ಲಡಾಖ್‌ನಲ್ಲಿ ಭಾರತ, ಚೀನಾ ಘರ್ಷಣೆ: ಲೋಕಸಭೆಯಲ್ಲಿ ಕಾರಣ ಬಿಚ್ಚಿಟ್ಟ ರಕ್ಷಣಾ ಸಚಿವ!

Published : Sep 15, 2020, 06:36 PM ISTUpdated : Sep 15, 2020, 06:43 PM IST
ಲಡಾಖ್‌ನಲ್ಲಿ ಭಾರತ, ಚೀನಾ ಘರ್ಷಣೆ: ಲೋಕಸಭೆಯಲ್ಲಿ ಕಾರಣ ಬಿಚ್ಚಿಟ್ಟ ರಕ್ಷಣಾ ಸಚಿವ!

ಸಾರಾಂಶ

ಲೋಕಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಷಣ| ಭಾರತ, ಚೀನಾ ನಡುವಿನ ಸಮರಕ್ಕೇನು ಕಾರಣ ಎಂದು ಬಹಿರಂಗ| ಯೋಧರ ತ್ಯಾಗಕ್ಕೆ ರಾಜನಾಥ್ ಸಿಂಗ್ ನಮನ

ನವದೆಹಲಿ(ಸೆ.15): ಲಡಾಖ್‌ನಲ್ಲಿ ಚೀನಾ ಹಾಗೂ ಭಾರತ ನಡುವೆ ಘರ್ಷಣೆ ಮುಂದುವರೆದಿದ್ದು, ಮಹತ್ತರ ಬೆಳವಣಿಗೆಗಳು ನಡೆದಿವೆ. ಈ ಸಂಘರ್ಷದ ಬಗ್ಗೆ ಲೋಸಕಭೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಪೂರ್ಣ ಮಾಹಿತಿ ನೀಡಿದ್ದು, ಭಾರತ-ಚೀನಾ ನಡುವಿನ ವಾಸ್ತವ ಗಡಿ ನಿಯಂತ್ರಣ ರೇಖೆ(ಎಲ್‌ಎಸಿ) ಕುರಿತು ಭಾರತ ಹಾಗೂ ಚೀನಾದ ಗ್ರಹಿಕೆಗಳು ಪರಸ್ಪರ ಬೇರೆ ಬೇರೆಯಾಗಿವೆ. ಇದೇ ಉಭಯ ರಾಷ್ಟ್ರಗಳ ನಡುವಿನ ವಿವಾದಕ್ಕೆ ಕಾರಣ ಎಂದಿದ್ದಾರೆ.

ರಾಜನಾಥ್ ಸಿಂಗ್ ಭಾಷಣದ ಪ್ರಮುಖ ಅಂಶಗಳು

* ಪೂರ್ವ ಲಡಾಖ್‌ ಗಡಿಯಲ್ಲಿ ಚೀನಾ ಹೆಚ್ಚುವರಿ ಸೇನೆ ನಿಯೋಜನೆ ಮಾಡಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿದೆ‌. ಈ ಪರಿಸ್ಥಿತಿಯನ್ನು ನಿಭಾಯಸಿಲು ಭಾರತೀಯ ಸೇನೆ ಸಮರ್ಥವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

* ಭಾರತ ಚೀನಾ ಗಡಿಯಲ್ಲಿ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿ ಸಂಬಂಧ ಲೋಕಸಭೆಗೆ ಇಂದು ರಾಜನಾಥ್ ಸಿಂಗ್ ಪ್ರತಿಕ್ರಿಯೆ ನೀಡಿದರು‌. 

* ಪಾಂಗಾಂಗ್ ತ್ಸೊ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಗಳು, ಗೊಗ್ರಾ ಮತ್ತು ಪೂರ್ವ ಲಡಾಕ್ ಘರ್ಷಣೆ ಕೇಂದ್ರಗಳಾಗಿವೆ. 

* ಇದಕ್ಕೆ ಪ್ರತ್ಯುತ್ತರ ನೀಡಲು ಭಾರತೀಯ ಸೇನೆಯನ್ನು ನಿಯೋಜನೆ ಮಾಡಲಾಗಿದೆ.

