ಸದ್ದಿಲ್ಲದೆ ಚೀನಾದ ಮೇಲೆ ಕೇಂದ್ರದಿಂದ ಮತ್ತೊಂದು ಗದಾಪ್ರಹಾರ

Published : Jul 01, 2020, 11:08 PM ISTUpdated : Jul 01, 2020, 11:12 PM IST
ಸದ್ದಿಲ್ಲದೆ ಚೀನಾದ ಮೇಲೆ ಕೇಂದ್ರದಿಂದ ಮತ್ತೊಂದು ಗದಾಪ್ರಹಾರ

ಸಾರಾಂಶ

ಕೇಂದ್ರದಿಂದ ಚೀನಾದ ಮೇಲೆ ಮತ್ತೊಂದು ಪ್ರಹಾರ/ ಹೆದ್ದಾರಿ ಯೋಜನೆಗಳಲ್ಲಿ ಚೀನಾಕ್ಕೆ ಪ್ರವೇಶ ಇಲ್ಲ/ ಸಣ್ಣ ಕೈಗಾರಿಕೆಯಲ್ಲಿಯೂ ಚೀನಾ ಹೂಡಿಕೆಗೆ ನೋ

ನವದೆಹಲಿ(ಜು. 01) ಭಾರತದ  ಗಡಿಯಲ್ಲಿ ಚೀನಾ ಸಂಘರ್ಷ ಮಾಡಿದ ನಂತರ ಕೇಂದ್ರ ಸರ್ಕಾರ ಸದ್ದಿಲ್ಲದೆ ಒಂದೊಂದೆ ಏಟುಗಳನ್ನು ನೀಡುತ್ತಾ ಬಂದಿದೆ. ಮೊದಲು ಪ್ರಮುಖ ರೈಲ್ವೆ ಯೋಜನೆಗಳಿಂದ ಮುಕ್ತಿ ನಂತರ ಚೀನಾ ಅಪ್ಲಿಕೇಶನ್ ಬ್ಯಾನ್.. ಇದೀಗ ಮತ್ತೊಂದು ಹೊಡೆತ ನೀಡಿದೆ.

ಜಂಟಿ ಉದ್ಯಮಗಳು ಸೇರಿದಂತೆ  ಭಾರತದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಲ್ಲಿ ಭಾಗವಹಿಸಲು ಚೀನಾ ಕಂಪನಿಗಳಿಗೆ ಭಾರತ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ  ಸಾರಿಗೆ ಸಚಿವ ನಿತಿನ್ ಗಡ್ಕರಿ ಸ್ಷಷ್ಟವಾಗಿ ಹೇಳಿದ್ದಾರೆ.

ಕಳ್ಳನಿಗೆ ಸುಳ್ಳನ ಸಾಕ್ಷಿ, ಕುತಂತ್ರಿ ಪಾಕ್ ಬೆಂಬಲಕ್ಕೆ ನರಿಬುದ್ಧಿ ಚೀನಾ

ಯಾವ ತರಹದ ಹೂಡಿಕೆಗೂ ಚೀನಾ ಕಂಪನಿಗಳ ಪ್ರವೇಶಕ್ಕೆ ಅವಕಾಶ ಇಲ್ಲ ಎಂದು ಗಡ್ಕರಿ ತಿಳಿಸಿದ್ದಾರೆ.  ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳಲ್ಲಿಯೂ ಚೀನಾ ಹೂಡಿಕೆ ವಂಚಿತವಾಗಲಿದೆ.

ಗಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರು 20 ಮಂದಿ ಭಾರತೀಯ ಯೋಧರನ್ನು ಹತ್ಯೆ ಮಾಡಿದ ಬಳಿಕ ಒಂದೊಂದೆ ಬೆಳವಣಿಗೆ ನಡೆಯುತ್ತಿದೆ.   5 ಜಿ ಸೇವೆಯಿಂದಲೂ ಚೀನಾ ಹೊರಗಿಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ.  ಮುಂದೆ ಏನು ಮಾಡಬೇಕು ಎಂಬುದಕ್ಕೆ ಇಲಾಖಾ ಮಟ್ಟೆದಲ್ಲಿ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಗಡ್ಕರಿ ತಿಳಿಸಿದ್ದಾರೆ. 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭಾರಿ ಸದ್ದು ಮಾಡ್ತಿದೆ ಪುಟಿನ್​ ತಂದ ಸೂಟ್​ಕೇಟ್: ಅದರ ಹಿಂದಿದೆ ಊಹೆಗೆ ನಿಲುಕದ ವಿಚಿತ್ರ ಸ್ಟೋರಿ! ಏನಿದೆ ಅದರಲ್ಲಿ?
Indigo Crisis: ಮಗಳಿಗೆ ರಕ್ತ ಸೋರ್ತಿದೆ, ಸ್ಯಾನಿಟರಿ ಪ್ಯಾಡ್​ ಕೊಡಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ತಂದೆಯ ಕಣ್ಣೀರು