉಪದೇಶವನ್ನು ಕೂಡ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