* ಹಳೆ ಒಪ್ಪಂದವನ್ನು ಉಲ್ಲಂಘಿಸಿ, ಜೂನ್ 15 ರಂದು ಗಾಲ್ವಾನ್‌ನಲ್ಲಿ ಚೀನಾವು ಹಿಂಸಾತ್ಮಕ ಸಂಘರ್ಷದ ಪರಿಸ್ಥಿತಿಯನ್ನು ಸೃಷ್ಟಿಸಿತು. ನಮ್ಮ ಧೈರ್ಯಶಾಲಿ ಸೈನಿಕರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದರು. 

* ಈ ವೇಳೆ ಚೀನಾದ ಕಡೆಯವರಿಗೆ ಹೆಚ್ಚಿನ ಹಾನಿಯುಂಟು ಮಾಡಿ ನಮ್ಮ ಗಡಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

* ಗಡಿಯ ವಿಚಾರ ನಿಭಾಯಿಸಲು ಕೇಂದ್ರ ಸರ್ಕಾರ ಬದ್ದವಾಗಿದೆ. ಎರಡು ದೇಶಗಳು ಮಿಲಿಟರಿ ಮತ್ತು ರಾಜತಾಂತ್ರಿಕ ಮಾತುಕತೆ ನಡೆಸುತ್ತಿವೆ. 

* ಚೀನಾ ರಕ್ಷಣಾ ಸಚಿವರ ಭೇಟಿ ವೇಳೆ ನಮ್ಮ ಸೇನೆ ಗಡಿ ನಿರ್ವಹಣೆ ವಿಚಾರದಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಂಡಿದೆ ಎಂದು ತಿಳಿಸಿದೆ. ಈ ವೇಳೆ ಭಾರತ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆ ರಕ್ಷಿಸುವ ಸಂಕಲ್ಪದ ಬಗ್ಗೆಯೂ ಪ್ರಸ್ತಾಪಿಸಿದೆ.

* ಗಡಿಯಲ್ಲಿ ವಿಚಾರಗಳಲ್ಲಿ‌ ನಿರೀಕ್ಷಿತ ಮಟ್ಟದಲ್ಲಿ ಪರಿಹಾರ ದೊರಕಿಲ್ಲ ಭಾರತದ ಬೇಡಿಕೆಗಳನ್ನು ಚೀನಾ ಒಪ್ಪಿಕೊಂಡಿಲ್ಲ, ಅಗಸ್ಟ್ 29, 30ರ ರಾತ್ರಿ ಯಥಾಸ್ಥಿತಿ ಉಲ್ಲಂಘಿಸುವ ಪ್ರಯತ್ನ ಮಾಡಿತ್ತು‌. 

* ಅದನ್ನು ತಡೆಗಟ್ಟುವ ಕೆಲಸವನ್ನು ನಮ್ಮ ಸೇನೆ ಮಾಡಿದೆ. ಈ ದಾಳಿ ಮಾಡುವ ಮೂಲಕ ಚೀನಾ ಹಳೆ ಒಪ್ಪಂದಗಳನ್ನು ಉಲ್ಲಂಘಿಸಿದೆ ಎಂದು ರಾಜನಾಥ್ ಸಿಂಗ್ ಹೇಳಿದರು.

* ಸಂಕಷ್ಟದ ವೇಳೆಯಲ್ಲಿ ನಮ್ಮ ಸೈನಿಕರಲ್ಲಿ ಉತ್ಸಾಹ ಕುಂದಿಲ್ಲ, 0 ಡಿಗ್ರಿ ವಾತಾವರಣದಲ್ಲೂ ಎಲ್ಲ ಹಂತಕ್ಕೂ ತಯರಾಗಿದ್ದಾರೆ. 

* ಪ್ರಧಾನಿ ನರೇಂದ್ರ ಮೋದಿ ಗಡಿ ಭೇಟಿ ನೀಡಿದ್ದರು. ಈ ವೇಳೆ ಇಡೀ ದೇಶದ ಜನರು, ಸೈನಿಕರ ಜೊತೆಗಿದ್ದಾರೆ ಎನ್ನುವ ಸಂದೇಶ ಪ್ರಧಾನಿ ಸಾರಿದ್ದಾರೆ. 

* ಪ್ರಧಾನಿ ಭೇಟಿ ಬಳಿಕ ಸೈನಿಕರಲ್ಲಿ ಹುಮ್ಮಸ್ಸು ದುಪ್ಪಟ್ಟಾಗಿದೆ ಜೀವದ ಹಂಗು ತೊರೆದು ದೇಶದ ಸೇವೆ ಮಾಡುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!